ಬ್ರೇಕಿಂಗ್ ನ್ಯೂಸ್
17-10-23 04:03 pm Mangalore Correspondent ಕ್ರೈಂ
ಉಳ್ಳಾಲ, ಅ.17: ಬಿಸಿ ರಕ್ತದಲ್ಲಿ ಮದ್ಯ, ಗಾಂಜಾ ಸೇದಿ ರೌಡಿಸಂ ನಡೆಸಿದ್ದ ಉಳ್ಳಾಲ ಪೊಲೀಸ್ ಠಾಣೆಯ ಮಾಜಿ ರೌಡಿ ಶೀಟರ್ ಓರ್ವ ಮನೆಯಲ್ಲಿ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಸೇವಂತಿಗುಡ್ಡೆ ನಿವಾಸಿ ಶಮೀರ್ (41)ಆತ್ಮಹತ್ಯೆಗೈದ ವ್ಯಕ್ತಿ. ಶಮೀರ್ ಕ್ಯಾನ್ಸರ್ ನಿಂದ ಮೃತಪಟ್ಟ ನಟೋರಿಯಸ್ ರೌಡಿ ಶಬರಿಯ ಸಹಚರನಾಗಿದ್ದು ಉಳ್ಳಾಲ ಠಾಣೆಯಲ್ಲಿ ಹಳೆಯ ರೌಡಿ ಶೀಟರ್ ಆಗಿದ್ದ. ಗಾಂಜಾ, ಮದ್ಯ ವ್ಯಸನಿಯಾಗಿದ್ದ ಶಮೀರ್ ಜೀವನ ನಿರ್ವಹಣೆಗೆ ಇತ್ತೀಚಿಗೆ ಆಟೋ ರಿಕ್ಷಾ ಚಲಾಯಿಸುತ್ತಿದ್ದು ತೊಕ್ಕೊಟ್ಟಿನ ಒಳಪೇಟೆಯ ರಿಕ್ಷಾ ಪಾರ್ಕಲ್ಲಿ ದುಡಿಯುತ್ತಿದ್ದ.
ನಿನ್ನೆ ಸಂಜೆ ಒಳಪೇಟೆಯ ರಿಕ್ಷಾ ಚಾಲಕರಲ್ಲಿ ಗಲಾಟೆ ನಡೆಸಿದ್ದ ಶಮೀರ್ ಯಾರೊಬ್ಬರಿಗೂ ಪಾರ್ಕಲ್ಲಿ ಆಟೋ ರಿಕ್ಷಾ ಪಾರ್ಕ್ ಮಾಡಲು ಬಿಡುವುದಿಲ್ಲವೆಂದು ಆವಾಝ್ ಹಾಕಿದ್ದನಂತೆ.

ಶಮೀರನ ತಾಯಿ ಒಂದು ತಿಂಗಳ ಹಿಂದಷ್ಟೆ ಮೃತಪಟ್ಟಿದ್ದರಂತೆ. ಮೂರು ದಿನಗಳ ಹಿಂದಷ್ಟೆ ಶಮೀರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಪಲ್ಟಿ ಹೊಡೆದಿದ್ದು, ರಿಕ್ಷಾದ ಲೋನ್ ಬಾಕಿಯಿದ್ದು ಬ್ಯಾಂಕಿನ ಸೀಝರ್ ಗಳು ದಿನ ನಿತ್ಯವೂ ಶಮೀರ್ ಗೆ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದರಂತೆ. ಮೃತ ಶಮೀರ್ ಗೆ ಎರಡು ಹೆಣ್ಣು, ಒಂದು ಗಂಡು ಮಕ್ಕಳಿದ್ದು ಪತ್ನಿಯೂ ಅನಾರೋಗ್ಯದಲ್ಲಿ ಬಳಲುತ್ತಿದ್ದಾರೆ ಎನ್ನಲಾಗಿದೆ. ನವರಾತ್ರಿ ರಜೆ ಸಿಕ್ಕ ಕಾರಣ ಪತ್ನಿ , ಮಕ್ಕಳು ತವರು ಸೇರಿದ್ದು,ಇಂದು ಬೆಳಗ್ಗೆ ಮನೆಯಲ್ಲಿ ಒಂಟಿಯಾಗಿದ್ದ ಶಮೀರ್ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಯೌವನದಲ್ಲಿ ಮದ್ಯ ,ಗಾಂಜಾದ ಅಮಲಿನಲ್ಲಿ ಉಳ್ಳಾಲದಲ್ಲಿ ಪುಡಿ ರೌಡಿಗಳಾಗಿ ಅಟ್ಟಹಾಸ ಮೆರೆದಿದ್ದ ಶಬರಿ, ಶಮೀರ್ ಇಬ್ಬರೂ ಅಕಾಲಿಕ ಸಾವು ಕಂಡಿದ್ದು ವಿಪರ್ಯಾಸ.
Mangalore 41 year old rowdy sheeter Shameer commits suicide at his house in Ullal.
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 07:35 pm
HK News Staffer
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಕೇಂದ್ರ...
17-03-26 05:46 pm
ಸಂಚಾರ ನಿಯಮ ಉಲ್ಲಂಘನೆ ; ಸುಳ್ಯದಲ್ಲಿ 'ಸಮುದಾಯ ಸೇವೆ...
17-03-26 03:06 pm
Inspector Sandesh, Mangalore: ಮೂಡುಬಿದ್ರೆ ಇನ್ಸ...
17-03-26 01:55 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am