ಬ್ರೇಕಿಂಗ್ ನ್ಯೂಸ್
29-09-23 07:00 pm Mangalore Correspondent ಕ್ರೈಂ
ಪುತ್ತೂರು, ಸೆ.29: ವಿವಾಹಿತ ಮಹಿಳೆಯ ಜೊತೆ ಸಲುಗೆ ಬೆಳೆಸಿಕೊಂಡಿದ್ದಲ್ಲದೆ, ಆಕೆಯ ಜೊತೆಗೆ ಫೋಟೊ ತೆಗೆದು ಬ್ಲಾಕ್ಮೇಲ್ ನಡೆಸಿರುವ ಘಟನೆ ನಡೆದಿದ್ದು, ಪ್ರಕರಣದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯರೊಬ್ಬರನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಆರ್ಲಪದವು ನಿವಾಸಿ ಪ್ರಶಾಂತ ಭಟ್ ಮಾಣಿಲ(35) ಬಂಧಿತ ಆರೋಪಿ. ಸುಬ್ರಹ್ಮಣ್ಯದಲ್ಲಿ ಸಾಮಾಜಿಕ ಹಾಗೂ ರಾಜಕೀಯವಾಗಿ ತೊಡಗಿಸಿಕೊಂಡಿದ್ದ ಪ್ರಶಾಂತ ಭಟ್ ವಿರುದ್ಧ ಕಾರವಾರ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ವಿವಾಹಿತ ಮಹಿಳೆಯೊಬ್ಬರಿಗೆ ಜಾಲತಾಣದಲ್ಲಿ ಪರಿಚಯ ಆಗಿದ್ದ ಪ್ರಶಾಂತ ಭಟ್, ಬಳಿಕ ಆರ್ಕೆಸ್ಟ್ರಾದಲ್ಲಿ ಹಾಡಲು ಅವಕಾಶ ಕೊಡಿಸುವುದಾಗಿ ಹೇಳಿ ನಂಬಿಸಿ ಸಲುಗೆ ಬೆಳೆಸಿಕೊಂಡಿದ್ದ.

ಕಳೆದ ಜನವರಿ ತಿಂಗಳಲ್ಲಿ ಶಿರಸಿಗೆ ತೆರಳಿದ್ದ ಪ್ರಶಾಂತ, ಅಲ್ಲಿ ಯುವತಿಯನ್ನು ಲಾಡ್ಜ್ ಗೆ ಕರೆಸಿಕೊಂಡಿದ್ದ. ಅಲ್ಲದೆ, ಸುತ್ತಾಟವನ್ನೂ ಮಾಡಿದ್ದರು. ಈ ವೇಳೆ, ಯುವತಿ ಜೊತೆಗೆ ಫೋಟೊ ತೆಗೆಸಿಕೊಂಡಿದ್ದು ಆನಂತರ ಅದನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದಾನೆ. ಲಾಡ್ಜ್ ನಲ್ಲಿ ತೆಗೆದಿರುವ ಫೋಟೊವನ್ನು ಗಂಡನಿಗೆ ತೋರಿಸುತ್ತೇನೆ, ತಾಯಿಗೆ ಕಳಿಸುತ್ತೇನೆಂದು ಹೇಳಿ ಹಣಕ್ಕಾಗಿ ಬ್ಲಾಕ್ಮೇಲ್ ಆರಂಭಿಸಿದ್ದ. ಮೊಬೈಲಿನಲ್ಲಿ ನಗ್ನವಾಗಿ ದೇಹ ತೋರಿಸುವಂತೆ ಒತ್ತಡ ಹಾಕುತ್ತಿದ್ದ. ಈ ನಡುವೆ, ಪ್ರಶಾಂತ ಭಟ್ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗುತ್ತಿದ್ದು ಹಣ ನೀಡದೇ ಇದ್ದಾಗ ಫೋಟೊಗಳನ್ನು ಯುವತಿಯ ತಾಯಿಗೆ ಕಳಿಸಿದ್ದ.
ಇದರಿಂದ ಬೇಸತ್ತ ಯುವತಿ ಕಾರವಾರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪೊಲೀಸರು ಆರೋಪಿ ಪ್ರಶಾಂತ ಭಟ್ ನನ್ನು ಬಂಧಿಸಿ ಕರೆದೊಯ್ದಿದ್ದಾರೆ. ಪ್ರಶಾಂತ್ ಭಟ್ ಈ ಹಿಂದೆ ಸುಬ್ರಹ್ಮಣ್ಯದಲ್ಲಿ ಮಠದ ವಿರುದ್ಧ ಹೋರಾಟ ನಡೆಸಿದ್ದವರಲ್ಲಿ ಪ್ರಮುಖನಾಗಿದ್ದ.
Mangalore Case filed against former Subramanya gram panchyath member Prashanth Bhat for blackmailing married woman. The accused is identified as Prashant Bhat Manila. The complainant woman was interested in music and used to sing in Clubhouse, an app. She got acquainted with the accused through the app.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 09:19 pm
HK News Staffer
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಕೇಂದ್ರ...
17-03-26 05:46 pm
ಸಂಚಾರ ನಿಯಮ ಉಲ್ಲಂಘನೆ ; ಸುಳ್ಯದಲ್ಲಿ 'ಸಮುದಾಯ ಸೇವೆ...
17-03-26 03:06 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am