ಬ್ರೇಕಿಂಗ್ ನ್ಯೂಸ್
16-10-23 01:24 pm Bengalore Correspondent ಕ್ರೈಂ
ಬೆಂಗಳೂರು, ಅ.16: ''ದಾಂಪತ್ಯದ ರಹಸ್ಯಗಳನ್ನು ತನ್ನ ಸ್ನೇಹಿತರೊಂದಿಗೆ ಚರ್ಚಿಸುತ್ತಾನೆ. ಜೊತೆಗೆ ಸ್ನೇಹಿತರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಗಂಡನೇ ಒತ್ತಾಯಿಸುತ್ತಿದ್ದಾನೆ'' ಎಂದು ಆರೋಪಿಸಿದ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾಳೆ. 42 ವರ್ಷದ ಮಹಿಳೆಯೊಬ್ಬರು ನೀಡಿರುವ ದೂರಿನ ಅನ್ವಯ ಆಕೆಯ ಪತಿಯ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರಳು ಹಾಗೂ ಆರೋಪಿಗೆ 2007ರಲ್ಲಿ ಹಿರಿಯರ ನಿಶ್ಚಯದಂತೆ ಮದುವೆಯಾಗಿತ್ತು. ದಂಪತಿಗೆ 11 ವರ್ಷದ ಮಗ ಹಾಗೂ 10 ವರ್ಷದ ಮಗಳಿದ್ದು, ಇಬ್ಬರೂ ಸಹ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ, ಅಚಾನಕ್ಕಾಗಿ ಗಂಡನ ಮೆಸೇಜ್ ಚಾಟ್ಸ್ ಪರಿಶೀಲಿಸಿದಾಗ, ಆತ ತಮ್ಮಿಬ್ಬರ ದೈಹಿಕ ಸಂಬಂಧದ ಕುರಿತು ತನ್ನ ಸ್ನೇಹಿತರೊಂದಿಗೆ ಮಾತನಾಡಿರುವುದು, ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಚರ್ಚಿಸಿರುವುದು ಪತ್ತೆಯಾಗಿತ್ತು. ಪ್ರಶ್ನಿಸಿದಾಗ ಆರೋಪಿಯು 'ನಿನಗೆ ನಿನ್ನ ಮಕ್ಕಳಿಗೆ ಜೀವನಾಂಶ ಕೊಡುವುದಿಲ್ಲವೆಂದು' ಗಲಾಟೆ ಮಾಡಿ, ಸಾಯಿಸುವುದಾಗಿ ಬೆದರಿಸಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.
''ಇದಾದ ನಂತರವೂ ಸಹ ದೂರುದಾರಳ ಪೋಷಕರು ಹಾಗೂ ಹಿರಿಯರ ಸಮ್ಮುಖದಲ್ಲಿ ಸಂಧಾನ ಮಾಡಲಾಗಿದ್ದು, ದಂಪತಿ ಬಳ್ಳಾರಿ ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು. ಆದರೆ, ಕಳೆದ ಕೆಲ ತಿಂಗಳಿಂದ ಗಂಡ ತನ್ನ ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸುತ್ತಿದ್ದಾನೆ'' ಎಂದು ನೊಂದ ಮಹಿಳೆ ಆರೋಪ ಮಾಡಿದ್ದಾಳೆ.
ಸದ್ಯ ನೊಂದ ಮಹಿಳೆಯ ದೂರಿನ ಅನ್ವಯ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Wife files complaint against husband for forcing to have sexual relationship with friends.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm