ಬ್ರೇಕಿಂಗ್ ನ್ಯೂಸ್
09-11-20 04:11 pm Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಬೆಂಗಳೂರು ಮೂಲದ ಪ್ರವಾಸಿಗರು ಮಲ್ಪೆ ಕಡಲತೀರದಲ್ಲಿ ನೀರಾಟದಲ್ಲಿ ತೊಡಗಿದ್ದಾಗ, ಆ ಪೈಕಿ ಮೂವರು ಅಲೆಗಳ ನಡುವೆ ಕೊಚ್ಚಿ ಹೋಗಿದ್ದು ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಬೆಳಗ್ಗೆ ಘಟನೆ ನಡೆದಿದೆ.
ಬೆಂಗಳೂರಿನ 10 ಜನ ಪ್ರವಾಸಿಗರು ಕಡಲತೀರಕ್ಕೆ ಆಗಮಿಸಿದ್ದರು. ಈ ಪೈಕಿ ಐದಾರು ಜನ ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಮೊದಲು ಯುವತಿಯೊಬ್ಬಳು ನೀರಿನಲ್ಲಿ ಮುಳುಗಿದ್ದಾಳೆ. ಆಕೆಯ ರಕ್ಷಣೆಗಾಗಿ ಜೊತೆಗಿದ್ದ ಇನ್ನಿಬ್ಬರು ನೀರಿಗೆ ಹಾರಿದ್ದು ಈ ವೇಳೆ ಮೂವರು ಕೂಡ ಅಪಾಯಕ್ಕೆ ಸಿಲುಕಿದ್ದಾರೆ. ದಡದಲ್ಲಿ ಇದ್ದವರು ರಕ್ಷಣೆಗಾಗಿ ಮೊರೆ ಇಟ್ಟಿದ್ದಾರೆ. ಇದನ್ನು ಕೇಳಿ ಸ್ವಲ್ಪ ದೂರದಲ್ಲಿ ಜೆಟ್ ಸ್ಕೀ ನಿರ್ವಹಿಸುತ್ತಿದ್ದವರು ಸ್ಥಳಕ್ಕೆ ಧಾವಿಸಿದ್ದಾರೆ.


ಜೆಟ್ ಸ್ಕೀ ಬೋಟ್ ಮೂಲಕ ಮೊದಲು ರಕ್ಷಣೆ ಮಾಡಿ, ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರತಿದಿನ 11 ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಕಡಲು ಪ್ರಕ್ಷುಬ್ಧ ಇರುತ್ತದೆ. ಈ ಸಂದರ್ಭ ಪ್ರವಾಸಿಗರು ಕಡಲಿಗೆ ಇಳಿಯಬಾರದು ಎಂದು ಸೂಚನಾ ಫಲಕ ಹಾಕಲಾಗಿದೆ. ಆದರೆ, ಸೂಚನೆಯನ್ನು ಉಲ್ಲಂಘಿಸಿ ಪ್ರವಾಸಿಗರು ನೀರಿಗಿಳಿದು ಅಪಾಯಕ್ಕೀಡಾಗುತ್ತಾರೆ.
ಸ್ವಿಮ್ಮಿಂಗ್ ಪೂಲ್, ನದಿಯಲ್ಲಿ ಈಜಲು ಕಲಿತವರು ಸಮುದ್ರಕ್ಕೆ ತಿಳಿದು ಈಜುತ್ತೇವೆ ಎಂದು ಅಂದುಕೊಂಡಿದ್ದರೆ ಅದು ಮೂರ್ಖತನ ಎಂದು ಸ್ಥಳೀಯ ಮೀನುಗಾರ ವಿಠಲ ಕಾಂಚನ್ ಹೇಳುತ್ತಾರೆ.
Three youngsters from Bangalore who were drowned in malpe beach were rescued by localities in malpe Beach, Udupi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm