ಬ್ರೇಕಿಂಗ್ ನ್ಯೂಸ್
28-09-23 10:20 pm Mangalore Correspondent ಕ್ರೈಂ
ಮಂಗಳೂರು, ಸೆ.28: ನಗರದ ಅಡ್ಯಾರ್ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.
ಈ ಹಿಂದೆ ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ತಂಡವೊಂದು ಅಡ್ಯಾರ್ ಪರಿಸರದಲ್ಲಿ ಮಾರಾಕಾಯುಧಗಳೊಂದಿಗೆ ಮತ್ತೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಫರಂಗಿಪೇಟೆ ಅಮ್ಮೆಮ್ಮಾರ್ ನಿವಾಸಿಗಳಾದ ತಸ್ಲೀಮ್ @ ಗರುಡ ತಸ್ಲೀಮ್(34),
ಹೈದರಾಲಿ @ ಹೈದು(26) ಎಂಬವರನ್ನು ವಶಕ್ಕೆ ಪಡೆದು ಅವರ ವಶದಲ್ಲಿದ್ದ ತಲವಾರು-2, ಚೂರಿ-1, ಮೊಬೈಲ್ ಫೋನುಗಳು-2, ಹಾಗೂ KL -14-AB-7212 ಮಹೇಂದ್ರ ಪಿಕ್ ಅಪ್ ವಾಹನ ವಶಪಡಿಸಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 5,21,000/- ಆಗಬಹುದು. ಆರೋಪಿಗಳ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ಹತ್ತು ದಿನಗಳ ಹಿಂದಷ್ಟೆ ಜೈಲಿನಿಂದ ಬಿಡುಗಡೆ
ಫರಂಗಿಪೇಟೆ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ಎರಡು ತಂಡಗಳ ನಡುವೆ ಜಾನುವಾರು ಸಾಗಾಟದ ವಿಷಯದಲ್ಲಿ ಗಲಾಟೆ ನಡೆದಿತ್ತು. ಅಕ್ರಮ ಜಾನುವಾರು ಸಾಗಾಟ ವಿಚಾರವಾಗಿದ್ದರಿಂದ ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ. ಆನಂತರ, ತಸ್ಲಿಂ ಹಾಗೂ ಆತನ ಸಹಚರರು ಇನ್ನೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿ ಹೊಂಚು ಹಾಕುತ್ತಿದ್ದ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ.
ಆರೋಪಿಗಳ ಪೈಕಿ ತಸ್ಲೀಮ್ @ ಗರುಡ ತಸ್ಲೀಮ್ ಎಂಬಾತ ಈ ಹಿಂದೆ ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣೆ ವ್ಯಾಪ್ತಿಯಲ್ಲಿ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ, ರೈಲ್ವೇ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿದ್ದ. 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಗೊಂಡಿದ್ದ. ಇನ್ನೋರ್ವ ಆರೋಪಿ ಹೈದರಾಲಿ @ಹೈದು ಎಂಬಾತ ಈ ಹಿಂದೆ ಮೂಡಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ.
Cattle trafficking revenge, two rowdies arrested for plotting murder at Adyar in Mangalore.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm