ಬ್ರೇಕಿಂಗ್ ನ್ಯೂಸ್
29-09-23 07:00 pm Mangalore Correspondent ಕ್ರೈಂ
ಪುತ್ತೂರು, ಸೆ.29: ವಿವಾಹಿತ ಮಹಿಳೆಯ ಜೊತೆ ಸಲುಗೆ ಬೆಳೆಸಿಕೊಂಡಿದ್ದಲ್ಲದೆ, ಆಕೆಯ ಜೊತೆಗೆ ಫೋಟೊ ತೆಗೆದು ಬ್ಲಾಕ್ಮೇಲ್ ನಡೆಸಿರುವ ಘಟನೆ ನಡೆದಿದ್ದು, ಪ್ರಕರಣದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯರೊಬ್ಬರನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಆರ್ಲಪದವು ನಿವಾಸಿ ಪ್ರಶಾಂತ ಭಟ್ ಮಾಣಿಲ(35) ಬಂಧಿತ ಆರೋಪಿ. ಸುಬ್ರಹ್ಮಣ್ಯದಲ್ಲಿ ಸಾಮಾಜಿಕ ಹಾಗೂ ರಾಜಕೀಯವಾಗಿ ತೊಡಗಿಸಿಕೊಂಡಿದ್ದ ಪ್ರಶಾಂತ ಭಟ್ ವಿರುದ್ಧ ಕಾರವಾರ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ವಿವಾಹಿತ ಮಹಿಳೆಯೊಬ್ಬರಿಗೆ ಜಾಲತಾಣದಲ್ಲಿ ಪರಿಚಯ ಆಗಿದ್ದ ಪ್ರಶಾಂತ ಭಟ್, ಬಳಿಕ ಆರ್ಕೆಸ್ಟ್ರಾದಲ್ಲಿ ಹಾಡಲು ಅವಕಾಶ ಕೊಡಿಸುವುದಾಗಿ ಹೇಳಿ ನಂಬಿಸಿ ಸಲುಗೆ ಬೆಳೆಸಿಕೊಂಡಿದ್ದ.

ಕಳೆದ ಜನವರಿ ತಿಂಗಳಲ್ಲಿ ಶಿರಸಿಗೆ ತೆರಳಿದ್ದ ಪ್ರಶಾಂತ, ಅಲ್ಲಿ ಯುವತಿಯನ್ನು ಲಾಡ್ಜ್ ಗೆ ಕರೆಸಿಕೊಂಡಿದ್ದ. ಅಲ್ಲದೆ, ಸುತ್ತಾಟವನ್ನೂ ಮಾಡಿದ್ದರು. ಈ ವೇಳೆ, ಯುವತಿ ಜೊತೆಗೆ ಫೋಟೊ ತೆಗೆಸಿಕೊಂಡಿದ್ದು ಆನಂತರ ಅದನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದಾನೆ. ಲಾಡ್ಜ್ ನಲ್ಲಿ ತೆಗೆದಿರುವ ಫೋಟೊವನ್ನು ಗಂಡನಿಗೆ ತೋರಿಸುತ್ತೇನೆ, ತಾಯಿಗೆ ಕಳಿಸುತ್ತೇನೆಂದು ಹೇಳಿ ಹಣಕ್ಕಾಗಿ ಬ್ಲಾಕ್ಮೇಲ್ ಆರಂಭಿಸಿದ್ದ. ಮೊಬೈಲಿನಲ್ಲಿ ನಗ್ನವಾಗಿ ದೇಹ ತೋರಿಸುವಂತೆ ಒತ್ತಡ ಹಾಕುತ್ತಿದ್ದ. ಈ ನಡುವೆ, ಪ್ರಶಾಂತ ಭಟ್ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗುತ್ತಿದ್ದು ಹಣ ನೀಡದೇ ಇದ್ದಾಗ ಫೋಟೊಗಳನ್ನು ಯುವತಿಯ ತಾಯಿಗೆ ಕಳಿಸಿದ್ದ.
ಇದರಿಂದ ಬೇಸತ್ತ ಯುವತಿ ಕಾರವಾರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪೊಲೀಸರು ಆರೋಪಿ ಪ್ರಶಾಂತ ಭಟ್ ನನ್ನು ಬಂಧಿಸಿ ಕರೆದೊಯ್ದಿದ್ದಾರೆ. ಪ್ರಶಾಂತ್ ಭಟ್ ಈ ಹಿಂದೆ ಸುಬ್ರಹ್ಮಣ್ಯದಲ್ಲಿ ಮಠದ ವಿರುದ್ಧ ಹೋರಾಟ ನಡೆಸಿದ್ದವರಲ್ಲಿ ಪ್ರಮುಖನಾಗಿದ್ದ.
Mangalore Case filed against former Subramanya gram panchyath member Prashanth Bhat for blackmailing married woman. The accused is identified as Prashant Bhat Manila. The complainant woman was interested in music and used to sing in Clubhouse, an app. She got acquainted with the accused through the app.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am