ಬ್ರೇಕಿಂಗ್ ನ್ಯೂಸ್
10-11-20 11:32 am Headline Karnataka News Network ಕ್ರೈಂ
ಚೆನ್ನೈ, ನವೆಂಬರ್ 10: ಡ್ರಗ್ಸ್ ದಂಧೆಯನ್ನು ಬಯಲಿಗೆಳೆದ ಟಿವಿ ಪತ್ರಕರ್ತರೊಬ್ವರನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಡ್ರಗ್ ಡೀಲರ್ಗಳ ಕುರಿತು ಪೊಲೀಸರಿಗೆ ಮಾಹಿತಿ ನೀಡುತ್ತಾನೆ ಎಂಬ ಭಯದಲ್ಲಿ ಮಾಫಿಯಾ ಗ್ಯಾಂಗ್ ಪತ್ರಕರ್ತನನ್ನು ಹತ್ಯೆ ಮಾಡಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇಸ್ರೇವೆಲ್ ಮೋಸಸ್(27) ಕೊಲೆಯಾದ ಪತ್ರಕರ್ತ, ಭಾನುವಾರ ಸಂಜೆ ಅವರನ್ನು ಮನೆಯಿಂದ ಹೊರಗೆ ಕರೆದೊಯ್ದು, ಕುತ್ತಿಗೆ ಹಿಸುಕಿ ಕೊಲೆ ಮಾಡಲಾಗಿದೆ. ಆರೋಪಿಗಳು ಭೂ ವ್ಯವಹಾರ ಹಾಗೂ ಸ್ಥಳೀಯ ಕೆರೆಯ ಸುತ್ತ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಸೆಸ್ ಯಾವುದೇ ರೀತಿಯ ಸುದ್ದಿಯನ್ನು ಬಿತ್ತರಿಸಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ಕುರಿತು ಮೋಸೆಸ್ ತಂದೆ ಜ್ಞಾನರಾಜ್ ಪ್ರತಿಕ್ರಿಯಿಸಿ, ನನ್ನ ಮಗ ದೂರು ನೀಡಿದ ಬಳಿಕ ಜಿಲ್ಲಾ ಪೊಲೀಸರು ಯಾವುದೇ ರೀತಿಯ ಕ್ರಮ ಕೈಗೊಳ್ಳಲಿಲ್ಲ. ಹೀಗಾಗಿ ಅವರ ಜೀವ ಅಪಾಯದಲ್ಲಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆರೋಪವನ್ನು ಪೊಲೀಸರು ನಿರಾಕರಿಸಿದ್ದು, ಮೋಸೆಸ್ ನಮಗೆ ಯಾವುದೇ ರೀತಿಯ ಮಾಹಿತಿ ನೀಡಿಲ್ಲ. ಈ ಕೊಲೆ ಭೂಮಿ ವಿಚಾರವಾಗಿ ವೈಯಕ್ತಿಕ ಪ್ರತಿಕಾರಕ್ಕಾಗಿ ನಡೆದಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಡಿ.ಶಣ್ಮುಗಪ್ರಿಯ ತಿಳಿಸಿದ್ದಾರೆ. ಆದರೆ ಪೊಲೀಸರ ಈ ವಾದವನ್ನು ಹಿರಿಯ ಪತ್ರಕರ್ತೆ ಭಾರತಿ ತಮಿಝಾನ್ ಅಲ್ಲಗಳೆದಿದ್ದಾರೆ.
ಸೋಮಂಗಲಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಗಾಂಜಾ ಸೇರಿದಂತೆ ಇತರೆ ಮಾದಕ ವಸ್ತುಗಳ ಮಾರಾಟದ ಬಗ್ಗೆ ಮೋಸೆಸ್ ವರದಿ ಮಾಡಿದ್ದರು. ಬಳಿಕ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದವು. ಮೋಸೆಸ್ ನೀಡಿದ ದೂರಿನ ಕುರಿತು ಪೊಲೀಸರು ಕ್ರಮ ಕೈಗೊಳ್ಳದ ಹಿನ್ನೆಲೆ ಅವರ ಕೊಲೆ ನಡೆದಿದೆ. ಸುದ್ದಿ ಮಾಡಿದ್ದಕ್ಕಾಗಿ ಈ ಹತ್ಯೆ ನಡೆದಿದೆ, ತಮಿಳುನಾಡಿನಲ್ಲಿ ಪತ್ರಕರ್ತರಿಗೆ ಭದ್ರತೆ ಸಿಗುತ್ತಿಲ್ಲ ಎಂದು ಹಿರಿಯ ಪತ್ರಕರ್ತೆ ಕಿಡಿಕಾರಿದ್ದಾರೆ.
A Chennai based journalist was brutally killed outside his residence in Kanchipuram. The victim, who was working with a regional news channel was hacked to death allegedly by a gang of drug smugglers. The family of the reporter has refused to accept his body and demand justice.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm