ಬ್ರೇಕಿಂಗ್ ನ್ಯೂಸ್
04-10-23 09:54 pm Mangalore Correspondent ಕ್ರೈಂ
ಮಂಗಳೂರು, ಅ.4: ಕಳ್ಳತನ ಪ್ರಕರಣದ ಬೆನ್ನು ಹತ್ತಿದ ಮುಲ್ಕಿ ಠಾಣೆ ಪೊಲೀಸರು ದಾವಣಗೆರೆ ಮೂಲದ ನಟೋರಿಯಸ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಚಿನ್ನಾಭರಣ ಸಹಿತ 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನೂರು ಮಲಟ್ಟೆಹಳ್ಳಿ ಬಾಪೂಜಿ ಬಡಾವಣೆ ನಿವಾಸಿಗಳಾದ ರಘು ಎಸ್(30), ಮಂಜುನಾಥ (28), ವಿನೋಬ ನಗರ ನಿವಾಸಿ ಪ್ರಮೋದ್ ವಿ.(23), ಆವರಗೇರಿ, ಗೋಶಾಲೆ ನಿವಾಸಿ ಎಚ್.ರವಿಕಿರಣ್ (23), ಆವರಗೆರೆ ನಿವಾಸಿ ದವಲ ಸಾಬ್ (23), ಮಾಳಶೆಟ್ಟಿ ಗ್ರಾಮದ ಹೊನ್ನೂರು ನಿವಾಸಿ ಮಂಜುನಾಥ (29) ಬಂಧಿತರು. ಆರೋಪಿಗಳಿಂದ ಕಳವು ಮಾಡಿದ್ದ ಒಂದು ಹೋಂಡಾ ಬೈಕ್, 1 ರಾಯಲ್ ಎನ್ ಫೀಲ್ಡ್, 1 ಕಾರು ಮತ್ತು ಕರಿಮಣಿ ಸರ ಸೇರಿ ಒಟ್ಟು 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರ ಪೈಕಿ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಇಬ್ಬರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕಳೆದ ಸೆಪ್ಟೆಂಬರ್ 17ರಂದು ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ನಾಡಿನ ಚಂದ್ರಮೌಳೇಶ್ವರ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಾಸಂತಿ ಶೆಟ್ಟಿ ಎಂಬವರ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಅದೇ ದಿನ ಚಂದ್ರಮೌಳೇಶ್ವರ ಬಸ್ ನಿಲ್ದಾಣದ ಬಳಿ ಸೂರ್ಯಪ್ರಕಾಶ ಎನ್ ಎಂಬವರು ನಿಲ್ಲಿಸಿದ್ದ ಕೆಎ-19-ಇಸಿ-2398 ರ ನೋಂದಣಿ ಸಂಖ್ಯೆಯಲ್ಲಿರುವ ಬಜಾಜ್ ಡಿಸ್ಕವರಿ ಬೈಕ್ ಕಳವು ಮಾಡಲಾಗಿತ್ತು. ಈ ಎರಡೂ ಕಳ್ಳತನಕ್ಕೆ ಸಂಬಂಧಿಸಿದಂತೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸುಳಿವು ಆಧರಿಸಿ ದಾವಣಗೆರೆಯಲ್ಲಿ ಅಡಗಿದ್ದ ತಂಡವನ್ನು ಬಂಧಿಸಿದ್ದಾರೆ.
Mangalore Mulki robbery case, Five notorious robbers arrested from Davanagere.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm