ಬ್ರೇಕಿಂಗ್ ನ್ಯೂಸ್
09-11-20 04:11 pm Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಬೆಂಗಳೂರು ಮೂಲದ ಪ್ರವಾಸಿಗರು ಮಲ್ಪೆ ಕಡಲತೀರದಲ್ಲಿ ನೀರಾಟದಲ್ಲಿ ತೊಡಗಿದ್ದಾಗ, ಆ ಪೈಕಿ ಮೂವರು ಅಲೆಗಳ ನಡುವೆ ಕೊಚ್ಚಿ ಹೋಗಿದ್ದು ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಬೆಳಗ್ಗೆ ಘಟನೆ ನಡೆದಿದೆ.
ಬೆಂಗಳೂರಿನ 10 ಜನ ಪ್ರವಾಸಿಗರು ಕಡಲತೀರಕ್ಕೆ ಆಗಮಿಸಿದ್ದರು. ಈ ಪೈಕಿ ಐದಾರು ಜನ ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಮೊದಲು ಯುವತಿಯೊಬ್ಬಳು ನೀರಿನಲ್ಲಿ ಮುಳುಗಿದ್ದಾಳೆ. ಆಕೆಯ ರಕ್ಷಣೆಗಾಗಿ ಜೊತೆಗಿದ್ದ ಇನ್ನಿಬ್ಬರು ನೀರಿಗೆ ಹಾರಿದ್ದು ಈ ವೇಳೆ ಮೂವರು ಕೂಡ ಅಪಾಯಕ್ಕೆ ಸಿಲುಕಿದ್ದಾರೆ. ದಡದಲ್ಲಿ ಇದ್ದವರು ರಕ್ಷಣೆಗಾಗಿ ಮೊರೆ ಇಟ್ಟಿದ್ದಾರೆ. ಇದನ್ನು ಕೇಳಿ ಸ್ವಲ್ಪ ದೂರದಲ್ಲಿ ಜೆಟ್ ಸ್ಕೀ ನಿರ್ವಹಿಸುತ್ತಿದ್ದವರು ಸ್ಥಳಕ್ಕೆ ಧಾವಿಸಿದ್ದಾರೆ.


ಜೆಟ್ ಸ್ಕೀ ಬೋಟ್ ಮೂಲಕ ಮೊದಲು ರಕ್ಷಣೆ ಮಾಡಿ, ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರತಿದಿನ 11 ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಕಡಲು ಪ್ರಕ್ಷುಬ್ಧ ಇರುತ್ತದೆ. ಈ ಸಂದರ್ಭ ಪ್ರವಾಸಿಗರು ಕಡಲಿಗೆ ಇಳಿಯಬಾರದು ಎಂದು ಸೂಚನಾ ಫಲಕ ಹಾಕಲಾಗಿದೆ. ಆದರೆ, ಸೂಚನೆಯನ್ನು ಉಲ್ಲಂಘಿಸಿ ಪ್ರವಾಸಿಗರು ನೀರಿಗಿಳಿದು ಅಪಾಯಕ್ಕೀಡಾಗುತ್ತಾರೆ.
ಸ್ವಿಮ್ಮಿಂಗ್ ಪೂಲ್, ನದಿಯಲ್ಲಿ ಈಜಲು ಕಲಿತವರು ಸಮುದ್ರಕ್ಕೆ ತಿಳಿದು ಈಜುತ್ತೇವೆ ಎಂದು ಅಂದುಕೊಂಡಿದ್ದರೆ ಅದು ಮೂರ್ಖತನ ಎಂದು ಸ್ಥಳೀಯ ಮೀನುಗಾರ ವಿಠಲ ಕಾಂಚನ್ ಹೇಳುತ್ತಾರೆ.
Three youngsters from Bangalore who were drowned in malpe beach were rescued by localities in malpe Beach, Udupi.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm