ಬ್ರೇಕಿಂಗ್ ನ್ಯೂಸ್
06-10-23 05:37 pm Mangalore Correspondent ಕ್ರೈಂ
ಮಂಗಳೂರು, ಅ.6: ಆಧಾರ್, ರೇಶನ್ ಕಾರ್ಡ್, ಅಂಕಪಟ್ಟಿ ಮತ್ತಿತರ ಅತ್ಯಮೂಲ್ಯ ದಾಖಲೆ ಪತ್ರಗಳನ್ನೇ ಸೃಷ್ಟಿಸಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಮಂಗಳೂರು ನಗರದ ಕಂಕನಾಡಿ– ಪಂಪ್ವೆಲ್ ಹಳೆ ರಸ್ತೆಯ ವಿಶ್ವಾಸ್ ಕ್ರೌನ್ ಅಪಾರ್ಟ್ಮೆಂಟಿನ ನೆಲ ಅಂತಸ್ತಿನಲ್ಲಿ ‘’ಹೆಲ್ಪ್ ಲೈನ್ ಮಂಗಳೂರು” ಎಂಬ ಹೆಸರಿನ ಶಾಪ್ ಇಟ್ಟುಕೊಂಡು ನಕಲಿ ದಾಖಲಾತಿಗಳನ್ನು ತಯಾರಿಸಿಕೊಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಕರ್ನಕಟ್ಟೆ ನಿವಾಸಿ ಬರ್ನಾಡ್ ರೋಶನ್ ಮೆಸ್ಕರೇನಸ್ (41) ಬಂಧಿತ ವ್ಯಕ್ತಿ.
ಈತನ ಕಚೇರಿಯಲ್ಲಿ ಆಧಾರ್ ಕಾರ್ಡ್, ಪಡಿತರ ಚೀಟಿ, ನಕಲಿ ಶೈಕ್ಷಣಿಕ ದಾಖಲೆ ಪತ್ರಗಳು, ಜನನ ಪ್ರಮಾಣಪತ್ರ ಇತ್ಯಾದಿ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ಅವುಗಳನ್ನು ಬಳಸಿಕೊಂಡು ಇತರೇ ದಾಖಲಾತಿಗಳನ್ನು ಮಾಡಿಕೊಡುತ್ತಿದ್ದ. ಅವನ್ನೇ ನೈಜ ದಾಖಲಾತಿಗಳೆಂದು ನಂಬಿಸಿ ಸಾರ್ವಜನಿಕರಿಗೆ ಮತ್ತು ಸರಕಾರಕ್ಕೆ ವಂಚಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.
ದಾಳಿ ಸಂದರ್ಭದಲ್ಲಿ ವಿವಿಧ ಹೆಸರುಗಳಲ್ಲಿ ತಯಾರಿಸಿಟ್ಟಿದ್ದ ನಕಲಿ ಆಧಾರ್ ಕಾರ್ಡ್ ಗಳು, ನಕಲಿ ರೇಷನ್ ಕಾರ್ಡ್, ನಕಲಿ ಉದ್ದಿಮೆ ಪರವಾನಿಗೆ ಪತ್ರ, ನಕಲಿ ಎಸ್ಎಸ್ಎಲ್ಸಿ ಅಂಕಪಟ್ಟಿ, ನಕಲಿ ಜನನ ಪ್ರಮಾಣ ಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ಮೂರು ವರ್ಷಗಳಿಂದ ಈತನಿಂದ ನಕಲಿ ದಾಖಲಾತಿಗಳನ್ನು ಪಡೆದವರು ಬ್ಯಾಂಕ್ ಇನ್ನಿತರ ಕಚೇರಿಗಳಿಗೆ ಸಾಲ ಸೌಲಭ್ಯಕ್ಕಾಗಿ ಮತ್ತು ಸರಕಾರಿ ಸೌಲಭ್ಯಗಳನ್ನು ಪಡೆಯಲು ಉಪಯೋಗಿಸಿದ್ದಾರೆ. ಆಮೂಲಕ ಸರಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ನಷ್ಟ ಉಂಟು ಮಾಡಿದ್ದಾನೆ.
ನಕಲಿ ಪ್ರಮಾಣ ಪತ್ರಗಳನ್ನು ತಯಾರಿಸಲು ಬಳಸುತ್ತಿದ್ದ ಲ್ಯಾಪ್ ಟಾಪ್, ಕಲರ್ ಪ್ರಿಂಟರ್, ಲ್ಯಾಮಿನೇಟರ್ ಮೆಶಿನ್, ಬಯೋಮೆಟ್ರಿಕ್ ಡಿವೈಸ್ ಗಳನ್ನು ವಶಪಡಿಸಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕಲಿ ದಾಖಲೆ ಪತ್ರ ತಯಾರಿ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ.
ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಸಿಸಿಬಿ ಎಸಿಪಿ ಪಿಎ ಹೆಗಡೆ ಮಾರ್ಗದರ್ಶನದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮಸುಂದರ್, ತಂಡದ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
Mangalore Roshan Mascarenhas from Bikarnakatte arrested by CCB Police for creating Fake government documents. Roshan in the name of Help Line was creating documents like Aadhar, Ration and pan card, CCB Police Inspector Shyam Sundar and SI Sudeep have taken huge efforts to nab the accused.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am