ಬ್ರೇಕಿಂಗ್ ನ್ಯೂಸ್
11-10-23 10:53 am HK News Desk ಕ್ರೈಂ
ಕೊಚ್ಚಿ, ಅ.11: ಹೆತ್ತ ತಾಯಿಯೇ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು, ಅತ್ಯಾಚಾರ ನಡೆಸಲು ಅನುವು ಮಾಡಿಕೊಟ್ಟಿರುವ ಹೇಯ ಕೃತ್ಯ ನಡೆದಿದೆ. ನಿರೀಕ್ಷಣಾ ಜಾಮೀನು ಕೋರಿ ಆ ತಾಯಿಯು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿರುವ ಕೇರಳ ಹೈಕೋರ್ಟ್, ''ತಾಯ್ತನಕ್ಕೆ ಅಪಮಾನ'' ಎಂದಿದೆ.
ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ದೌರ್ಜನ್ಯ ನಡೆಸಲು ಮಲತಂದೆಗೆ ಅವಕಾಶ ಮಾಡಿಕೊಟ್ಟಿರುವ ಆರೋಪವು ಆ ತಾಯಿಯ ಮೇಲಿದೆ. ಅದಕ್ಕೆ ಸಂಬಂಧಿಸಿದಂತೆ ಆಕೆಯು ನಿರೀಕ್ಷಣಾ ಜಾಮೀನು ಕೋರಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಗೋಪಿನಾಥ್ ಪಿ, ''ತಾಯಿಯ ಮೇಲಿನ ಆರೋಪಗಳು ಸತ್ಯವೆಂದು ಸಾಬೀತಾದರೆ, ತಾಯ್ತನಕ್ಕೆ ಅಪಮಾನ ಮಾಡಿದಂತೆ'' ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಈ ಪ್ರಕರಣದಲ್ಲಿ ಹೆತ್ತ ತಾಯಿಯೂ ಆರೋಪಿಯಾಗಿರುವುದರಿಂದ ತನ್ನ ಅಪ್ರಾಪ್ತ ವಯಸ್ಸಿನ ಮಗಳಿಂದ ಆರೋಪಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಸಾಕ್ಷ್ಯ ಹೇಳಿಸುವ ಅಥವಾ ಪ್ರಭಾವ ಬೀರುವ ಸಾಧ್ಯತೆ ಇರುವುದನ್ನು ಕೋರ್ಟ್ ಗಮನಿಸಿದೆ. ಅದೇ ಕಾರಣದಿಂದಾಗಿ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಅರ್ಜಿದಾರರ ವಿರುದ್ಧ ಮಾಡಿರುವ ಆರೋಪಗಳು ತುಂಬಾ ಗಂಭೀರವಾದುದು, ಆ ಆರೋಪಗಳು ಸಾಬೀತಾದರೆ ತಾಯ್ತನಕ್ಕೆ ಅಪಮಾನ ಆದಂತೆ. ಅವರಿಗೆ ನಿರೀಕ್ಷಾ ಜಾಮೀನು ಕೊಡುವಂತಿಲ್ಲ. ಅರ್ಜಿದಾರ ಆರೋಪಿಯು ಅಪ್ರಾಪ್ತ ವಯಸ್ಸಿನ ಸಂತ್ರಸ್ತೆಯ ಹೆತ್ತ ತಾಯಿಯಾಗಿದ್ದು, ಮಗುವಿನ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಪ್ರಕರಣದಲ್ಲಿ ಎರಡನೇ ಆರೋಪಿ ಮತ್ತು ಅರ್ಜಿದಾರರ ಮಹಿಳೆಯ ಎದುರಲ್ಲಿಯೇ ಅತ್ಯಾಚಾರ ನಡೆದಿರುವುದಾಗಿ ಸಂತ್ರಸ್ತೆಯು ಹೇಳಿಕೆ ಕೊಟ್ಟಿದ್ದಾಳೆ. ಈ ಕಾರಣವೂ ಸಹ ಅರ್ಜಿದಾರರಿಗೆ ನಿರೀಕ್ಷಣಾ ಜಾಮೀನು ನೀಡುವುದರಿಂದ ನನ್ನನ್ನು ತಡೆದಿದೆ'' ಎಂದು ನ್ಯಾಯಮೂರ್ತಿಗಳು ಉಲ್ಲೇಖಿಸಿದ್ದಾರೆ.
ಅಪ್ರಾಪ್ತ ವಯಸ್ಸಿನ ಹುಡುಗಿಯ ಮೇಲೆ ನಡೆದಿರುವ ಅತ್ಯಾಚಾರದಲ್ಲಿ ಹೆತ್ತ ತಾಯಿಯು ಎರಡನೇ ಆರೋಪಿಯಾಗಿದ್ದಾರೆ. ಮಲತಂದೆಯು ಈ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದಾರೆ. ಪೋಕ್ಸೋ ಕಾಯ್ದೆಯ, ಐಪಿಸಿ ಸೆಕ್ಷನ್ 376(2)(n), 376 (3) ಹಾಗೂ ಮಕ್ಕಳ ಆರೈಕೆ ಮತ್ತು ರಕ್ಷಣಾ ಕಾಯ್ದೆ ಸೆಕ್ಷನ್ 75 ಅಡಿಯಲ್ಲಿ ಆರೋಪ ದಾಖಲಿಸಲಾಗಿದೆ.
2018ರ ಅಕ್ಟೋಬರ್ನಲ್ಲಿ ಮೊದಲನೆಯ ಆರೋಪಿಯು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದನು. ಅದಾದ ನಂತರ ನಿರಂತರವಾಗಿ ಹಲವು ಬಾರಿ ಕೊಪ್ಪಂನ ಬಾಡಿಗೆ ಮನೆಯಲ್ಲಿ ಅತ್ಯಾಚಾರ ಮಾಡಿದ್ದನು. ಕೊಯಮತ್ತೂರಿನ ಹೋಟೆಲ್ ಕ್ಯಾಸ್ಟಿಲೋದಲ್ಲಿ ತಾಯಿಯ ಒಪ್ಪಿಗೆ ಮೇರೆಗೆ ಆರೋಪಿಯು ಅತ್ಯಾಚಾರ ನಡೆಸಿರುವ ಆರೋಪ ಮಾಡಲಾಗಿದೆ. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಅಂತಿಮವಾಗಿ ಜಾಮೀನು ತಿರಸ್ಕರಿಸಿದರು.
The Kerala High Court has declined bail to a woman accused of letting step father of her minor daughter to rape her, saying if true the allegations against her are an insult to motherhood.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm