ಬ್ರೇಕಿಂಗ್ ನ್ಯೂಸ್
05-10-23 02:27 pm Mangalore Correspondent ಕ್ರೈಂ
ಮಂಗಳೂರು, ಅ.5: ಉತ್ತರ ಪ್ರದೇಶದಿಂದ ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯರಾಜ್ ಸಿಂಗ್ (26) ಹಾಗೂ ರಾಜ್ ಪುರದ ಹರಿಶಂಕರ್ ಗಿರಿ(25) ಬಂಧಿತ ಆರೋಪಿಗಳು. ಸೆಪ್ಟೆಂಬರ್ 28ರಂದು ಮಂಗಳೂರು ಮತ್ತು ಸುರತ್ಕಲ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ಮಾಡಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ರೈಲಿನಲ್ಲಿದ್ದ ಇಬ್ಬರು ಯುವಕರ ಬಗ್ಗೆ ಸಂಶಯಗೊಂಡು ಅವರನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿತ್ತು. ಆಗ ತಮ್ಮ ಕಳ್ಳತನ ಕೃತ್ಯದ ಬಗ್ಗೆ ತಿಳಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದ ಆರ್ ಪಿಎಫ್ ತಂಡ ರೈಲ್ವೇ ಪೊಲೀಸರಿಗೆ ಒಪ್ಪಿಸಿದ್ದಾರೆ.

ತನಿಖೆ ವೇಳೆ ಆರೋಪಿಗಳು ಉತ್ತರಪ್ರದೇಶದಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ ರಾತ್ರಿ ವೇಳೆ ಸಂಚರಿಸುವ ರೈಲನ್ನು ಟಾರ್ಗೆಟ್ ಮಾಡಿ ಪ್ರಯಾಣ ಮಾಡುತ್ತಿದ್ದರು. ರಾತ್ರಿ ಮಲಗಿರುತ್ತಿದ್ದ ವೃದ್ಧ ಹಾಗೂ ಮಹಿಳಾ ಪ್ರಯಾಣಿಕರ ಚಿನ್ನಾಭರಣಗಳನ್ನು ದೋಚಲು ಪ್ಲ್ಯಾನ್ ಮಾಡುತ್ತಿದ್ದರು. ರಾತ್ರಿ ವೇಳೆ ರೈಲಿನ ವೇಗ ಕಡಿಮೆಯಾಗುತ್ತಿದ್ದಂತೆ ಚಿನ್ನಾಭರಣಗಳನ್ನು ಎಳೆದೊಯ್ದು ಬೋಗಿಯಿಂದ ಹೊರಜಿಗಿದು ಪರಾರಿಯಾಗುತ್ತಿದ್ದರು.

ಆರೋಪಿಗಳು ಪಾಲಕ್ಕಾಡ್, ತಿರುವನಂತಪುರಂ ಹಾಗೂ ಮಂಗಳೂರು - ಮುಂಬೈ ನಡುವಿನ ಕೊಂಕಣ ರೈಲ್ವೆಯ ರೈಲಿನಲ್ಲಿ ಹೆಚ್ಚು ಕಳವು ಮಾಡುತ್ತಿದ್ದರು. ರೈಲು ಪ್ರಯಾಣಿಕರಿಂದ ಕದ್ದು ಇರಿಸಿಕೊಂಡಿದ್ದ 125 ಗ್ರಾಂ ಚಿನ್ನಾಭರಣಗಳನ್ನು ರೈಲ್ವೆ ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ.
Robbers come in fight, loot gold from passengera at train in Mangalore, two arrested by railway police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm