ಬ್ರೇಕಿಂಗ್ ನ್ಯೂಸ್
01-10-23 03:57 pm Mangalore Correspondent ಕ್ರೈಂ
ಪುತ್ತೂರು, ಅ.1: ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿಗೆ ಒಟಿಪಿ ಹೇಳಿದ ಕೂಲಿ ಕಾರ್ಮಿಕರೋರ್ವರು ತನ್ನ ಖಾತೆಯಲ್ಲಿದ್ದ 1 ಲಕ್ಷ ರೂ. ಕಳೆದುಕೊಂಡ ಘಟನೆ ತಾಲೂಕಿನ ತಿಂಗಳಾಡಿಯಲ್ಲಿ ನಡೆದಿದೆ.
ವ್ಯಕ್ತಿಯ ಮೊಬೈಲ್ಗೆ ಸೆ.30ರಂದು ಬೆಳಗ್ಗೆ ಸಂದೇಶ ಬಂದಿದ್ದು ನಿಮ್ಮ ಅಕೌಂಟ್ ನಂಬರ್ಗೆ ತಕ್ಷಣವೇ ಕೆವೈಸಿ ಮಾಡಬೇಕು ಎಂದು ತಿಳಿಸಿ ಕೆಳಗೆ ಕೆನರಾ ಬ್ಯಾಂಕ್ ಎಂದು ಬರೆಯಲಾಗಿತ್ತು. ಈ ಬಗ್ಗೆ ಅವರು ಪುತ್ರನ ಬಳಿ ವಿಚಾರಿಸಿದಾಗ, ಬ್ಯಾಂಕ್ಗೆ ಹೋಗಿ ಅಲ್ಲಿ ಅವರು ಕೆವೈಸಿ ಮಾಡಿಕೊಡುತ್ತಾರೆ ಎಂದಿದ್ದರು.
ಮಧ್ಯಾಹ್ನ ವೇಳೆಗೆ ಕರೆ ಬಂದಿದ್ದು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಯೊಬ್ಬ ಅಕೌಂಟ್ ನಂಬರ್ ಹೇಳಿದ್ದು, ಅದು ನನ್ನ ಅಕೌಂಟ್ ಎಂದು ಕೂಲಿ ಕಾರ್ಮಿಕ ಉತ್ತರಿಸಿದ್ದ. ಆಗ ನಿಮ್ಮ ಮೊಬೈಲ್ಗೆ ಒಟಿಪಿ ಬಂದಿದೆ. ಅದನ್ನು ಹೇಳಿ ಎಂದು ಹೇಳಿದ್ದಾಗ ಕೂಲಿ ಕಾರ್ಮಿಕ ಒಟಿಪಿ ನಂಬರ್ ಹೇಳಿದ್ದಾರೆ. ತಕ್ಷಣವೇ ಅಕೌಂಟ್ನಲ್ಲಿದ್ದ 1 ಲಕ್ಷ ರೂ. ಖೋತಾ ಆಗಿರುವ ಬಗ್ಗೆ ಮೊಬೈಲಿಗೆ ಮೆಸೇಜ್ ಬಂದಿತ್ತು.
ಹಣ ಕಳೆದುಕೊಂಡ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಅಲ್ಪಸ್ವಲ್ಪ ಕೂಡಿಟ್ಟ ಹಣದ ಜತೆಗೆ ಇತ್ತೀಚೆಗೆ ಸಾಲದ ರೂಪದಲ್ಲಿ ಪಡೆದ ಹಣವನ್ನು ಬ್ಯಾಂಕ್ ಖಾತೆಗೆ ಹಾಕಿದ್ದರು. ಕೂಡಿಟ್ಟ ಹಣದ ಜೊತೆಗೆ ಸಾಲದ ಹಣವೂ ವಂಚಕರ ಪಾಲಾಗಿದೆ.
Kyc otp fraud, coolie worker looses one lakh from his account at Puttur in Mangalore
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm