ಬ್ರೇಕಿಂಗ್ ನ್ಯೂಸ್
17-10-23 04:03 pm Mangalore Correspondent ಕ್ರೈಂ
ಉಳ್ಳಾಲ, ಅ.17: ಬಿಸಿ ರಕ್ತದಲ್ಲಿ ಮದ್ಯ, ಗಾಂಜಾ ಸೇದಿ ರೌಡಿಸಂ ನಡೆಸಿದ್ದ ಉಳ್ಳಾಲ ಪೊಲೀಸ್ ಠಾಣೆಯ ಮಾಜಿ ರೌಡಿ ಶೀಟರ್ ಓರ್ವ ಮನೆಯಲ್ಲಿ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಸೇವಂತಿಗುಡ್ಡೆ ನಿವಾಸಿ ಶಮೀರ್ (41)ಆತ್ಮಹತ್ಯೆಗೈದ ವ್ಯಕ್ತಿ. ಶಮೀರ್ ಕ್ಯಾನ್ಸರ್ ನಿಂದ ಮೃತಪಟ್ಟ ನಟೋರಿಯಸ್ ರೌಡಿ ಶಬರಿಯ ಸಹಚರನಾಗಿದ್ದು ಉಳ್ಳಾಲ ಠಾಣೆಯಲ್ಲಿ ಹಳೆಯ ರೌಡಿ ಶೀಟರ್ ಆಗಿದ್ದ. ಗಾಂಜಾ, ಮದ್ಯ ವ್ಯಸನಿಯಾಗಿದ್ದ ಶಮೀರ್ ಜೀವನ ನಿರ್ವಹಣೆಗೆ ಇತ್ತೀಚಿಗೆ ಆಟೋ ರಿಕ್ಷಾ ಚಲಾಯಿಸುತ್ತಿದ್ದು ತೊಕ್ಕೊಟ್ಟಿನ ಒಳಪೇಟೆಯ ರಿಕ್ಷಾ ಪಾರ್ಕಲ್ಲಿ ದುಡಿಯುತ್ತಿದ್ದ.
ನಿನ್ನೆ ಸಂಜೆ ಒಳಪೇಟೆಯ ರಿಕ್ಷಾ ಚಾಲಕರಲ್ಲಿ ಗಲಾಟೆ ನಡೆಸಿದ್ದ ಶಮೀರ್ ಯಾರೊಬ್ಬರಿಗೂ ಪಾರ್ಕಲ್ಲಿ ಆಟೋ ರಿಕ್ಷಾ ಪಾರ್ಕ್ ಮಾಡಲು ಬಿಡುವುದಿಲ್ಲವೆಂದು ಆವಾಝ್ ಹಾಕಿದ್ದನಂತೆ.

ಶಮೀರನ ತಾಯಿ ಒಂದು ತಿಂಗಳ ಹಿಂದಷ್ಟೆ ಮೃತಪಟ್ಟಿದ್ದರಂತೆ. ಮೂರು ದಿನಗಳ ಹಿಂದಷ್ಟೆ ಶಮೀರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಪಲ್ಟಿ ಹೊಡೆದಿದ್ದು, ರಿಕ್ಷಾದ ಲೋನ್ ಬಾಕಿಯಿದ್ದು ಬ್ಯಾಂಕಿನ ಸೀಝರ್ ಗಳು ದಿನ ನಿತ್ಯವೂ ಶಮೀರ್ ಗೆ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದರಂತೆ. ಮೃತ ಶಮೀರ್ ಗೆ ಎರಡು ಹೆಣ್ಣು, ಒಂದು ಗಂಡು ಮಕ್ಕಳಿದ್ದು ಪತ್ನಿಯೂ ಅನಾರೋಗ್ಯದಲ್ಲಿ ಬಳಲುತ್ತಿದ್ದಾರೆ ಎನ್ನಲಾಗಿದೆ. ನವರಾತ್ರಿ ರಜೆ ಸಿಕ್ಕ ಕಾರಣ ಪತ್ನಿ , ಮಕ್ಕಳು ತವರು ಸೇರಿದ್ದು,ಇಂದು ಬೆಳಗ್ಗೆ ಮನೆಯಲ್ಲಿ ಒಂಟಿಯಾಗಿದ್ದ ಶಮೀರ್ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಯೌವನದಲ್ಲಿ ಮದ್ಯ ,ಗಾಂಜಾದ ಅಮಲಿನಲ್ಲಿ ಉಳ್ಳಾಲದಲ್ಲಿ ಪುಡಿ ರೌಡಿಗಳಾಗಿ ಅಟ್ಟಹಾಸ ಮೆರೆದಿದ್ದ ಶಬರಿ, ಶಮೀರ್ ಇಬ್ಬರೂ ಅಕಾಲಿಕ ಸಾವು ಕಂಡಿದ್ದು ವಿಪರ್ಯಾಸ.
Mangalore 41 year old rowdy sheeter Shameer commits suicide at his house in Ullal.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm