ಬ್ರೇಕಿಂಗ್ ನ್ಯೂಸ್
24-09-23 10:27 pm Udupi Correspondent ಕ್ರೈಂ
ಉಡುಪಿ, ಸೆ.24: ಶಂಕರಪುರ ನಿವಾಸಿಯ ಮೊಬೈಲ್ ಗೆ ಅಪರಿಚಿತನೊಬ್ಬ ಮೆಸೇಜ್ ಮಾಡಿ, ತಾನು ಬ್ಯಾಂಕ್ ಅಧಿಕಾರಿಯೆಂದು ನಂಬಿಸಿ, ಕೆವೈಸಿ ಪಡೆದು ಬ್ಯಾಂಕ್ ಖಾತೆಯಿಂದ 3,38,199 ರೂಪಾಯಿ ಎಗರಿಸಿದ ಘಟನೆ ರವಿವಾರ ಬೆಳಕಿಗೆ ಬಂದಿದೆ.
ಶಂಕರಪುರ ಕೆನರಾ ಬ್ಯಾಂಕ್ನಲ್ಲಿ ಅಕೌಂಟ್ ಹೊಂದಿರುವ ಶಂಕರಪುರ ನಿವಾಸಿ ವಲೇರಿಯನ್ ಅವರ ಪತ್ನಿಯ ಮೊಬೆ„ಲ್ ನಂಬರ್ಗೆ ಸೆ. 23ರಂದು ಅಪರಿಚಿತನೋರ್ವ 9387666481 ಸಂಖ್ಯೆಯಿಂದ ಮೆಸೇಜ್ ಮಾಡಿ ತಾನು ಬ್ಯಾಂಕ್ ಉದ್ಯೋಗಿಯಾಗಿದ್ದು ನಿಮ್ಮ ಖಾತೆಯ ಕೆವೈಸಿ ಅಪ್ಡೇಟ್ ಮಾಡಿಕೊಳ್ಳುವಂತೆ ಸೂಚಿಸಿದ್ದನು. ಅದನ್ನು ನಂಬಿದ ಅವರು ಬ್ಯಾಂಕ್ ಖಾತೆ ಸಹಿತ ಪಾಸ್ ಬುಕ್ ವಿವರವನ್ನು ನೀಡಿದ್ದರು, ಬಳಿಕ ಆತ ಖಾತೆಯ ನಾಮಿನಿಯಾಗಿರುವ ಗಂಡನ ವಿವರವನ್ನು ಕೂಡಾ ಅಪ್ಡೇಟ್ ಮಾಡುವಂತೆ ಸೂಚಿಸಿದ್ದನು.
ಇದಾದ ಬಳಿಕ ಎಟಿಎಂ ಕಾರ್ಡ್ ವಿವರವನ್ನು ಪಡೆದುಕೊಂಡ ಅಪರಿಚಿತ ತತ್ಕ್ಷಣ ಖಾತೆದಾರರ ಮೊಬೆ„ಲ್ಗೆ ಒಟಿಪಿ ಕಳುಹಿಸಿದ್ದು, ಒಟಿಪಿ ವಿವರಗಳನ್ನು ಕೇಳಿ ಪಡೆದುಕೊಂಡು ಅವರ ಖಾತೆಯಿಂದ ಕ್ರಮವಾಗಿ 1,99,999/- , 50,000/- , 80,000/- ಮತ್ತು 8200/- ಹೀಗೆ ಒಟ್ಟು 3,38,199/- ರೂಪಾಯಿ ಹಣವನ್ನು ಡ್ರಾ ಮಾಡಿ ವಂಚಿಸಿರುವುದಾಗಿ ತಿಳಿದು ಬಂದಿದೆ.
ವಂಚನೆಗೊಳಗಾಗಿರುವ ವಲೇರಿಯನ್ ಅವರು ಈ ಬಗ್ಗೆ ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಆನ್ಲೈನ್ ಮೋಸ ಜಾಲಕ್ಕೆ ಸಿಲುಕಿ ಜನರು ನಿರಂತರವಾಗಿ ವಂಚನೆಗೊಳಗಾಗುತ್ತಿದ್ದು ಇಂತಹ ಘಟನೆಗಳು ಗ್ರಾಮೀಣ ಭಾಗಕ್ಕೂ ಕಾಲಿರಿಸಿರುವುದು ಆಘಾತಕಾರಿ ವಿಚಾರವಾಗಿದೆ. ಇಂತಹ ಜಾಲಗಳು ಮೊಬೈಲ್, ವಾಟ್ಸಾಪ್, ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಂ ಮೂಲಕವಾಗಿ ನಿರಂತರವಾಗಿ ಜನರನ್ನು ವಂಚಿಸುತ್ತಿದ್ದು ಈ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕಿದೆ. ಎಲ್ಲ ಊರುಗಳಲ್ಲೂ ಬ್ಯಾಂಕ್ಗಳು ಹತ್ತಿರದಲ್ಲೇ ಇದ್ದು ಯಾವುದೇ ಅಪರಿಚಿತರು ಮಾಹಿತಿ ಕೇಳಿದಾಗ ಮಾಹಿತಿಯನ್ನು ರವಾನಿಸಿದೇ ನೇರವಾಗಿ ಬ್ಯಾಂಕ್ಗೆ ತೆರಳಿ ತಮ್ಮ ಇ ಕೆವೈಸಿ ಅಪ್ಡೇಟ್ ಮಾಡಿಕೊಳ್ಳಬೇಕಿದೆ. ಆನ್ಲೈನ್ ಮೂಲಕವಾಗಿ ಯಾವುದೇ ಮಾಹಿತಿಗಳನ್ನು ಶೇರ್ ಮಾಡಿಕೊಳ್ಳಬಾರದು. ಇನ್ಸ್ಟಾಗ್ರಾಂ, ಫೇಸ್ಬುಕ್, ವಾಟ್ಸಾಪ್ ಜಾಲತಾಣಗಳನ್ನು ಬಳಸುವಾಗ ಎಚ್ಚರ ವಹಿಸ ಬೇಕು ಎಂದು ಕಾಪು ಎಸ್ಐ ಅಬ್ದುಲ್ ಖಾದರ್ ಜನರಲ್ಲಿ ಮನವಿ ಮಾಡಿದ್ದಾರೆ.
Udupi, fraudsters steal Rs 3 lakhs from canara bank after asking for OTP in the name of KYC update.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm