ಬ್ರೇಕಿಂಗ್ ನ್ಯೂಸ್
29-09-23 07:00 pm Mangalore Correspondent ಕ್ರೈಂ
ಪುತ್ತೂರು, ಸೆ.29: ವಿವಾಹಿತ ಮಹಿಳೆಯ ಜೊತೆ ಸಲುಗೆ ಬೆಳೆಸಿಕೊಂಡಿದ್ದಲ್ಲದೆ, ಆಕೆಯ ಜೊತೆಗೆ ಫೋಟೊ ತೆಗೆದು ಬ್ಲಾಕ್ಮೇಲ್ ನಡೆಸಿರುವ ಘಟನೆ ನಡೆದಿದ್ದು, ಪ್ರಕರಣದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯರೊಬ್ಬರನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಆರ್ಲಪದವು ನಿವಾಸಿ ಪ್ರಶಾಂತ ಭಟ್ ಮಾಣಿಲ(35) ಬಂಧಿತ ಆರೋಪಿ. ಸುಬ್ರಹ್ಮಣ್ಯದಲ್ಲಿ ಸಾಮಾಜಿಕ ಹಾಗೂ ರಾಜಕೀಯವಾಗಿ ತೊಡಗಿಸಿಕೊಂಡಿದ್ದ ಪ್ರಶಾಂತ ಭಟ್ ವಿರುದ್ಧ ಕಾರವಾರ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ವಿವಾಹಿತ ಮಹಿಳೆಯೊಬ್ಬರಿಗೆ ಜಾಲತಾಣದಲ್ಲಿ ಪರಿಚಯ ಆಗಿದ್ದ ಪ್ರಶಾಂತ ಭಟ್, ಬಳಿಕ ಆರ್ಕೆಸ್ಟ್ರಾದಲ್ಲಿ ಹಾಡಲು ಅವಕಾಶ ಕೊಡಿಸುವುದಾಗಿ ಹೇಳಿ ನಂಬಿಸಿ ಸಲುಗೆ ಬೆಳೆಸಿಕೊಂಡಿದ್ದ.

ಕಳೆದ ಜನವರಿ ತಿಂಗಳಲ್ಲಿ ಶಿರಸಿಗೆ ತೆರಳಿದ್ದ ಪ್ರಶಾಂತ, ಅಲ್ಲಿ ಯುವತಿಯನ್ನು ಲಾಡ್ಜ್ ಗೆ ಕರೆಸಿಕೊಂಡಿದ್ದ. ಅಲ್ಲದೆ, ಸುತ್ತಾಟವನ್ನೂ ಮಾಡಿದ್ದರು. ಈ ವೇಳೆ, ಯುವತಿ ಜೊತೆಗೆ ಫೋಟೊ ತೆಗೆಸಿಕೊಂಡಿದ್ದು ಆನಂತರ ಅದನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದಾನೆ. ಲಾಡ್ಜ್ ನಲ್ಲಿ ತೆಗೆದಿರುವ ಫೋಟೊವನ್ನು ಗಂಡನಿಗೆ ತೋರಿಸುತ್ತೇನೆ, ತಾಯಿಗೆ ಕಳಿಸುತ್ತೇನೆಂದು ಹೇಳಿ ಹಣಕ್ಕಾಗಿ ಬ್ಲಾಕ್ಮೇಲ್ ಆರಂಭಿಸಿದ್ದ. ಮೊಬೈಲಿನಲ್ಲಿ ನಗ್ನವಾಗಿ ದೇಹ ತೋರಿಸುವಂತೆ ಒತ್ತಡ ಹಾಕುತ್ತಿದ್ದ. ಈ ನಡುವೆ, ಪ್ರಶಾಂತ ಭಟ್ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗುತ್ತಿದ್ದು ಹಣ ನೀಡದೇ ಇದ್ದಾಗ ಫೋಟೊಗಳನ್ನು ಯುವತಿಯ ತಾಯಿಗೆ ಕಳಿಸಿದ್ದ.
ಇದರಿಂದ ಬೇಸತ್ತ ಯುವತಿ ಕಾರವಾರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪೊಲೀಸರು ಆರೋಪಿ ಪ್ರಶಾಂತ ಭಟ್ ನನ್ನು ಬಂಧಿಸಿ ಕರೆದೊಯ್ದಿದ್ದಾರೆ. ಪ್ರಶಾಂತ್ ಭಟ್ ಈ ಹಿಂದೆ ಸುಬ್ರಹ್ಮಣ್ಯದಲ್ಲಿ ಮಠದ ವಿರುದ್ಧ ಹೋರಾಟ ನಡೆಸಿದ್ದವರಲ್ಲಿ ಪ್ರಮುಖನಾಗಿದ್ದ.
Mangalore Case filed against former Subramanya gram panchyath member Prashanth Bhat for blackmailing married woman. The accused is identified as Prashant Bhat Manila. The complainant woman was interested in music and used to sing in Clubhouse, an app. She got acquainted with the accused through the app.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm