ಬ್ರೇಕಿಂಗ್ ನ್ಯೂಸ್
02-09-23 11:30 am HK News Desk ಕ್ರೈಂ
ಜೈಪುರ್, ಸೆ.2: ಪತ್ನಿಗೆ ಆಕೆಯ ಪತಿ ಹಾಗೂ ಕುಟುಂಬಸ್ಥರು ಥಳಿಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಘಟನೆ ರಾಜಸ್ಥಾನದ ಪ್ರತಾಪ್ಗಢ ಜಿಲ್ಲೆಯಲ್ಲಿ ನಡೆದಿದೆ.
ಮಹಿಳೆಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಮಹಿಳೆಯ ಪತಿ ಮಹಿಳೆಯನ್ನು ವಿವಸ್ತ್ರಗೊಳಿಸುತ್ತಿರುವುದು ಹಾಗೂ ಹಲ್ಲೆ ನಡೆಸುತ್ತಿರುವುದು ಸೆರೆಯಾಗಿದೆ. ಈ ವೇಳೆ ಆಕೆ ಸಹಾಯಕ್ಕಾಗಿ ಕಿರುಚಾಡಿದ್ದಾಳೆ.
ಮಹಿಳೆ ಮನೆ ತೊರೆದು ಮತ್ತೊಬ್ಬ ವ್ಯಕ್ತಿಯೊಂದಿಗೆ ವಾಸವಾಗಿದ್ದಳು ಎನ್ನಲಾಗಿದೆ. ಇದರಿಂದ ಕೋಪಗೊಂಡ ಮಹಿಳೆಯ ಪತಿ ಆಕೆಯನ್ನು ಅಪಹರಿಸಿಕೊಂಡು ಬಂದಿದ್ದ. ಬಳಿಕ ಆಕೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳನ್ನು ಬಂಧಿಸಲು ಆರು ತಂಡಗಳನ್ನು ರಚಿಸಲಾಗಿದೆ. ಪ್ರತಾಪಗಢದ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಘಟನೆಯನ್ನು ಖಂಡಿಸಿದ್ದಾರೆ. ಅಪರಾಧ ವಿಭಾಗದ ಎಡಿಜಿ ಅವರನ್ನು ಸ್ಥಳಕ್ಕೆ ಕಳುಹಿಸಿ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಸುಸಂಸ್ಕೃತ ಸಮಾಜದಲ್ಲಿ ಇಂತಹವರಿಗೆ ಜಾಗವಿಲ್ಲ. ಆದಷ್ಟು ಬೇಗ ಈ ಕೃತ್ಯ ಎಸಗಿದವರನ್ನು ಕಟಕಟೆಯಲ್ಲಿ ನಿಲ್ಲಿಸಿ ವಿಚಾರಣೆ ನಡೆಸಲಾಗುವುದು. ಆದಷ್ಟು ಬೇಗ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಟ್ವಿಟ್ಟರ್ನಲ್ಲಿ ಹೇಳಿಕೊಂಡಿದ್ದಾರೆ.
Three people were held by the police after a tribal woman was allegedly beaten and paraded naked in Rajasthan's Pratapgarh district, said the police on Saturday. District Superintendent of Police (SP) Amit Kumar confirmed the information. Along with the woman's husband, two other accused were arrested.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am