ಬ್ರೇಕಿಂಗ್ ನ್ಯೂಸ್
29-09-23 07:00 pm Mangalore Correspondent ಕ್ರೈಂ
ಪುತ್ತೂರು, ಸೆ.29: ವಿವಾಹಿತ ಮಹಿಳೆಯ ಜೊತೆ ಸಲುಗೆ ಬೆಳೆಸಿಕೊಂಡಿದ್ದಲ್ಲದೆ, ಆಕೆಯ ಜೊತೆಗೆ ಫೋಟೊ ತೆಗೆದು ಬ್ಲಾಕ್ಮೇಲ್ ನಡೆಸಿರುವ ಘಟನೆ ನಡೆದಿದ್ದು, ಪ್ರಕರಣದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯರೊಬ್ಬರನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಆರ್ಲಪದವು ನಿವಾಸಿ ಪ್ರಶಾಂತ ಭಟ್ ಮಾಣಿಲ(35) ಬಂಧಿತ ಆರೋಪಿ. ಸುಬ್ರಹ್ಮಣ್ಯದಲ್ಲಿ ಸಾಮಾಜಿಕ ಹಾಗೂ ರಾಜಕೀಯವಾಗಿ ತೊಡಗಿಸಿಕೊಂಡಿದ್ದ ಪ್ರಶಾಂತ ಭಟ್ ವಿರುದ್ಧ ಕಾರವಾರ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ವಿವಾಹಿತ ಮಹಿಳೆಯೊಬ್ಬರಿಗೆ ಜಾಲತಾಣದಲ್ಲಿ ಪರಿಚಯ ಆಗಿದ್ದ ಪ್ರಶಾಂತ ಭಟ್, ಬಳಿಕ ಆರ್ಕೆಸ್ಟ್ರಾದಲ್ಲಿ ಹಾಡಲು ಅವಕಾಶ ಕೊಡಿಸುವುದಾಗಿ ಹೇಳಿ ನಂಬಿಸಿ ಸಲುಗೆ ಬೆಳೆಸಿಕೊಂಡಿದ್ದ.

ಕಳೆದ ಜನವರಿ ತಿಂಗಳಲ್ಲಿ ಶಿರಸಿಗೆ ತೆರಳಿದ್ದ ಪ್ರಶಾಂತ, ಅಲ್ಲಿ ಯುವತಿಯನ್ನು ಲಾಡ್ಜ್ ಗೆ ಕರೆಸಿಕೊಂಡಿದ್ದ. ಅಲ್ಲದೆ, ಸುತ್ತಾಟವನ್ನೂ ಮಾಡಿದ್ದರು. ಈ ವೇಳೆ, ಯುವತಿ ಜೊತೆಗೆ ಫೋಟೊ ತೆಗೆಸಿಕೊಂಡಿದ್ದು ಆನಂತರ ಅದನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದಾನೆ. ಲಾಡ್ಜ್ ನಲ್ಲಿ ತೆಗೆದಿರುವ ಫೋಟೊವನ್ನು ಗಂಡನಿಗೆ ತೋರಿಸುತ್ತೇನೆ, ತಾಯಿಗೆ ಕಳಿಸುತ್ತೇನೆಂದು ಹೇಳಿ ಹಣಕ್ಕಾಗಿ ಬ್ಲಾಕ್ಮೇಲ್ ಆರಂಭಿಸಿದ್ದ. ಮೊಬೈಲಿನಲ್ಲಿ ನಗ್ನವಾಗಿ ದೇಹ ತೋರಿಸುವಂತೆ ಒತ್ತಡ ಹಾಕುತ್ತಿದ್ದ. ಈ ನಡುವೆ, ಪ್ರಶಾಂತ ಭಟ್ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗುತ್ತಿದ್ದು ಹಣ ನೀಡದೇ ಇದ್ದಾಗ ಫೋಟೊಗಳನ್ನು ಯುವತಿಯ ತಾಯಿಗೆ ಕಳಿಸಿದ್ದ.
ಇದರಿಂದ ಬೇಸತ್ತ ಯುವತಿ ಕಾರವಾರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪೊಲೀಸರು ಆರೋಪಿ ಪ್ರಶಾಂತ ಭಟ್ ನನ್ನು ಬಂಧಿಸಿ ಕರೆದೊಯ್ದಿದ್ದಾರೆ. ಪ್ರಶಾಂತ್ ಭಟ್ ಈ ಹಿಂದೆ ಸುಬ್ರಹ್ಮಣ್ಯದಲ್ಲಿ ಮಠದ ವಿರುದ್ಧ ಹೋರಾಟ ನಡೆಸಿದ್ದವರಲ್ಲಿ ಪ್ರಮುಖನಾಗಿದ್ದ.
Mangalore Case filed against former Subramanya gram panchyath member Prashanth Bhat for blackmailing married woman. The accused is identified as Prashant Bhat Manila. The complainant woman was interested in music and used to sing in Clubhouse, an app. She got acquainted with the accused through the app.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm