ಬ್ರೇಕಿಂಗ್ ನ್ಯೂಸ್
17-10-23 04:03 pm Mangalore Correspondent ಕ್ರೈಂ
ಉಳ್ಳಾಲ, ಅ.17: ಬಿಸಿ ರಕ್ತದಲ್ಲಿ ಮದ್ಯ, ಗಾಂಜಾ ಸೇದಿ ರೌಡಿಸಂ ನಡೆಸಿದ್ದ ಉಳ್ಳಾಲ ಪೊಲೀಸ್ ಠಾಣೆಯ ಮಾಜಿ ರೌಡಿ ಶೀಟರ್ ಓರ್ವ ಮನೆಯಲ್ಲಿ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಸೇವಂತಿಗುಡ್ಡೆ ನಿವಾಸಿ ಶಮೀರ್ (41)ಆತ್ಮಹತ್ಯೆಗೈದ ವ್ಯಕ್ತಿ. ಶಮೀರ್ ಕ್ಯಾನ್ಸರ್ ನಿಂದ ಮೃತಪಟ್ಟ ನಟೋರಿಯಸ್ ರೌಡಿ ಶಬರಿಯ ಸಹಚರನಾಗಿದ್ದು ಉಳ್ಳಾಲ ಠಾಣೆಯಲ್ಲಿ ಹಳೆಯ ರೌಡಿ ಶೀಟರ್ ಆಗಿದ್ದ. ಗಾಂಜಾ, ಮದ್ಯ ವ್ಯಸನಿಯಾಗಿದ್ದ ಶಮೀರ್ ಜೀವನ ನಿರ್ವಹಣೆಗೆ ಇತ್ತೀಚಿಗೆ ಆಟೋ ರಿಕ್ಷಾ ಚಲಾಯಿಸುತ್ತಿದ್ದು ತೊಕ್ಕೊಟ್ಟಿನ ಒಳಪೇಟೆಯ ರಿಕ್ಷಾ ಪಾರ್ಕಲ್ಲಿ ದುಡಿಯುತ್ತಿದ್ದ.
ನಿನ್ನೆ ಸಂಜೆ ಒಳಪೇಟೆಯ ರಿಕ್ಷಾ ಚಾಲಕರಲ್ಲಿ ಗಲಾಟೆ ನಡೆಸಿದ್ದ ಶಮೀರ್ ಯಾರೊಬ್ಬರಿಗೂ ಪಾರ್ಕಲ್ಲಿ ಆಟೋ ರಿಕ್ಷಾ ಪಾರ್ಕ್ ಮಾಡಲು ಬಿಡುವುದಿಲ್ಲವೆಂದು ಆವಾಝ್ ಹಾಕಿದ್ದನಂತೆ.

ಶಮೀರನ ತಾಯಿ ಒಂದು ತಿಂಗಳ ಹಿಂದಷ್ಟೆ ಮೃತಪಟ್ಟಿದ್ದರಂತೆ. ಮೂರು ದಿನಗಳ ಹಿಂದಷ್ಟೆ ಶಮೀರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಪಲ್ಟಿ ಹೊಡೆದಿದ್ದು, ರಿಕ್ಷಾದ ಲೋನ್ ಬಾಕಿಯಿದ್ದು ಬ್ಯಾಂಕಿನ ಸೀಝರ್ ಗಳು ದಿನ ನಿತ್ಯವೂ ಶಮೀರ್ ಗೆ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದರಂತೆ. ಮೃತ ಶಮೀರ್ ಗೆ ಎರಡು ಹೆಣ್ಣು, ಒಂದು ಗಂಡು ಮಕ್ಕಳಿದ್ದು ಪತ್ನಿಯೂ ಅನಾರೋಗ್ಯದಲ್ಲಿ ಬಳಲುತ್ತಿದ್ದಾರೆ ಎನ್ನಲಾಗಿದೆ. ನವರಾತ್ರಿ ರಜೆ ಸಿಕ್ಕ ಕಾರಣ ಪತ್ನಿ , ಮಕ್ಕಳು ತವರು ಸೇರಿದ್ದು,ಇಂದು ಬೆಳಗ್ಗೆ ಮನೆಯಲ್ಲಿ ಒಂಟಿಯಾಗಿದ್ದ ಶಮೀರ್ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಯೌವನದಲ್ಲಿ ಮದ್ಯ ,ಗಾಂಜಾದ ಅಮಲಿನಲ್ಲಿ ಉಳ್ಳಾಲದಲ್ಲಿ ಪುಡಿ ರೌಡಿಗಳಾಗಿ ಅಟ್ಟಹಾಸ ಮೆರೆದಿದ್ದ ಶಬರಿ, ಶಮೀರ್ ಇಬ್ಬರೂ ಅಕಾಲಿಕ ಸಾವು ಕಂಡಿದ್ದು ವಿಪರ್ಯಾಸ.
Mangalore 41 year old rowdy sheeter Shameer commits suicide at his house in Ullal.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm