ಬ್ರೇಕಿಂಗ್ ನ್ಯೂಸ್
06-08-20 08:51 am Headline Karnataka News Network ಕ್ರೈಂ
ಮುಂಬೈ: ಬಾಲಿವುಡ್ ಕಿರುತೆರೆಯ ಪ್ರತಿಭಾನ್ವಿತ ನಟ ಸಮೀರ್ ಶರ್ಮಾ (44) ತಮ್ಮ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸಮೀರ್ ಶರ್ಮಾ ಮುಂಬೈನ ಪಶ್ಚಿಮ ಮಲಾಡ್ನ ರಸ್ತೆಯಲ್ಲಿರುವ ನೇಹಾ ಸಿಹೆಚ್ಎಸ್ ಬಿಲ್ಡಿಂಗ್ನ ಫ್ಲ್ಯಾಟ್ ನಲ್ಲಿ ವಾಸವಾಗಿದ್ದರು. ಆದರೆ ಬುಧವಾರ ರಾತ್ರಿ ಫ್ಲ್ಯಾಟ್ನ ಅಡುಗೆ ಮನೆಯಲ್ಲಿ ನೇಣು ಬಿಗಿದ ಸೀತಿಯಲ್ಲಿ ಪತ್ತೆಯಾಗಿದ್ದಾರೆ.
ಸಮೀರ್ ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆ ನಿವಾಸಿಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ಒಡೆದು ನೋಡಿದಾಗ ಸಮೀರ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸಾವನ್ನಪ್ಪಿದ ಎರಡು ದಿನ ಮೇಲಾಗಿದ್ದರಿಂದ ಶವ ಕೊಳೆಯಲಾರಂಭಿಸಿತ್ತು.
ಕಳೆದ ಫೆಬ್ರವರಿಯಲ್ಲಿ ಅವರು ಈ ಅಪಾರ್ಟ್ಮೆಂಟ್ಅನ್ನು ಬಾಡಿಗೆಗೆ ಪಡೆದಿದ್ದರು. ಸಮೀರ್ ದೇಹದ ಸ್ಥಿತಿಯನ್ನು ನೋಡಿದರೆ ಅವರು ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದು, ಸಮೀರ್ ಮನೆಯಲ್ಲಿ ಯಾವುದೇ ಡೆತ್ ನೋಟ್ ಲಭ್ಯವಾಗಿಲ್ಲ. ನೆರೆಹೊರೆಯವರ ಪ್ರಕಾರ ಸಮೀರ್ ಕಳೆದ ಕೆಲ ದಿನಗಳಿಂದ ಒಂಟಿಯಾಗಿರುತ್ತಿದ್ದರು. ಹೊರಗಡೆ ಹೆಚ್ಚು ಕಾಣಿಸಿಕೊಳ್ಳುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಕೊಂಡು ತನಿಖೆ ಮುಂದುವರಿಸಿದ್ದಾರೆ. ಸಮೀರ್ ಸೂಪರ್ ಹಿಟ್ ಧಾರಾವಾಹಿಗಳಾದ ‘ದಿಲ್ ಕ್ಯಾ ಚಾಹ್ತಾ’, ‘ಕಹಾನಿ ಘರ್ ಘರ್ ಕೀ’, ‘ಸಾಸ್ ಕಭೀ ಬಹು ಥೀ’ ಗಳಲ್ಲಿ ನಟಿಸಿದ್ದರು. ‘ಯೇ ರಿಶ್ತೆ ಹೈ ಪ್ಯಾರ್ ಕೇ’ ಧಾರಾವಾಹಿಯ ಶೌರ್ಯ ಪಾತ್ರ ಸಮೀರ್ ಗೆ ಹೆಚ್ಚು ಜನಪ್ರಿಯತೆ ತಂದು ಕೊಟ್ಟಿತ್ತು.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm