ಬ್ರೇಕಿಂಗ್ ನ್ಯೂಸ್
16-10-23 10:54 pm Mangalore Correspondent ಕ್ರೈಂ
ಮಂಗಳೂರು, ಅ.16: ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಮೂಡುಬಿದ್ರೆ ಪೊಲೀಸರು ಪ್ರತ್ಯೇಕ ಎರಡು ಕಡೆ ದಾಳಿ ನಡೆಸಿದ್ದು ಇಬ್ಬರು ದಲ್ಲಾಳಿ ಸೇರಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸೋಮವಾರ ಸಂಜೆ ಆರು ಗಂಟೆಗೆ ಮಾರ್ಪಾಡಿ ಗ್ರಾಮದ ಒಂಟಿಕಟ್ಟೆ ಎಂಬಲ್ಲಿರುವ ಕಡಲಕೆರೆ ಪಾರ್ಕ್ ನಲ್ಲಿ ಸುಖೇಶ್ ಆಚಾರ್ಯ ಎಂಬಾತ ಪುರಂದರ್ ಎಂಬಾತನಿಂದ ಹಣವನ್ನು ಪಡೆದು allpaanel.com/m/home ಎಂಬ ವೆಬ್ ಸೈಟ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಸ್ಥಳಕ್ಕೆ ದಾಳಿ ನಡೆಸಿ ಸುಖೇಶ್ ಆಚಾರ್ಯ ಎಂಬಾತನನ್ನು ವಶಕ್ಕ ಪಡೆದಿದ್ದಾರೆ. ಈ ವೇಳೆ, ಶ್ರೀಲಂಕಾ ಮತ್ತು ಆಸ್ಪ್ರೇಲಿಯಾ ಕ್ರಿಕೆಟ್ ಮ್ಯಾಚ್ ನಲ್ಲಿ ಬೆಟ್ಟಿಂಗ್ ಮಾಡಲು ಅವರಿಂದ ಹಣವನ್ನು ಪಡೆದು ಬೆಟ್ಟಿಂಗ್ ಆಡುತ್ತಿರುವುದಾಗಿ ತಿಳಿಸಿದ್ದಾನೆ. ಅಲ್ಲದೆ, allpaanel.com/m/home ಎಂಬ ವೆಬ್ ಸೈಟ್ ನ್ನು ಮುಂಬೈನಲ್ಲಿರುವ ವ್ಯಕ್ತಿ ನಿಯಂತ್ರಣ ಮಾಡುತ್ತಿದ್ದಾನೆಂದು ತಿಳಿಸಿದ್ದಾನೆ.

ಆರೋಪಿ ಸುಖೇಶ್ ಆಚಾರ್ಯ ಬಳಿಯಿದ್ದ ಮೋಬೈಲ್ ನ ಗೂಗಲ್ ಕ್ರೋಮ್ ನಲ್ಲಿ allpaanel.com/m/home ಎಂಬ ವೆಬ್ ಸೈಟ್ ನಲ್ಲಿ ಹಣವನ್ನು ಪಣವಾಗಿರಿಸಿ ಕ್ರಿಕೆಟ್ ಬೆಟ್ಟಿಂಗ್ ಗೆ ತೊಡಗಿಸಿಕೊಂಡಿರುವುದು ಕಂಡುಬಂದಿದೆ. ವಿಶ್ವಕಪ್ ಕೂಟದಲ್ಲಿ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಮ್ಯಾಚ್ ನಡೆದಿದ್ದು ಈ ಮ್ಯಾಚ್ ಗಾಗಿ ಹಣವನ್ನು ಬೆಟ್ಟಿಂಗ್ ಹಾಕುವ ಗಿರಾಕಿಗಳಿಗಾಗಿ ಕಾಯುತ್ತಿದ್ದುದಾಗಿ ತಿಳಿಸಿದ್ದಾನೆ. ಇವರನ್ನು ವಶಕ್ಕೆ ಪಡೆದು ಮೂಡಬಿದ್ರೆ ಪೊಲೀಸ್ ಠಾಣೆ ಅ.ಕ್ರ 158/2023 ಕಲಂ: 78(3)(4) ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಕಾನೂನು ಕ್ರಮ ಜರುಗಿಸಲಾಗಿದೆ.
ಆರೋಪಿ ಸುಖೇಶ್ ಆಚಾರ್ಯ ಅಲಂಗಾರು ನಿವಾಸಿಯಾಗಿದ್ದು ಆತನ ಜೊತೆಗೆ ಹಣ ತೊಡಗಿಸಿದ್ದ ಪುರಂದರ ಕುಲಾಲ್ ಪುತ್ತಿಗೆ ಗ್ರಾಮದ ನಿವಾಸಿ. ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ.ಜಿ, ಉಪ ನಿರೀಕ್ಷಕರಾದ ಸಿದ್ದಪ್ಪ ನರನೂರ ಹಾಗೂ ಸಿಬ್ಬಂದಿಗಳಾದ ಪ್ರದೀಪ್ ಕುಮಾರ್, ಝೈದ್, ವೆಂಕಟೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಮತ್ತೊಂದು ಬೆಟ್ಟಿಂಗ್ ಏಪ್ ನಲ್ಲಿ ದಂಧೆ ಪತ್ತೆ
ಮತ್ತೊಂದು ಪ್ರಕರಣದಲ್ಲಿ ಮೂಡಬಿದರೆಯ ಮಾರ್ಪಾಡಿ ಗ್ರಾಮದ ಅಲಂಗಾರು ಎಂಬಲ್ಲಿ ಎಸ್.ಐ ಸ್ಪೋರ್ಟ್ಸ್ ಅಂಗಡಿಯ ಮುಂಭಾಗದಲ್ಲಿ ನವೀದ್ ಎಂಬಾತ ಪ್ರಸಾದ್ ಮತ್ತು ಉಮೇಶ್ ಎಂಬವರಿಂದ ಹಣವನ್ನು ಪಡೆದು Comfort Zone 247 ಎಂಬ ಮೊಬೈಲ್ ವೆಬ್ ಸೈಟ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಮೂವರನ್ನೂ ಬಂಧಿಸಿದ್ದಾರೆ. ವಿಚಾರಣೆ ವೇಳೆ ಶ್ರೀಲಂಕಾ ಮತ್ತು ಆಸ್ಪ್ರೇಲಿಯಾ ಕ್ರಿಕೆಟ್ ಮ್ಯಾಚ್ ನಲ್ಲಿ ಬೆಟ್ಟಿಂಗ್ ಮಾಡಲು ಹಣವನ್ನು ಗೂಗಲ್ ಪೇ ಅಥವಾ ಪೋನ್ ಪೇ ಮುಖೇನ ಪಡೆಯುವುದಾಗಿ ತಿಳಿಸಿದ್ದಾರೆ. Comfort Zone 24*7 ಎಂಬ ವೆಬ್ ಸೈಟ್ ನ್ನು ಮುಂಬೈನಲ್ಲಿರುವ ವ್ಯಕ್ತಿ ನಿಯಂತ್ರಣ ಮಾಡುತ್ತಿದ್ದಾನೆಂದು ತಿಳಿಸಿದ್ದಾನೆ. ಇವರನ್ನು ವಶಕ್ಕೆ ಪಡೆದು ಮೂಡಬಿದ್ರೆ ಪೊಲೀಸ್ ಠಾಣೆ ಅ.ಕ್ರ 157/2023 ಕಲಂ: 78(3)(4) ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಕ್ರಮ ಜರುಗಿಸಲಾಗಿದೆ.
ಬೆಳುವಾಯಿ ನಿವಾಸಿ ನವೀದ್(30), ಪಡುಮಾರ್ನಾಡು ನಿವಾಸಿಗಳಾದ ಉಮೇಶ್ (40), ಪ್ರಸಾದ್ ದೇವಾಡಿಗ (35) ಬಂಧಿತರು. ಈ ಕಾರ್ಯಾಚರಣೆಯಲ್ಲಿ ಮೂಡಬಿದ್ರೆ ಠಾಣೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ, ಸಿಬ್ಬಂದಿಗಳಾದ ಚಂದ್ರಹಾಸ್ ರೈ, ಮೊಹಮ್ಮದ್ ಹುಸೇನ್, ಅಖೀಲ್ ಅಹ್ಮದ್ ಹಾಗೂ ಅವರ ತಂಡ ಪಾಲ್ಗೊಂಡಿತ್ತು.
Moodbidri five arrested for online cricket betting by Mangalore Police. Acting on a verified tip-off, Naveed was found accepting money from Prasad and Umesh for cricket betting on the mobile platform ‘Comfort Zone 247’.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm