ಬ್ರೇಕಿಂಗ್ ನ್ಯೂಸ್
28-09-23 10:20 pm Mangalore Correspondent ಕ್ರೈಂ
ಮಂಗಳೂರು, ಸೆ.28: ನಗರದ ಅಡ್ಯಾರ್ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.
ಈ ಹಿಂದೆ ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ತಂಡವೊಂದು ಅಡ್ಯಾರ್ ಪರಿಸರದಲ್ಲಿ ಮಾರಾಕಾಯುಧಗಳೊಂದಿಗೆ ಮತ್ತೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಫರಂಗಿಪೇಟೆ ಅಮ್ಮೆಮ್ಮಾರ್ ನಿವಾಸಿಗಳಾದ ತಸ್ಲೀಮ್ @ ಗರುಡ ತಸ್ಲೀಮ್(34),
ಹೈದರಾಲಿ @ ಹೈದು(26) ಎಂಬವರನ್ನು ವಶಕ್ಕೆ ಪಡೆದು ಅವರ ವಶದಲ್ಲಿದ್ದ ತಲವಾರು-2, ಚೂರಿ-1, ಮೊಬೈಲ್ ಫೋನುಗಳು-2, ಹಾಗೂ KL -14-AB-7212 ಮಹೇಂದ್ರ ಪಿಕ್ ಅಪ್ ವಾಹನ ವಶಪಡಿಸಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 5,21,000/- ಆಗಬಹುದು. ಆರೋಪಿಗಳ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ಹತ್ತು ದಿನಗಳ ಹಿಂದಷ್ಟೆ ಜೈಲಿನಿಂದ ಬಿಡುಗಡೆ
ಫರಂಗಿಪೇಟೆ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ಎರಡು ತಂಡಗಳ ನಡುವೆ ಜಾನುವಾರು ಸಾಗಾಟದ ವಿಷಯದಲ್ಲಿ ಗಲಾಟೆ ನಡೆದಿತ್ತು. ಅಕ್ರಮ ಜಾನುವಾರು ಸಾಗಾಟ ವಿಚಾರವಾಗಿದ್ದರಿಂದ ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ. ಆನಂತರ, ತಸ್ಲಿಂ ಹಾಗೂ ಆತನ ಸಹಚರರು ಇನ್ನೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿ ಹೊಂಚು ಹಾಕುತ್ತಿದ್ದ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ.
ಆರೋಪಿಗಳ ಪೈಕಿ ತಸ್ಲೀಮ್ @ ಗರುಡ ತಸ್ಲೀಮ್ ಎಂಬಾತ ಈ ಹಿಂದೆ ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣೆ ವ್ಯಾಪ್ತಿಯಲ್ಲಿ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ, ರೈಲ್ವೇ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿದ್ದ. 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಗೊಂಡಿದ್ದ. ಇನ್ನೋರ್ವ ಆರೋಪಿ ಹೈದರಾಲಿ @ಹೈದು ಎಂಬಾತ ಈ ಹಿಂದೆ ಮೂಡಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ.
Cattle trafficking revenge, two rowdies arrested for plotting murder at Adyar in Mangalore.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm