ಬ್ರೇಕಿಂಗ್ ನ್ಯೂಸ್
06-08-20 08:51 am Headline Karnataka News Network ಕ್ರೈಂ
ಮುಂಬೈ: ಬಾಲಿವುಡ್ ಕಿರುತೆರೆಯ ಪ್ರತಿಭಾನ್ವಿತ ನಟ ಸಮೀರ್ ಶರ್ಮಾ (44) ತಮ್ಮ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸಮೀರ್ ಶರ್ಮಾ ಮುಂಬೈನ ಪಶ್ಚಿಮ ಮಲಾಡ್ನ ರಸ್ತೆಯಲ್ಲಿರುವ ನೇಹಾ ಸಿಹೆಚ್ಎಸ್ ಬಿಲ್ಡಿಂಗ್ನ ಫ್ಲ್ಯಾಟ್ ನಲ್ಲಿ ವಾಸವಾಗಿದ್ದರು. ಆದರೆ ಬುಧವಾರ ರಾತ್ರಿ ಫ್ಲ್ಯಾಟ್ನ ಅಡುಗೆ ಮನೆಯಲ್ಲಿ ನೇಣು ಬಿಗಿದ ಸೀತಿಯಲ್ಲಿ ಪತ್ತೆಯಾಗಿದ್ದಾರೆ.
ಸಮೀರ್ ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆ ನಿವಾಸಿಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ಒಡೆದು ನೋಡಿದಾಗ ಸಮೀರ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸಾವನ್ನಪ್ಪಿದ ಎರಡು ದಿನ ಮೇಲಾಗಿದ್ದರಿಂದ ಶವ ಕೊಳೆಯಲಾರಂಭಿಸಿತ್ತು.
ಕಳೆದ ಫೆಬ್ರವರಿಯಲ್ಲಿ ಅವರು ಈ ಅಪಾರ್ಟ್ಮೆಂಟ್ಅನ್ನು ಬಾಡಿಗೆಗೆ ಪಡೆದಿದ್ದರು. ಸಮೀರ್ ದೇಹದ ಸ್ಥಿತಿಯನ್ನು ನೋಡಿದರೆ ಅವರು ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದು, ಸಮೀರ್ ಮನೆಯಲ್ಲಿ ಯಾವುದೇ ಡೆತ್ ನೋಟ್ ಲಭ್ಯವಾಗಿಲ್ಲ. ನೆರೆಹೊರೆಯವರ ಪ್ರಕಾರ ಸಮೀರ್ ಕಳೆದ ಕೆಲ ದಿನಗಳಿಂದ ಒಂಟಿಯಾಗಿರುತ್ತಿದ್ದರು. ಹೊರಗಡೆ ಹೆಚ್ಚು ಕಾಣಿಸಿಕೊಳ್ಳುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಕೊಂಡು ತನಿಖೆ ಮುಂದುವರಿಸಿದ್ದಾರೆ. ಸಮೀರ್ ಸೂಪರ್ ಹಿಟ್ ಧಾರಾವಾಹಿಗಳಾದ ‘ದಿಲ್ ಕ್ಯಾ ಚಾಹ್ತಾ’, ‘ಕಹಾನಿ ಘರ್ ಘರ್ ಕೀ’, ‘ಸಾಸ್ ಕಭೀ ಬಹು ಥೀ’ ಗಳಲ್ಲಿ ನಟಿಸಿದ್ದರು. ‘ಯೇ ರಿಶ್ತೆ ಹೈ ಪ್ಯಾರ್ ಕೇ’ ಧಾರಾವಾಹಿಯ ಶೌರ್ಯ ಪಾತ್ರ ಸಮೀರ್ ಗೆ ಹೆಚ್ಚು ಜನಪ್ರಿಯತೆ ತಂದು ಕೊಟ್ಟಿತ್ತು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm