ಬ್ರೇಕಿಂಗ್ ನ್ಯೂಸ್
04-10-23 09:54 pm Mangalore Correspondent ಕ್ರೈಂ
ಮಂಗಳೂರು, ಅ.4: ಕಳ್ಳತನ ಪ್ರಕರಣದ ಬೆನ್ನು ಹತ್ತಿದ ಮುಲ್ಕಿ ಠಾಣೆ ಪೊಲೀಸರು ದಾವಣಗೆರೆ ಮೂಲದ ನಟೋರಿಯಸ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಚಿನ್ನಾಭರಣ ಸಹಿತ 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನೂರು ಮಲಟ್ಟೆಹಳ್ಳಿ ಬಾಪೂಜಿ ಬಡಾವಣೆ ನಿವಾಸಿಗಳಾದ ರಘು ಎಸ್(30), ಮಂಜುನಾಥ (28), ವಿನೋಬ ನಗರ ನಿವಾಸಿ ಪ್ರಮೋದ್ ವಿ.(23), ಆವರಗೇರಿ, ಗೋಶಾಲೆ ನಿವಾಸಿ ಎಚ್.ರವಿಕಿರಣ್ (23), ಆವರಗೆರೆ ನಿವಾಸಿ ದವಲ ಸಾಬ್ (23), ಮಾಳಶೆಟ್ಟಿ ಗ್ರಾಮದ ಹೊನ್ನೂರು ನಿವಾಸಿ ಮಂಜುನಾಥ (29) ಬಂಧಿತರು. ಆರೋಪಿಗಳಿಂದ ಕಳವು ಮಾಡಿದ್ದ ಒಂದು ಹೋಂಡಾ ಬೈಕ್, 1 ರಾಯಲ್ ಎನ್ ಫೀಲ್ಡ್, 1 ಕಾರು ಮತ್ತು ಕರಿಮಣಿ ಸರ ಸೇರಿ ಒಟ್ಟು 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರ ಪೈಕಿ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಇಬ್ಬರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕಳೆದ ಸೆಪ್ಟೆಂಬರ್ 17ರಂದು ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ನಾಡಿನ ಚಂದ್ರಮೌಳೇಶ್ವರ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಾಸಂತಿ ಶೆಟ್ಟಿ ಎಂಬವರ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಅದೇ ದಿನ ಚಂದ್ರಮೌಳೇಶ್ವರ ಬಸ್ ನಿಲ್ದಾಣದ ಬಳಿ ಸೂರ್ಯಪ್ರಕಾಶ ಎನ್ ಎಂಬವರು ನಿಲ್ಲಿಸಿದ್ದ ಕೆಎ-19-ಇಸಿ-2398 ರ ನೋಂದಣಿ ಸಂಖ್ಯೆಯಲ್ಲಿರುವ ಬಜಾಜ್ ಡಿಸ್ಕವರಿ ಬೈಕ್ ಕಳವು ಮಾಡಲಾಗಿತ್ತು. ಈ ಎರಡೂ ಕಳ್ಳತನಕ್ಕೆ ಸಂಬಂಧಿಸಿದಂತೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸುಳಿವು ಆಧರಿಸಿ ದಾವಣಗೆರೆಯಲ್ಲಿ ಅಡಗಿದ್ದ ತಂಡವನ್ನು ಬಂಧಿಸಿದ್ದಾರೆ.
Mangalore Mulki robbery case, Five notorious robbers arrested from Davanagere.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm