ಬ್ರೇಕಿಂಗ್ ನ್ಯೂಸ್
01-09-23 05:11 pm Mangalore Correspondent ಕ್ರೈಂ
ಉಳ್ಳಾಲ, ಸೆ.1: ನರಿಂಗಾನ ಗ್ರಾಮದ ಮೊಂಟೆಪದವಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಕಿಟಕಿಯ ಸಲಾಕೆ ಮತ್ತು ಬಾಗಿಲು ಮುರಿದು ಕನ್ನ ಹಾಕಿದ ಕಳ್ಳರು 15 ಸಾವಿರ ನಗದು, ಎರಡು ಲ್ಯಾಪ್ ಟಾಪ್ ಮತ್ತು ತನಿಖೆಯ ಜಾಡು ತಪ್ಪಿಸಲು ಸಿಸಿಟಿವಿಯ ಮೂರು ಡಿವಿಆರ್ ಗಳನ್ನೇ ಕದ್ದೊಯ್ದಿದ್ದಾರೆ.
ಕಾಲೇಜು ಹಾಗೂ ಪ್ರೌಢಶಾಲೆ ಕಟ್ಟಡದ ಆವರಣದಲ್ಲಿ ಕಾಲೇಜು ಪ್ರಿನ್ಸಿಪಾಲ್, ಪ್ರೌಢಶಾಲೆ ವೈಸ್ ಪ್ರಿನ್ಸಿಪಾಲ್ ಕಚೇರಿ ಇದ್ದು ಎರಡೂ ಕೊಠಡಿಗಳಿಗೆ ಕಳ್ಳರು ನಿನ್ನೆ ರಾತ್ರಿ ಕನ್ನ ಹಾಕಿದ್ದಾರೆ. ಕಾಲೇಜಿನ ಪ್ರಿನ್ಸಿಪಾಲ್ ಕಚೇರಿಯ ಕಿಟಕಿಯ ಸಲಾಕೆ ಮುರಿಯಲು ಕಳ್ಳರು ವಿಫಲರಾಗಿದ್ದು ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ್ದಾರೆ. ಒಳಗಿದ್ದ ಮೂರು ಕಪಾಟನ್ನು ಮುರಿದು ದಾಖಲೆ ಪತ್ರಗಳನ್ನ ತಡಕಾಡಿ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಕಪಾಟಿನಲ್ಲಿದ್ದ 15 ಸಾವಿರ ರೂಪಾಯಿ ನಗದು ಎಗರಿಸಿದ ಚಾಣಾಕ್ಷ ಕಳ್ಳರು ಮೂರು ಸ್ಮಾರ್ಟ್ ಫೋನ್ ಗಳನ್ನ ಅಲ್ಲೇ ಬಿಟ್ಟು ಒಂದು ಡಿವಿಆರ್ ಕದ್ದೊಯ್ದಿದ್ದಾರೆ. ಕಾಲೇಜು ಸ್ಟಾಫ್ ರೂಂಗೂ ಕಳ್ಳರು ನುಗ್ಗಿದ್ದು ಅಲ್ಲಿ ಏನೂ ಸಿಕ್ಕಿಲ್ಲ.
ಹೈಸ್ಕೂಲ್ ವೈಸ್ ಪ್ರಿನ್ಸಿಪಾಲ್ ಕೊಠಡಿಯ ಕಿಟಕಿಯ ಸಲಾಕೆ ಮುರಿದು ಒಳನುಗ್ಗಿದ ಕಳ್ಳರು ಎರಡು ಲ್ಯಾಪ್ ಟ್ಯಾಪ್ ,ಚಿಲ್ಲರೆ ನಗದು ಮತ್ತು ಎರಡು ಡಿವಿಆರ್ ಗಳನ್ನ ಕದ್ದೊಯ್ದಿದ್ದಾರೆ.


ಕಬಾಟುಗಳನ್ನ ತಡಕಾಡಿ ಅಮೂಲ್ಯ ದಾಖಲೆ ಪತ್ರಗಳನ್ನೆಲ್ಲ ನೆಲಕ್ಕೆಸೆದು ಹೋಗಿದ್ದಾರೆ. ಇಂದು ಬೆಳಗ್ಗೆ ಶಾಲೆಗೆ ಬಂದ ಶಿಕ್ಷಕರು, ವಿದ್ಯಾರ್ಥಿಗಳಿಗೆ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದ್ದು ತಕ್ಷಣವೇ ಕೊಣಾಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು, ಶ್ವಾನದಳ, ಫೋರೆನ್ಸಿಕ್ ತಜ್ಞರು ಪರಿಶೀಲನೆ ನಡೆಸಿದ್ದು, ಚಾಲಾಕಿ ಕಳ್ಳರು ಡಿವಿಆರ್ ಹೊತ್ತೊಯ್ದಿರುವುದರಿಂದ ಸಮೀಪದ ಅಂಗಡಿಗಳಲ್ಲಿ ಸಿಸಿಟಿವಿ ಫೂಟೇಜ್ ಪರಿಶೀಲಿಸುತ್ತಿದ್ದಾರೆ.
Mangalore Robbers enter Naringana karnataka public school, flee with cash and laptop.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am