ಬ್ರೇಕಿಂಗ್ ನ್ಯೂಸ್
09-11-20 04:11 pm Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಬೆಂಗಳೂರು ಮೂಲದ ಪ್ರವಾಸಿಗರು ಮಲ್ಪೆ ಕಡಲತೀರದಲ್ಲಿ ನೀರಾಟದಲ್ಲಿ ತೊಡಗಿದ್ದಾಗ, ಆ ಪೈಕಿ ಮೂವರು ಅಲೆಗಳ ನಡುವೆ ಕೊಚ್ಚಿ ಹೋಗಿದ್ದು ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಬೆಳಗ್ಗೆ ಘಟನೆ ನಡೆದಿದೆ.
ಬೆಂಗಳೂರಿನ 10 ಜನ ಪ್ರವಾಸಿಗರು ಕಡಲತೀರಕ್ಕೆ ಆಗಮಿಸಿದ್ದರು. ಈ ಪೈಕಿ ಐದಾರು ಜನ ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಮೊದಲು ಯುವತಿಯೊಬ್ಬಳು ನೀರಿನಲ್ಲಿ ಮುಳುಗಿದ್ದಾಳೆ. ಆಕೆಯ ರಕ್ಷಣೆಗಾಗಿ ಜೊತೆಗಿದ್ದ ಇನ್ನಿಬ್ಬರು ನೀರಿಗೆ ಹಾರಿದ್ದು ಈ ವೇಳೆ ಮೂವರು ಕೂಡ ಅಪಾಯಕ್ಕೆ ಸಿಲುಕಿದ್ದಾರೆ. ದಡದಲ್ಲಿ ಇದ್ದವರು ರಕ್ಷಣೆಗಾಗಿ ಮೊರೆ ಇಟ್ಟಿದ್ದಾರೆ. ಇದನ್ನು ಕೇಳಿ ಸ್ವಲ್ಪ ದೂರದಲ್ಲಿ ಜೆಟ್ ಸ್ಕೀ ನಿರ್ವಹಿಸುತ್ತಿದ್ದವರು ಸ್ಥಳಕ್ಕೆ ಧಾವಿಸಿದ್ದಾರೆ.


ಜೆಟ್ ಸ್ಕೀ ಬೋಟ್ ಮೂಲಕ ಮೊದಲು ರಕ್ಷಣೆ ಮಾಡಿ, ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರತಿದಿನ 11 ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಕಡಲು ಪ್ರಕ್ಷುಬ್ಧ ಇರುತ್ತದೆ. ಈ ಸಂದರ್ಭ ಪ್ರವಾಸಿಗರು ಕಡಲಿಗೆ ಇಳಿಯಬಾರದು ಎಂದು ಸೂಚನಾ ಫಲಕ ಹಾಕಲಾಗಿದೆ. ಆದರೆ, ಸೂಚನೆಯನ್ನು ಉಲ್ಲಂಘಿಸಿ ಪ್ರವಾಸಿಗರು ನೀರಿಗಿಳಿದು ಅಪಾಯಕ್ಕೀಡಾಗುತ್ತಾರೆ.
ಸ್ವಿಮ್ಮಿಂಗ್ ಪೂಲ್, ನದಿಯಲ್ಲಿ ಈಜಲು ಕಲಿತವರು ಸಮುದ್ರಕ್ಕೆ ತಿಳಿದು ಈಜುತ್ತೇವೆ ಎಂದು ಅಂದುಕೊಂಡಿದ್ದರೆ ಅದು ಮೂರ್ಖತನ ಎಂದು ಸ್ಥಳೀಯ ಮೀನುಗಾರ ವಿಠಲ ಕಾಂಚನ್ ಹೇಳುತ್ತಾರೆ.
Three youngsters from Bangalore who were drowned in malpe beach were rescued by localities in malpe Beach, Udupi.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am