ಬ್ರೇಕಿಂಗ್ ನ್ಯೂಸ್
04-09-23 11:18 am Mangalore Correspondent ಕ್ರೈಂ
ಮಂಗಳೂರು, ಸೆ.4: ಯುವಕನಿಗೆ ಚೂರಿ ಇರಿದು ಪರಾರಿಯಾಗಿದ್ದ ಪ್ರಕರಣದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಸುರತ್ಕಲ್ ಪೊಲೀಸರು ಕೆಲವೇ ಗಂಟೆಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ಕಳವಾರಿನಲ್ಲಿ ನಿನ್ನೆ ರಾತ್ರಿ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್ (23) ಎಂಬಾತನಿಗೆ ಚೂರಿ ಇರಿತ ಆಗಿತ್ತು. ಪ್ರಕರಣ ಸಂಬಂಧಿಸಿ ಕಳವಾರು ನಿವಾಸಿಗಳಾದ ಪ್ರಶಾಂತ್ (28), ಧನರಾಜ್ (23) ಮತ್ತು ಯಜ್ಞೆಶ್ (22) ಎಂಬವರನ್ನು ಬಂಧಿಸಲಾಗಿದೆ.

ಆಗಸ್ಟ್ 31ರಂದು ನಡೆದ ಗಲಾಟೆ ಬಗ್ಗೆ ಮಾತುಕತೆಗೆಂದು ಇಬ್ಬರನ್ನು ಕರೆದಿದ್ದು ಅಬ್ದುಲ್ ಸಫ್ವಾನ್ ಮತ್ತು ಮೊಹಮ್ಮದ್ ಸಫ್ವಾನ್ ಬೈಕಿನಲ್ಲಿ ಬರುತ್ತಿದ್ದಾಗಲೇ ಎರಡು ಬೈಕ್ ಗಳಲ್ಲಿ ಬಂದಿದ್ದ ಐದಾರು ಮಂದಿ ತಡೆದು ಹಲ್ಲೆ ನಡೆಸಿದ್ದರು. ಅಬ್ದುಲ್ ಸಫ್ವಾನ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಬಳಿಕ ಸ್ಥಳದಲ್ಲಿ ಜನ ಸೇರುತ್ತಿದ್ದಾಗ ಆರೋಪಿಗಳು ಪರಾರಿಯಾಗಿದ್ದರು. ಸಫ್ವಾನ್ ಅವರ ಕೈ , ತೋಳು ಹಾಗೂ ಬೆನ್ನಿಗೆ ಚೂರಿಯಿಂದ ಇರಿದ ಗಾಯಗಳಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಯಿಂದಾಗಿ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದ ಸುರತ್ಕಲ್ ಠಾಣೆ ಪೊಲೀಸರು ರಾತ್ರಿಯೇ ಕಾರ್ಯಾಚರಣೆ ನಡೆಸಿದ್ದಾರೆ. ಹಲವರನ್ನು ವಶಕ್ಕೆ ಪಡೆದಿದ್ದು ಮೂವರನ್ನು ಬಂಧಿಸಿದ್ದಾಗಿ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪುನೀತ್, ಬಬ್ಬು ಗಣೇಶ್ ಸೇರಿದಂತೆ ಹಲವರ ವಿರುದ್ಧ ಕೊಲೆಯತ್ನ, ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಾಗಿದೆ.
Surathkal stabbing case, three arrested in a quick action by Mangalore Police. The arrested are Prashanth, Dhanraj and Yajnesh. A swift action taken by Mangalore Police commissioner Kuldeep Kumar Jain.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am