ಬ್ರೇಕಿಂಗ್ ನ್ಯೂಸ್
05-09-23 08:26 pm Mangalore Correspondent ಕ್ರೈಂ
ಮಂಗಳೂರು, ಸೆ.5: ನಾಲ್ಕು ದಿನಗಳ ಹಿಂದೆ ಬಜ್ಪೆಯಲ್ಲಿ ಮನೆ ಬಾಗಿಲು ಒಡೆದು ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣದಲ್ಲಿ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ತಾರಿಕಂಬ್ಳ ನಿವಾಸಿ ವಿನ್ಸೆಂಟ್ ಡಿ'ಸೋಜ (34) ಬಂಧಿತ ಆರೋಪಿ.
ಸೆ.1ರಂದು ಬಜಪೆ ಗ್ರಾಮದ ಪೊರ್ಕೋಡಿ ದೇವಸ್ಥಾನದ ರಸ್ತೆಯ ಕರೋಡಿ ಎಂಬಲ್ಲಿ ಮನೆಯ ಬೆಡ್ ರೂಮಿನಲ್ಲಿದ್ದ ಕಬ್ಬಿಣದ ಕಪಾಟಿನ ಲಾಕರ್ ಮುರಿದು 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಬಜಪೆ ಪೊಲೀಸ್ ನಿರೀಕ್ಷಕ ಪ್ರಕಾಶ್ ನೇತೃತ್ವದ ತಂಡ ಗುಮಾನಿಯ ಮೇರೆಗೆ ಆರೋಪಿ ವಿನ್ಸೆಂಟ್ ಡಿಸೋಜಾನನ್ನ ಬಜ್ಪೆಯ ಕಿನ್ನಿಪದವು ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆದಿತ್ತು.
ವಿಚಾರಣೆ ವೇಳೆ ಆರೋಪಿ ತಪ್ಪು ಒಪ್ಪಿಕೊಂಡಿದ್ದು ಸುಮಾರು 5 ಲಕ್ಷ ರೂ. ಮೌಲ್ಯದ ಒಟ್ಟು 80 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿದ್ದಾರೆ. ಬಜ್ಪೆ ಪಿಎಸ್ಐ ಗುರಪ್ಪ ಕಾಂತಿ, ಪಿಎಸ್ಐ ರೇವಣ ಸಿದ್ದಪ್ಪ, ಪಿಎಸ್ಐ ಕುಮಾರೇಶನ್, ಪಿಎಸ್ಐ ಶ್ರೀಮತಿ ಲತಾ, ಎಎಸ್ಐ ರಾಮ ಪೂಜಾರಿ ಮೇರೆಮಜಲು, ರಶೀದ ಶೇಖ್, ಸುಜನ್, ರೋಹಿತ, ದುರ್ಗಾಪ್ರಸಾದ್ ಶೆಟ್ಟಿ, ಸಂತೋಷ, ಬಸವರಾಜ್ ಪಾಟೀಲ್, ಕೆಂಚನ ಗೌಡ ಮತ್ತು ಇತರ ಸಿಬ್ಬಂದಿ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದರು.
Mangalore one arrested for stealing gold ornaments worth Rs five lac from house at Bajpe. The accused arrested is identified as Vincent D’Souza (34), a resident of Tarikambla of Bajpe.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm