ಬ್ರೇಕಿಂಗ್ ನ್ಯೂಸ್
05-10-23 10:13 pm HK News Desk ಕ್ರೈಂ
ಉತ್ತರ ಪ್ರದೇಶ, ಅ 05: ಕಾನೂನು ವಿದ್ಯಾರ್ಥಿಯೊಬ್ಬನಿಗೆ ಲೈಂಗಿಕ ಸುಲಿಗೆಕೋರರು ಹಿಂಸೆ ಕೊಟ್ಟ ಘಟನೆ ಉತ್ತರ ಪ್ರದೇಶದ ಲಖನೌನಲ್ಲಿ ನಡೆದಿದೆ. ಬಿಹಾರ ಮೂಲದ ಕಾನೂನು ವಿದ್ಯಾರ್ಥಿಗೆ ಕಾಡಿದ ಲೈಂಗಿಕ ಸುಲಿಗೆಕೋರರು ಆತನಿಂದ 77 ಸಾವಿರ ರೂ. ವಸೂಲಿ ಮಾಡಿದ್ದಾರೆ.
ಕಾಲೇಜ್ನ ಹಾಸ್ಟೆಲ್ ರೂಂನಲ್ಲಿ ಇದ್ದ ಕಾನೂನು ವಿದ್ಯಾರ್ಥಿಯ ಮೊಬೈಲ್ಗೆ ಅಪರಿಚಿತ ನಂಬರ್ ಒಂದರಿಂದ ವಿಡಿಯೋ ಕಾಲ್ ಬಂದಿತ್ತು. ಕಾಲ್ ರಿಸೀವ್ ಮಾಡಿದ ಕೂಡಲೇ ಬೆತ್ತಲಾಗಿದ್ದ ಯುವತಿಯೊಬ್ಬಳ ವಿಡಿಯೋ ಕಾಣ ಸಿಕ್ಕಿತ್ತು. ಆ ಯುವತಿಯು ನೀನೂ ಕೂಡಾ ಬೆತ್ತಲಾಗು ಎಂದು ವಿದ್ಯಾರ್ಥಿಗೆ ಪುಸಲಾಯಿಸಿದ್ದಳು. ಯುವತಿಯ ಮಾತಿಗೆ ಮರುಳಾದ ವಿದ್ಯಾರ್ಥಿ ಆಕೆ ಹೇಳಿದಂತೆಯೇ ತಾನೂ ಬೆತ್ತಲಾದ. ಕೇವಲ 30 ಸೆಕೆಂಡ್ನಲ್ಲಿಯೇ ಈ ಕರೆ ಕಡಿತವಾಗಿತ್ತು ಎನ್ನಲಾಗಿದೆ. ಇದಾದ ಕೂಡಲೇ ವಿದ್ಯಾರ್ಥಿಯ ಮೊಬೈಲ್ಗೆ ಬೆದರಿಕೆ ಕರೆ ಬಂತು. ವಿದ್ಯಾರ್ಥಿಗೆ ಕರೆ ಮಾಡಿದ್ದ ಯುವತಿ ಹಣ ಕೊಡು, ಇಲ್ಲವಾದ್ರೆ ನಿನ್ನ ಬೆತ್ತಲೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಮಾಡುತ್ತೇನೆ ಎಂದು ಬೆದರಿಕೆ ಹಾಕಿದಳು ಎನ್ನಲಾಗಿದೆ.
ಯುವತಿಯ ಬೆದರಿಕೆ ಕರೆಯಿಂದಾಗಿ ಕಂಗಾಲಾದ ವಿದ್ಯಾರ್ಥಿ ಕೂಡಲೇ ತನ್ನ ಎರಡು ಬ್ಯಾಂಕ್ ಖಾತೆಗಳಿಂದ ಒಟ್ಟು 77,599 ರೂ.ಗಳನ್ನು ಯುವತಿಯ ಖಾತೆಗೆ ವರ್ಗಾಯಿಸಿದ್ದಾನೆ. ಸೆಂಟ್ರಲ್ ಬ್ಯಾಂಕ್ ಹಾಗೂ ಕೆನರಾ ಬ್ಯಾಂಕ್ನ ಎರಡು ಖಾತೆಗಳಿಗೆ ಹಣ ವರ್ಗಾವಣೆ ಮಾಡಿರೋದಾಗಿ ಯುವಕ ಮಾಹಿತಿ ನೀಡಿದ್ದಾನೆ. ಇನ್ನು ಯುವತಿ ತನಗೆ ಕರೆ ಮಾಡಿದ ಮೊಬೈಲ್ ಸಮಖ್ಯೆ ಹನ್ಸ್ರಾಜ್ ಎಂಬುವನಿಗೆ ಸೇರಿದ್ದು ಎಂದು ವಿದ್ಯಾರ್ಥಿ ಪತ್ತೆ ಹಚ್ಚಿದ್ದಾನೆ. ಮತ್ತೊಂದು ನಂಬರ್ನ ಮೂಲ ಗೊತ್ತಾಗಿಲ್ಲ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ವಿಡಿಯೋ ಕರೆ ಬಳಿಕ ವಿದ್ಯಾರ್ಥಿಗೆ ಮೊದಲಿಗೆ ಯುವತಿಯ ಮೊಬೈಲ್ ಕರೆ ಬಂದಿದೆ. ಆಕೆ ವಿಡಿಯೋ ಡಿಲೀಟ್ ಮಾಡಲು 28 ಸಾವಿರ ರೂ. ಕೊಡು ಎಂದು ಬೇಡಿಕೆ ಇಟ್ಟಿದ್ದಾಳೆ. ಆಗ ಯುವಕ ಈ ಬೇಡಿಕೆ ತಿರಸ್ಕರಿಸಿದ್ದಾನೆ. ಹಣ ಕೊಡೋದಿಲ್ಲ ಎಂದು ಪಟ್ಟು ಹಿಡಿದಿದ್ದಾನೆ. ಈ ವೇಳೆ ಯುವತಿ ಕರೆ ಕಟ್ ಮಾಡಿದ್ದಾಳೆ. ನಂತರ ಪುರುಷನೊಬ್ಬನ ಮೊಬೈಲ್ ಕರೆ ಬಂದಿದೆ. ಆತ ತನ್ನನ್ನು ತಾನು ದಿಲ್ಲಿಯ ಪೊಲೀಸ್ ಆಯುಕ್ತ ಎಂದು ಪರಿಚಯಿಸಿಕೊಂಡಿದ್ದಾನೆ. ನೀನು ಹಣ ಕೊಡದಿದ್ದರೆ ನಿನ್ನ ಭವಿಷ್ಯವನ್ನೇ ಹಾಳು ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.
ಯುವತಿ ನಿನ್ನ ಜೊತೆ ಬೆತ್ತಲೆಯಾಗಿ ವಿಡಿಯೋ ಸಂಭಾಷಣೆ ಮಾಡಿದ್ದಾಳೆ. ಈ ಸಂಬಂಧ ನಾವು ಎಫ್ಐಆರ್ ದಾಖಲು ಮಾಡಿಕೊಂಡಿದ್ದೇವೆ. ಈಗಾಗಲೇ ವಿಡಿಯೋ ಯೂಟ್ಯೂಬ್ನಲ್ಲಿದೆ. ನೀನು ಹಣ ಕೊಡದೇ ಹೋದರೆ ಈ ವಿಡಿಯೋ ವೈರಲ್ ಆಗುತ್ತದೆ ಎಂದು ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದಾರೆ. ಹೀಗಾಗಿ, ಆತ ದಿಕ್ಕೇ ತೋಚದಂತಾಗಿ ಹಣ ನೀಡಿದ್ದಾನೆ ಎಂದು ಎಫ್ಐಆರ್ನಲ್ಲಿ ನಮೂದಿಸಲಾಗಿದೆ.
Law student blackmailed of naked video record in Uttar Pradesh.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm