ಬ್ರೇಕಿಂಗ್ ನ್ಯೂಸ್
22-10-23 08:26 pm Mangaluru Correspondent ಕ್ರೈಂ
ಮಂಗಳೂರು, ಅ.22: ಲಾಡ್ಜ್ ಒಂದರಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಅಂಕಿಟೋಲ ಮತ್ತು ಘಾನಾ ದೇಶದ ಸಲಾಮ್ ಕ್ರಿಸ್ತಿಯನ್ ಬಂಧಿತರು. ಕದ್ರಿ ಠಾಣೆ ವ್ಯಾಪ್ತಿಯ ಫ್ಲಾಟ್ ಒಂದರಲ್ಲಿ ಇವರು ಬೆಂಗಳೂರಿನಿಂದ ಬಂದು ಉಳಿದುಕೊಂಡಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕದ್ರಿ ಠಾಣೆ ಎಸ್ಐ ಉಮೇಶ್ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ವೀಸಾ ಬಗ್ಗೆ ಪರಿಶೀಲನೆ ನಡೆಸಿದಾಗ ಇಬ್ಬರು ಕೂಡ 2018ರ ಬಳಿಕ ಸೂಕ್ತ ವೀಸಾ ಇಲ್ಲದೆ ವಾಸ ಇರುವುದು ಕಂಡುಬಂದಿದೆ. ನೈಜೀರಿಯಾದ ವ್ಯಕ್ತಿ ಬೆಂಗಳೂರಿನ ಬಾಣಸವಾಡಿಯಲ್ಲಿ ಸೆಲೂನ್ ನಡೆಸುತ್ತಿದ್ದು ಮಣಿಪುರದ ಯುವತಿಯನ್ನು ಮದುವೆಯಾಗಿ ಒಂದು ಮಗುವನ್ನು ಹೊಂದಿದ್ದಾನೆ. ಈತನ ಗೆಳೆಯ ಸಲಾಮ್ ಕ್ರಿಸ್ತಿಯನ್ ಬೆಂಗಳೂರಿನಲ್ಲಿ ಫುಟ್ಬಾಲ್ ಆಡುತ್ತಿದ್ದು ಕೊತ್ತನೂರಿನಲ್ಲಿ ವಾಸವಿದ್ದ. ಇಬ್ಬರಿಗೂ ಮಂಗಳೂರು ಮೂಲದ ಅನಿಲ್ ಡಿಸಿಲ್ವ ಸಮಾನ ಸ್ನೇಹಿತರಾಗಿದ್ದು ಅವರೊಂದಿಗೆ ಮಂಗಳೂರಿಗೆ ಬಂದಿದ್ದರು.
ಅನಿಲ್ ಡಿಸಿಲ್ವಾ ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಅವರ ಖಾಸಗಿ ಫಂಕ್ಷನ್ ನಲ್ಲಿ ಪಾಲ್ಗೊಳ್ಳಲು ಗೆಳೆಯರು ಬಂದಿದ್ದರು. ಅಕ್ರಮ ನೆಲೆಸಿದ್ದರಿಂದ ಇಬ್ಬರನ್ನೂ ಬಂಧಿಸಿ ಪೊಲೀಸರು ಬೆಂಗಳೂರಿಗೆ ಕಳಿಸಿಕೊಟ್ಟಿದ್ದು ಡಿಟೆನ್ಶನ್ ಸೆಂಟರಿನಲ್ಲಿ ಇರಿಸಲಾಗಿದೆ.
Two foreign nationals living illegally in India on expired visas were detained by police. The two were detained by the city east police station personnel.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm