ಬ್ರೇಕಿಂಗ್ ನ್ಯೂಸ್
01-10-23 03:57 pm Mangalore Correspondent ಕ್ರೈಂ
ಪುತ್ತೂರು, ಅ.1: ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿಗೆ ಒಟಿಪಿ ಹೇಳಿದ ಕೂಲಿ ಕಾರ್ಮಿಕರೋರ್ವರು ತನ್ನ ಖಾತೆಯಲ್ಲಿದ್ದ 1 ಲಕ್ಷ ರೂ. ಕಳೆದುಕೊಂಡ ಘಟನೆ ತಾಲೂಕಿನ ತಿಂಗಳಾಡಿಯಲ್ಲಿ ನಡೆದಿದೆ.
ವ್ಯಕ್ತಿಯ ಮೊಬೈಲ್ಗೆ ಸೆ.30ರಂದು ಬೆಳಗ್ಗೆ ಸಂದೇಶ ಬಂದಿದ್ದು ನಿಮ್ಮ ಅಕೌಂಟ್ ನಂಬರ್ಗೆ ತಕ್ಷಣವೇ ಕೆವೈಸಿ ಮಾಡಬೇಕು ಎಂದು ತಿಳಿಸಿ ಕೆಳಗೆ ಕೆನರಾ ಬ್ಯಾಂಕ್ ಎಂದು ಬರೆಯಲಾಗಿತ್ತು. ಈ ಬಗ್ಗೆ ಅವರು ಪುತ್ರನ ಬಳಿ ವಿಚಾರಿಸಿದಾಗ, ಬ್ಯಾಂಕ್ಗೆ ಹೋಗಿ ಅಲ್ಲಿ ಅವರು ಕೆವೈಸಿ ಮಾಡಿಕೊಡುತ್ತಾರೆ ಎಂದಿದ್ದರು.
ಮಧ್ಯಾಹ್ನ ವೇಳೆಗೆ ಕರೆ ಬಂದಿದ್ದು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಯೊಬ್ಬ ಅಕೌಂಟ್ ನಂಬರ್ ಹೇಳಿದ್ದು, ಅದು ನನ್ನ ಅಕೌಂಟ್ ಎಂದು ಕೂಲಿ ಕಾರ್ಮಿಕ ಉತ್ತರಿಸಿದ್ದ. ಆಗ ನಿಮ್ಮ ಮೊಬೈಲ್ಗೆ ಒಟಿಪಿ ಬಂದಿದೆ. ಅದನ್ನು ಹೇಳಿ ಎಂದು ಹೇಳಿದ್ದಾಗ ಕೂಲಿ ಕಾರ್ಮಿಕ ಒಟಿಪಿ ನಂಬರ್ ಹೇಳಿದ್ದಾರೆ. ತಕ್ಷಣವೇ ಅಕೌಂಟ್ನಲ್ಲಿದ್ದ 1 ಲಕ್ಷ ರೂ. ಖೋತಾ ಆಗಿರುವ ಬಗ್ಗೆ ಮೊಬೈಲಿಗೆ ಮೆಸೇಜ್ ಬಂದಿತ್ತು.
ಹಣ ಕಳೆದುಕೊಂಡ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಅಲ್ಪಸ್ವಲ್ಪ ಕೂಡಿಟ್ಟ ಹಣದ ಜತೆಗೆ ಇತ್ತೀಚೆಗೆ ಸಾಲದ ರೂಪದಲ್ಲಿ ಪಡೆದ ಹಣವನ್ನು ಬ್ಯಾಂಕ್ ಖಾತೆಗೆ ಹಾಕಿದ್ದರು. ಕೂಡಿಟ್ಟ ಹಣದ ಜೊತೆಗೆ ಸಾಲದ ಹಣವೂ ವಂಚಕರ ಪಾಲಾಗಿದೆ.
Kyc otp fraud, coolie worker looses one lakh from his account at Puttur in Mangalore
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 09:19 pm
HK News Staffer
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಕೇಂದ್ರ...
17-03-26 05:46 pm
ಸಂಚಾರ ನಿಯಮ ಉಲ್ಲಂಘನೆ ; ಸುಳ್ಯದಲ್ಲಿ 'ಸಮುದಾಯ ಸೇವೆ...
17-03-26 03:06 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am