ಬ್ರೇಕಿಂಗ್ ನ್ಯೂಸ್
18-10-23 11:52 am HK News Desk ಕ್ರೈಂ
ಬೆಳಗಾವಿ, ಅ.18: ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆ ಅಕ್ರಮವಾಗಿ ಮದ್ಯ ಸಾಗಣೆ ಸದ್ದಿಲ್ಲದೇ ನಡೆಯುತ್ತಿದೆ. ಈ ಬೆನ್ನಲ್ಲೇ ಗೋವಾದಿಂದ ತೆಲಂಗಾಣಕ್ಕೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಮದ್ಯವನ್ನು ಜಪ್ತಿ ಮಾಡುವಲ್ಲಿ ಬೆಳಗಾವಿಯ ಅಬಕಾರಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಕಳೆದ ತಿಂಗಳು ಲಾರಿಯಲ್ಲಿ ಪ್ಲೈವುಡ್ ನಡುವೆ ಮದ್ಯದ ಬಾಕ್ಸ್ಗಳನ್ನು ಇಟ್ಟುಕೊಂಡು ಸಾಗಿಸುತ್ತಿದ್ದಾಗ ಸಿನಿಮೀಯ ಶೈಲಿಯಲ್ಲಿ ದಾಳಿ ಮಾಡಿ, ಅಕ್ರಮ ಜಾಲ ಭೇದಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು, ಈ ಬಾರಿಯೂ ಅದೇ ಮಾದರಿಯಲ್ಲಿ ದಾಳಿ ನಡೆಸಿ ನಕಲಿ ಟ್ರಾನ್ಸ್ಫಾರ್ಮರ್ ಸಾಗಿಸುತ್ತಿದ್ದ ಲಾರಿಯಲ್ಲಿ ಬಚ್ಚಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಹಿರೇಬಾಗೇವಾಡಿ ಟೋಲ್ ನಾಕಾ ಬಳಿ ದಾಳಿ ಮಾಡಿದ ಅಧಿಕಾರಿಗಳು, ಲಾರಿ ತಡೆದು ಚಾಲಕನ ವಿಚಾರಣೆ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ. ಎರಡು ಎಲೆಕ್ಟ್ರಿಕ್ ಟ್ರಾನ್ಸ್ಫಾರ್ಮರ್ಗಳ ನಡುವೆ ಬಚ್ಚಿಟ್ಟಿದ್ದ 10 ಲಕ್ಷ ರೂ. ಮೌಲ್ಯದ 250 ರಟ್ಟಿನ ಪೆಟ್ಟಿಗೆಗಳಲ್ಲಿದ್ದ 5 ವಿವಿಧ ಕಂಪನಿಯ ಮದ್ಯವನ್ನು ಜಪ್ತಿ ಮಾಡಿರುವ ಅಬಕಾರಿ ಅಧಿಕಾರಿಗಳು, ಆರೋಪಿ ಲಾರಿ ಚಾಲಕ ಮಹಾರಾಷ್ಟ್ರದ ಮುಂಬೈ ನಿವಾಸಿ ಶ್ರೀರಾಮ್ ಸುಧಾಕರ್ ಪರಡೇ(31) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಅದೇ ರೀತಿ 20 ಲಕ್ಷ ರೂ. ಮೌಲ್ಯದ ಲಾರಿಯನ್ನೂ ಜಪ್ತಿ ಮಾಡಲಾಗಿದೆ.
ಲಾರಿಗೆ ಜಿಪಿಎಸ್ ಅಳವಡಿಕೆ :
ವಾಹನವನ್ನು ಅತ್ಯಾಧುನಿಕ ತಂತ್ರಜ್ಞಾನ ಜಿಪಿಎಸ್ ಉಪಕರಣ ಬಳಸಿ ನಿಯಂತ್ರಿಸಲಾಗುತ್ತಿತ್ತು. ಅಬಕಾರಿ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ವಾಹನ ಮುಂದೆ ಹೋಗದಂತೆ ಖದೀಮರು ಜಿಪಿಎಸ್ ಆಫ್ ಮಾಡಿದರು. ಎಲ್ಲೋ ಒಂದು ಕಡೆ ಇದ್ದ ತಂಡ, ಲಾರಿಯನ್ನು ಅಲ್ಲಿಂದಲೇ ನಿಯಂತ್ರಿಸುತ್ತಿತ್ತು. ಬಳಿಕ, ಜಿಪಿಎಸ್ ಡಿಸ್ಕನೆಕ್ಟ್ ಮಾಡಿ ವಾಹನ ಜಪ್ತಿ ಮಾಡಲಾಗಿದೆ.
ಚುನಾವಣೆ ಎಫೆಕ್ಟ್ :
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಪೈಕಿ ತೆಲಂಗಾಣ ರಾಜ್ಯದಲ್ಲೂ ಚುನಾವಣೆ ಇರುವುದರಿಂದ ಗೋವಾದಿಂದ ಮದ್ಯ ಸಾಗಿಸಲಾಗುತ್ತಿತ್ತು. ಟ್ರಾನ್ಸ್ಫರ್ಮರ್ಗಳ ಮಧ್ಯೆ ಮದ್ಯದ ಬಾಕ್ಸ್ಗಳನ್ನು ಇಟ್ಟರೆ ಯಾರಿಗೂ ಅನುಮಾನ ಬರುವುದಿಲ್ಲವೆಂದು ಆರೋಪಿಗಳು ಅಂದುಕೊಂಡಿದ್ದರು. ಆದರೆ, ಅಬಕಾರಿ ಅಧಿಕಾರಿಗಳ ಚಾಕಚಕ್ಯತೆಯಿಂದ ಅವರ ಪ್ಲಾನ್ ಉಲ್ಟಾ ಆಗಿದೆ. ಅಲ್ಲದೇ, ಯಾವ ಪಕ್ಷ?, ಯಾವ ಅಭ್ಯರ್ಥಿಗೆ ಈ ಮದ್ಯ ಸೇರಿದೆ ಎಂಬುದು ತನಿಖೆಯಿಂದ ತಿಳಿದು ಬರಲಿದೆ.
Illegal transportation of liquor is going on quietly in the run-up to the elections in five states. Following this, the excise officials in Belagavi have succeeded in seizing a huge quantity of liquor that was being illegally transported in a lorry from Goa to Telangana using state-of-the-art technology.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm