ಬ್ರೇಕಿಂಗ್ ನ್ಯೂಸ್
28-09-23 10:20 pm Mangalore Correspondent ಕ್ರೈಂ
ಮಂಗಳೂರು, ಸೆ.28: ನಗರದ ಅಡ್ಯಾರ್ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.
ಈ ಹಿಂದೆ ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ತಂಡವೊಂದು ಅಡ್ಯಾರ್ ಪರಿಸರದಲ್ಲಿ ಮಾರಾಕಾಯುಧಗಳೊಂದಿಗೆ ಮತ್ತೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಫರಂಗಿಪೇಟೆ ಅಮ್ಮೆಮ್ಮಾರ್ ನಿವಾಸಿಗಳಾದ ತಸ್ಲೀಮ್ @ ಗರುಡ ತಸ್ಲೀಮ್(34),
ಹೈದರಾಲಿ @ ಹೈದು(26) ಎಂಬವರನ್ನು ವಶಕ್ಕೆ ಪಡೆದು ಅವರ ವಶದಲ್ಲಿದ್ದ ತಲವಾರು-2, ಚೂರಿ-1, ಮೊಬೈಲ್ ಫೋನುಗಳು-2, ಹಾಗೂ KL -14-AB-7212 ಮಹೇಂದ್ರ ಪಿಕ್ ಅಪ್ ವಾಹನ ವಶಪಡಿಸಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 5,21,000/- ಆಗಬಹುದು. ಆರೋಪಿಗಳ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಹತ್ತು ದಿನಗಳ ಹಿಂದಷ್ಟೆ ಜೈಲಿನಿಂದ ಬಿಡುಗಡೆ
ಫರಂಗಿಪೇಟೆ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ಎರಡು ತಂಡಗಳ ನಡುವೆ ಜಾನುವಾರು ಸಾಗಾಟದ ವಿಷಯದಲ್ಲಿ ಗಲಾಟೆ ನಡೆದಿತ್ತು. ಅಕ್ರಮ ಜಾನುವಾರು ಸಾಗಾಟ ವಿಚಾರವಾಗಿದ್ದರಿಂದ ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ. ಆನಂತರ, ತಸ್ಲಿಂ ಹಾಗೂ ಆತನ ಸಹಚರರು ಇನ್ನೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿ ಹೊಂಚು ಹಾಕುತ್ತಿದ್ದ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ.
ಆರೋಪಿಗಳ ಪೈಕಿ ತಸ್ಲೀಮ್ @ ಗರುಡ ತಸ್ಲೀಮ್ ಎಂಬಾತ ಈ ಹಿಂದೆ ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣೆ ವ್ಯಾಪ್ತಿಯಲ್ಲಿ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ, ರೈಲ್ವೇ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿದ್ದ. 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಗೊಂಡಿದ್ದ. ಇನ್ನೋರ್ವ ಆರೋಪಿ ಹೈದರಾಲಿ @ಹೈದು ಎಂಬಾತ ಈ ಹಿಂದೆ ಮೂಡಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ.
Cattle trafficking revenge, two rowdies arrested for plotting murder at Adyar in Mangalore.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 10:19 am
Mangaluru Correspondent
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm