ಬ್ರೇಕಿಂಗ್ ನ್ಯೂಸ್
04-09-23 11:18 am Mangalore Correspondent ಕ್ರೈಂ
ಮಂಗಳೂರು, ಸೆ.4: ಯುವಕನಿಗೆ ಚೂರಿ ಇರಿದು ಪರಾರಿಯಾಗಿದ್ದ ಪ್ರಕರಣದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಸುರತ್ಕಲ್ ಪೊಲೀಸರು ಕೆಲವೇ ಗಂಟೆಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ಕಳವಾರಿನಲ್ಲಿ ನಿನ್ನೆ ರಾತ್ರಿ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್ (23) ಎಂಬಾತನಿಗೆ ಚೂರಿ ಇರಿತ ಆಗಿತ್ತು. ಪ್ರಕರಣ ಸಂಬಂಧಿಸಿ ಕಳವಾರು ನಿವಾಸಿಗಳಾದ ಪ್ರಶಾಂತ್ (28), ಧನರಾಜ್ (23) ಮತ್ತು ಯಜ್ಞೆಶ್ (22) ಎಂಬವರನ್ನು ಬಂಧಿಸಲಾಗಿದೆ.
ಆಗಸ್ಟ್ 31ರಂದು ನಡೆದ ಗಲಾಟೆ ಬಗ್ಗೆ ಮಾತುಕತೆಗೆಂದು ಇಬ್ಬರನ್ನು ಕರೆದಿದ್ದು ಅಬ್ದುಲ್ ಸಫ್ವಾನ್ ಮತ್ತು ಮೊಹಮ್ಮದ್ ಸಫ್ವಾನ್ ಬೈಕಿನಲ್ಲಿ ಬರುತ್ತಿದ್ದಾಗಲೇ ಎರಡು ಬೈಕ್ ಗಳಲ್ಲಿ ಬಂದಿದ್ದ ಐದಾರು ಮಂದಿ ತಡೆದು ಹಲ್ಲೆ ನಡೆಸಿದ್ದರು. ಅಬ್ದುಲ್ ಸಫ್ವಾನ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಬಳಿಕ ಸ್ಥಳದಲ್ಲಿ ಜನ ಸೇರುತ್ತಿದ್ದಾಗ ಆರೋಪಿಗಳು ಪರಾರಿಯಾಗಿದ್ದರು. ಸಫ್ವಾನ್ ಅವರ ಕೈ , ತೋಳು ಹಾಗೂ ಬೆನ್ನಿಗೆ ಚೂರಿಯಿಂದ ಇರಿದ ಗಾಯಗಳಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಯಿಂದಾಗಿ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದ ಸುರತ್ಕಲ್ ಠಾಣೆ ಪೊಲೀಸರು ರಾತ್ರಿಯೇ ಕಾರ್ಯಾಚರಣೆ ನಡೆಸಿದ್ದಾರೆ. ಹಲವರನ್ನು ವಶಕ್ಕೆ ಪಡೆದಿದ್ದು ಮೂವರನ್ನು ಬಂಧಿಸಿದ್ದಾಗಿ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪುನೀತ್, ಬಬ್ಬು ಗಣೇಶ್ ಸೇರಿದಂತೆ ಹಲವರ ವಿರುದ್ಧ ಕೊಲೆಯತ್ನ, ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಾಗಿದೆ.
Surathkal stabbing case, three arrested in a quick action by Mangalore Police. The arrested are Prashanth, Dhanraj and Yajnesh. A swift action taken by Mangalore Police commissioner Kuldeep Kumar Jain.
08-05-24 04:37 pm
Bangalore Correspondent
C P Yogeshwara slams Dk Shivakumar: ಬಾಲ್ಯದಲ್ಲ...
08-05-24 04:28 pm
ಉಪ್ಪು ತಿಂದವನು ನೀರು ಕುಡಿಬೇಕು ಎಂದವರು ಈಗ ಯಾಕೆ ಉರ...
08-05-24 01:03 pm
DK Shivakumar, HD Kumarasway, Prajwal case:...
07-05-24 09:11 pm
Lok Sabha Elections 2024, Uttar Karnataka Vot...
07-05-24 07:11 pm
08-05-24 11:59 am
HK News Desk
ಹೈದರಾಬಾದ್ ; ಭಾರೀ ಮಳೆಗೆ ಗೋಡೆ ಕುಸಿತ, 4 ವರ್ಷದ ಮಗ...
08-05-24 10:44 am
Cyber crime, gold biscut: ಸೈಬರ್ ವಂಚಕನಿಗೆ ಸೇರಿ...
07-05-24 10:26 pm
Solapur Lok Sabha Constituency, Maharashtra,...
07-05-24 08:38 pm
Ram Mandir, Rahul Gandhi, Acharya Pramod Kris...
07-05-24 05:16 pm
08-05-24 10:48 pm
Mangalore Correspondent
Mangalore Vasantha Bangera death: ವಸಂತ ಬಂಗೇರ...
08-05-24 10:37 pm
Explosion at firecracker: ಕಾರ್ಕಳ ; ಸಿಡಿಮದ್ದು...
08-05-24 08:44 pm
Mangalore suicide, College student: ಬಿಇ ಇಂಜಿನ...
08-05-24 08:11 pm
Congress Vasantha Bangera death: ಬೆಳ್ತಂಗಡಿಯ ಹ...
08-05-24 06:19 pm
08-05-24 04:35 pm
Bengaluru Correspondent
ಹಲ್ಲಿನ ಚಿಕಿತ್ಸೆಗೆ ಬಂದು ಮೆಡಿಕಲ್ ಕಾಲೇಜಿನ ಟಾಯ್ಲೆ...
08-05-24 11:33 am
ಆನ್ಲೈನ್ ಗೇಮಿಂಗ್ ಗಾಗಿ 2 ಸಾವಿರ ರೂ. ಸಾಲ, ದುಡ್ಡ...
07-05-24 10:03 pm
Bangalore Cyber crime: ಸ್ಟಾಕ್ ಮಾರ್ಕೆಟ್ ಹೂಡಿಕೆ...
07-05-24 09:48 pm
Bangalore crime, Robbery: ಊರಿಗೆ ಹೋದ್ಲು ಅಕ್ಕ ;...
07-05-24 02:57 pm