ಬ್ರೇಕಿಂಗ್ ನ್ಯೂಸ್
12-10-23 09:34 pm Bangalore Correspondent ಕ್ರೈಂ
ಬೆಂಗಳೂರು, ಅ.12: ಸಿನಿಮೀಯ ಶೈಲಿಯಲ್ಲಿ ಬಂದ ನಾಲ್ವರು ದರೋಡೆಕೋರರ ತಂಡ ಹಾಡಹಗಲೇ ಜ್ಯುವೆಲ್ಲರಿ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ 10:45ರ ಸುಮಾರಿಗೆ ಘಟನೆ ನಡೆದಿದ್ದು, ಶಾಪ್ ಮಾಲೀಕ ಮನೋಜ್ ಲೋಹರ್ (30) ಮೇಲೆ ಗುಂಡು ಹಾರಿಸಿರುವ ದುಷ್ಕರ್ಮಿಗಳು 1 ಕೆ.ಜಿ ತೂಕದ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ.
ಬೆಳಗ್ಗೆ 2 ದ್ವಿಚಕ್ರ ವಾಹನಗಳಲ್ಲಿ ಮಾರಕಾಸ್ತ್ರಗಳ ಸಹಿತ ಬ್ಯಾಡರಹಳ್ಳಿ ವ್ಯಾಪ್ತಿಯ ವಿನಾಯಕ ಜ್ಯುವೆಲ್ಲರಿ ಶಾಪ್ ಬಳಿ ಬಂದ ಆರೋಪಿಗಳು, ಮಾಲೀಕ ಮನೋಜ್ ನನ್ನು ಬೆದರಿಸಿ ದರೋಡೆಗೆ ಯತ್ನಿಸಿದ್ದಾರೆ. ಮನೋಜ್ ತಡೆಯುವ ಪ್ರಯತ್ನ ಮಾಡಿದಾಗ ಆತನ ತೊಡೆಗೆ ಗುಂಡು ಹಾರಿಸಿ, ಶಾಪ್ನಲ್ಲಿದ್ದ ಒಂದು ಕೆ.ಜಿಯಷ್ಟು ಚಿನ್ನಾಭರಣ ದೋಚಿದ್ದಾರೆ.
ಬಂಗಾರ ದೋಚಿದ ಬಳಿಕ ಪರಾರಿಯಾಗಲು ಯತ್ನಿಸಿದ್ದ ಆರೋಪಿಗಳನ್ನು ಮನೋಜ್ ತಡೆಯಲು ಯತ್ನಿಸಿದ್ದಾರೆ. ಆಗ ಎಚ್ಚೆತ್ತ ದುಷ್ಕರ್ಮಿಗಳು ತಾವು ತಂದಿದ್ದ ಒಂದು ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳು ಮನೋಜ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
A group of four robbers, who came in cinematic style, shot at a jewellery shop owner in broad daylight and robbed him on pipeline road under Byadarahalli police station limits. The incident took place at around 12:10 am when the miscreants opened fire on the shop owner Manoj Lohar (45) and fled with gold ornaments weighing 30 kg.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm