ಬ್ರೇಕಿಂಗ್ ನ್ಯೂಸ್
04-10-23 09:54 pm Mangalore Correspondent ಕ್ರೈಂ
ಮಂಗಳೂರು, ಅ.4: ಕಳ್ಳತನ ಪ್ರಕರಣದ ಬೆನ್ನು ಹತ್ತಿದ ಮುಲ್ಕಿ ಠಾಣೆ ಪೊಲೀಸರು ದಾವಣಗೆರೆ ಮೂಲದ ನಟೋರಿಯಸ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಚಿನ್ನಾಭರಣ ಸಹಿತ 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನೂರು ಮಲಟ್ಟೆಹಳ್ಳಿ ಬಾಪೂಜಿ ಬಡಾವಣೆ ನಿವಾಸಿಗಳಾದ ರಘು ಎಸ್(30), ಮಂಜುನಾಥ (28), ವಿನೋಬ ನಗರ ನಿವಾಸಿ ಪ್ರಮೋದ್ ವಿ.(23), ಆವರಗೇರಿ, ಗೋಶಾಲೆ ನಿವಾಸಿ ಎಚ್.ರವಿಕಿರಣ್ (23), ಆವರಗೆರೆ ನಿವಾಸಿ ದವಲ ಸಾಬ್ (23), ಮಾಳಶೆಟ್ಟಿ ಗ್ರಾಮದ ಹೊನ್ನೂರು ನಿವಾಸಿ ಮಂಜುನಾಥ (29) ಬಂಧಿತರು. ಆರೋಪಿಗಳಿಂದ ಕಳವು ಮಾಡಿದ್ದ ಒಂದು ಹೋಂಡಾ ಬೈಕ್, 1 ರಾಯಲ್ ಎನ್ ಫೀಲ್ಡ್, 1 ಕಾರು ಮತ್ತು ಕರಿಮಣಿ ಸರ ಸೇರಿ ಒಟ್ಟು 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರ ಪೈಕಿ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಇಬ್ಬರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕಳೆದ ಸೆಪ್ಟೆಂಬರ್ 17ರಂದು ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ನಾಡಿನ ಚಂದ್ರಮೌಳೇಶ್ವರ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಾಸಂತಿ ಶೆಟ್ಟಿ ಎಂಬವರ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಅದೇ ದಿನ ಚಂದ್ರಮೌಳೇಶ್ವರ ಬಸ್ ನಿಲ್ದಾಣದ ಬಳಿ ಸೂರ್ಯಪ್ರಕಾಶ ಎನ್ ಎಂಬವರು ನಿಲ್ಲಿಸಿದ್ದ ಕೆಎ-19-ಇಸಿ-2398 ರ ನೋಂದಣಿ ಸಂಖ್ಯೆಯಲ್ಲಿರುವ ಬಜಾಜ್ ಡಿಸ್ಕವರಿ ಬೈಕ್ ಕಳವು ಮಾಡಲಾಗಿತ್ತು. ಈ ಎರಡೂ ಕಳ್ಳತನಕ್ಕೆ ಸಂಬಂಧಿಸಿದಂತೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸುಳಿವು ಆಧರಿಸಿ ದಾವಣಗೆರೆಯಲ್ಲಿ ಅಡಗಿದ್ದ ತಂಡವನ್ನು ಬಂಧಿಸಿದ್ದಾರೆ.
Mangalore Mulki robbery case, Five notorious robbers arrested from Davanagere.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 09:19 pm
HK News Staffer
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಕೇಂದ್ರ...
17-03-26 05:46 pm
ಸಂಚಾರ ನಿಯಮ ಉಲ್ಲಂಘನೆ ; ಸುಳ್ಯದಲ್ಲಿ 'ಸಮುದಾಯ ಸೇವೆ...
17-03-26 03:06 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am