ಬ್ರೇಕಿಂಗ್ ನ್ಯೂಸ್
16-10-23 01:24 pm Bengalore Correspondent ಕ್ರೈಂ
ಬೆಂಗಳೂರು, ಅ.16: ''ದಾಂಪತ್ಯದ ರಹಸ್ಯಗಳನ್ನು ತನ್ನ ಸ್ನೇಹಿತರೊಂದಿಗೆ ಚರ್ಚಿಸುತ್ತಾನೆ. ಜೊತೆಗೆ ಸ್ನೇಹಿತರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಗಂಡನೇ ಒತ್ತಾಯಿಸುತ್ತಿದ್ದಾನೆ'' ಎಂದು ಆರೋಪಿಸಿದ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾಳೆ. 42 ವರ್ಷದ ಮಹಿಳೆಯೊಬ್ಬರು ನೀಡಿರುವ ದೂರಿನ ಅನ್ವಯ ಆಕೆಯ ಪತಿಯ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರಳು ಹಾಗೂ ಆರೋಪಿಗೆ 2007ರಲ್ಲಿ ಹಿರಿಯರ ನಿಶ್ಚಯದಂತೆ ಮದುವೆಯಾಗಿತ್ತು. ದಂಪತಿಗೆ 11 ವರ್ಷದ ಮಗ ಹಾಗೂ 10 ವರ್ಷದ ಮಗಳಿದ್ದು, ಇಬ್ಬರೂ ಸಹ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ, ಅಚಾನಕ್ಕಾಗಿ ಗಂಡನ ಮೆಸೇಜ್ ಚಾಟ್ಸ್ ಪರಿಶೀಲಿಸಿದಾಗ, ಆತ ತಮ್ಮಿಬ್ಬರ ದೈಹಿಕ ಸಂಬಂಧದ ಕುರಿತು ತನ್ನ ಸ್ನೇಹಿತರೊಂದಿಗೆ ಮಾತನಾಡಿರುವುದು, ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಚರ್ಚಿಸಿರುವುದು ಪತ್ತೆಯಾಗಿತ್ತು. ಪ್ರಶ್ನಿಸಿದಾಗ ಆರೋಪಿಯು 'ನಿನಗೆ ನಿನ್ನ ಮಕ್ಕಳಿಗೆ ಜೀವನಾಂಶ ಕೊಡುವುದಿಲ್ಲವೆಂದು' ಗಲಾಟೆ ಮಾಡಿ, ಸಾಯಿಸುವುದಾಗಿ ಬೆದರಿಸಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.
''ಇದಾದ ನಂತರವೂ ಸಹ ದೂರುದಾರಳ ಪೋಷಕರು ಹಾಗೂ ಹಿರಿಯರ ಸಮ್ಮುಖದಲ್ಲಿ ಸಂಧಾನ ಮಾಡಲಾಗಿದ್ದು, ದಂಪತಿ ಬಳ್ಳಾರಿ ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು. ಆದರೆ, ಕಳೆದ ಕೆಲ ತಿಂಗಳಿಂದ ಗಂಡ ತನ್ನ ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸುತ್ತಿದ್ದಾನೆ'' ಎಂದು ನೊಂದ ಮಹಿಳೆ ಆರೋಪ ಮಾಡಿದ್ದಾಳೆ.
ಸದ್ಯ ನೊಂದ ಮಹಿಳೆಯ ದೂರಿನ ಅನ್ವಯ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Wife files complaint against husband for forcing to have sexual relationship with friends.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm