ಬ್ರೇಕಿಂಗ್ ನ್ಯೂಸ್
17-10-23 04:03 pm Mangalore Correspondent ಕ್ರೈಂ
ಉಳ್ಳಾಲ, ಅ.17: ಬಿಸಿ ರಕ್ತದಲ್ಲಿ ಮದ್ಯ, ಗಾಂಜಾ ಸೇದಿ ರೌಡಿಸಂ ನಡೆಸಿದ್ದ ಉಳ್ಳಾಲ ಪೊಲೀಸ್ ಠಾಣೆಯ ಮಾಜಿ ರೌಡಿ ಶೀಟರ್ ಓರ್ವ ಮನೆಯಲ್ಲಿ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಸೇವಂತಿಗುಡ್ಡೆ ನಿವಾಸಿ ಶಮೀರ್ (41)ಆತ್ಮಹತ್ಯೆಗೈದ ವ್ಯಕ್ತಿ. ಶಮೀರ್ ಕ್ಯಾನ್ಸರ್ ನಿಂದ ಮೃತಪಟ್ಟ ನಟೋರಿಯಸ್ ರೌಡಿ ಶಬರಿಯ ಸಹಚರನಾಗಿದ್ದು ಉಳ್ಳಾಲ ಠಾಣೆಯಲ್ಲಿ ಹಳೆಯ ರೌಡಿ ಶೀಟರ್ ಆಗಿದ್ದ. ಗಾಂಜಾ, ಮದ್ಯ ವ್ಯಸನಿಯಾಗಿದ್ದ ಶಮೀರ್ ಜೀವನ ನಿರ್ವಹಣೆಗೆ ಇತ್ತೀಚಿಗೆ ಆಟೋ ರಿಕ್ಷಾ ಚಲಾಯಿಸುತ್ತಿದ್ದು ತೊಕ್ಕೊಟ್ಟಿನ ಒಳಪೇಟೆಯ ರಿಕ್ಷಾ ಪಾರ್ಕಲ್ಲಿ ದುಡಿಯುತ್ತಿದ್ದ.
ನಿನ್ನೆ ಸಂಜೆ ಒಳಪೇಟೆಯ ರಿಕ್ಷಾ ಚಾಲಕರಲ್ಲಿ ಗಲಾಟೆ ನಡೆಸಿದ್ದ ಶಮೀರ್ ಯಾರೊಬ್ಬರಿಗೂ ಪಾರ್ಕಲ್ಲಿ ಆಟೋ ರಿಕ್ಷಾ ಪಾರ್ಕ್ ಮಾಡಲು ಬಿಡುವುದಿಲ್ಲವೆಂದು ಆವಾಝ್ ಹಾಕಿದ್ದನಂತೆ.

ಶಮೀರನ ತಾಯಿ ಒಂದು ತಿಂಗಳ ಹಿಂದಷ್ಟೆ ಮೃತಪಟ್ಟಿದ್ದರಂತೆ. ಮೂರು ದಿನಗಳ ಹಿಂದಷ್ಟೆ ಶಮೀರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಪಲ್ಟಿ ಹೊಡೆದಿದ್ದು, ರಿಕ್ಷಾದ ಲೋನ್ ಬಾಕಿಯಿದ್ದು ಬ್ಯಾಂಕಿನ ಸೀಝರ್ ಗಳು ದಿನ ನಿತ್ಯವೂ ಶಮೀರ್ ಗೆ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದರಂತೆ. ಮೃತ ಶಮೀರ್ ಗೆ ಎರಡು ಹೆಣ್ಣು, ಒಂದು ಗಂಡು ಮಕ್ಕಳಿದ್ದು ಪತ್ನಿಯೂ ಅನಾರೋಗ್ಯದಲ್ಲಿ ಬಳಲುತ್ತಿದ್ದಾರೆ ಎನ್ನಲಾಗಿದೆ. ನವರಾತ್ರಿ ರಜೆ ಸಿಕ್ಕ ಕಾರಣ ಪತ್ನಿ , ಮಕ್ಕಳು ತವರು ಸೇರಿದ್ದು,ಇಂದು ಬೆಳಗ್ಗೆ ಮನೆಯಲ್ಲಿ ಒಂಟಿಯಾಗಿದ್ದ ಶಮೀರ್ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಯೌವನದಲ್ಲಿ ಮದ್ಯ ,ಗಾಂಜಾದ ಅಮಲಿನಲ್ಲಿ ಉಳ್ಳಾಲದಲ್ಲಿ ಪುಡಿ ರೌಡಿಗಳಾಗಿ ಅಟ್ಟಹಾಸ ಮೆರೆದಿದ್ದ ಶಬರಿ, ಶಮೀರ್ ಇಬ್ಬರೂ ಅಕಾಲಿಕ ಸಾವು ಕಂಡಿದ್ದು ವಿಪರ್ಯಾಸ.
Mangalore 41 year old rowdy sheeter Shameer commits suicide at his house in Ullal.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm