ಬ್ರೇಕಿಂಗ್ ನ್ಯೂಸ್
04-10-23 09:54 pm Mangalore Correspondent ಕ್ರೈಂ
ಮಂಗಳೂರು, ಅ.4: ಕಳ್ಳತನ ಪ್ರಕರಣದ ಬೆನ್ನು ಹತ್ತಿದ ಮುಲ್ಕಿ ಠಾಣೆ ಪೊಲೀಸರು ದಾವಣಗೆರೆ ಮೂಲದ ನಟೋರಿಯಸ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಚಿನ್ನಾಭರಣ ಸಹಿತ 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನೂರು ಮಲಟ್ಟೆಹಳ್ಳಿ ಬಾಪೂಜಿ ಬಡಾವಣೆ ನಿವಾಸಿಗಳಾದ ರಘು ಎಸ್(30), ಮಂಜುನಾಥ (28), ವಿನೋಬ ನಗರ ನಿವಾಸಿ ಪ್ರಮೋದ್ ವಿ.(23), ಆವರಗೇರಿ, ಗೋಶಾಲೆ ನಿವಾಸಿ ಎಚ್.ರವಿಕಿರಣ್ (23), ಆವರಗೆರೆ ನಿವಾಸಿ ದವಲ ಸಾಬ್ (23), ಮಾಳಶೆಟ್ಟಿ ಗ್ರಾಮದ ಹೊನ್ನೂರು ನಿವಾಸಿ ಮಂಜುನಾಥ (29) ಬಂಧಿತರು. ಆರೋಪಿಗಳಿಂದ ಕಳವು ಮಾಡಿದ್ದ ಒಂದು ಹೋಂಡಾ ಬೈಕ್, 1 ರಾಯಲ್ ಎನ್ ಫೀಲ್ಡ್, 1 ಕಾರು ಮತ್ತು ಕರಿಮಣಿ ಸರ ಸೇರಿ ಒಟ್ಟು 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರ ಪೈಕಿ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಇಬ್ಬರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕಳೆದ ಸೆಪ್ಟೆಂಬರ್ 17ರಂದು ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ನಾಡಿನ ಚಂದ್ರಮೌಳೇಶ್ವರ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಾಸಂತಿ ಶೆಟ್ಟಿ ಎಂಬವರ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಅದೇ ದಿನ ಚಂದ್ರಮೌಳೇಶ್ವರ ಬಸ್ ನಿಲ್ದಾಣದ ಬಳಿ ಸೂರ್ಯಪ್ರಕಾಶ ಎನ್ ಎಂಬವರು ನಿಲ್ಲಿಸಿದ್ದ ಕೆಎ-19-ಇಸಿ-2398 ರ ನೋಂದಣಿ ಸಂಖ್ಯೆಯಲ್ಲಿರುವ ಬಜಾಜ್ ಡಿಸ್ಕವರಿ ಬೈಕ್ ಕಳವು ಮಾಡಲಾಗಿತ್ತು. ಈ ಎರಡೂ ಕಳ್ಳತನಕ್ಕೆ ಸಂಬಂಧಿಸಿದಂತೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸುಳಿವು ಆಧರಿಸಿ ದಾವಣಗೆರೆಯಲ್ಲಿ ಅಡಗಿದ್ದ ತಂಡವನ್ನು ಬಂಧಿಸಿದ್ದಾರೆ.
Mangalore Mulki robbery case, Five notorious robbers arrested from Davanagere.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm