ಬ್ರೇಕಿಂಗ್ ನ್ಯೂಸ್
23-10-23 05:47 pm Mangalore Correspondent ಕ್ರೈಂ
ಉಳ್ಳಾಲ, ಅ.23: ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್ ಎದುರಿಸುತ್ತಿದ್ದ ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ, ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಮಂಗಳೂರು ದಕ್ಷಿಣ ಉಪವಿಭಾಗ ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ಬಂಧಿಸಿದೆ.
ನಟೋರಿಯಸ್ ಶಾರ್ಪ್ ಶೂಟರ್ ಹನೀಫ್ ಯಾನೆ ಅಲಿ ಮುನ್ನಾ ಭೂಗತ ಪಾತಕಿ ರವಿ ಪೂಜಾರಿಯ ಕುಕೃತ್ಯಗಳಿಗೆ ಕರಾವಳಿಯ ಪ್ರತಿನಿಧಿಯಾಗಿದ್ದು ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣದಲ್ಲಿ ರಾಜ್ಯದ ಅನೇಕ ಠಾಣೆಗಳಿಂದ ಬಂಧನ ವಾರಂಟ್ ಎದುರಿಸುತ್ತಿದ್ದ. ಈತನ ವಿರುದ್ಧ ಕೊಣಾಜೆ, ಮಂಗಳೂರು ಉತ್ತರ, ಪುತ್ತೂರು, ಬರ್ಕೆ, ವಿಟ್ಲ, ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣಗಳಿವೆ.
2010 ಮತ್ತು 2013ರಲ್ಲಿ ಕಾಸರಗೋಡು ಜಿಲ್ಲೆಯ ಬೇವಿಂಜ ಪಿಡಬ್ಲ್ಯುಡಿ ಗುತ್ತಿಗೆದಾರರ ಶೂಟೌಟ್ ಪ್ರಕರಣ, ಮಂಜೇಶ್ವರದಲ್ಲಿ ಕಳ್ಳತನ,
ಕುಂಬಳೆ ಹಾಗೂ ವಿದ್ಯಾನಗರ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು. ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಸಂಜೀವ ಶೆಟ್ಟಿ ಸಿಲ್ಕ್ಸ್ ಮಳಿಗೆ ಮತ್ತು ಪುತ್ತೂರು ರಾಜಧಾನಿ ಜ್ಯುವೆಲ್ಲರ್ಸ್ ನಲ್ಲಿ ಈತ ನಡೆಸಿದ ಶೂಟೌಟ್ ಪ್ರಕರಣ ಜಿಲ್ಲೆಯಲ್ಲಿ ಸದ್ದು ಮಾಡಿತ್ತು.
ಕರ್ನಾಟಕದಲ್ಲಿ ರವಿ ಪೂಜಾರಿಯ ಅಂಡರ್ ವರ್ಲ್ಡ್ ಮಾಫಿಯಾವನ್ನು ಅಲಿ ಮುನ್ನಾ ಮತ್ತು ಮನೀಷ್ ಕಂಟ್ರೋಲ್ ಮಾಡುತ್ತಿದ್ದರು. ಕರಾವಳಿಯ ಭೂಗತ ವ್ಯವಹಾರವನ್ನು ಅಲಿ ಮುನ್ನಾನೇ ನಿರ್ವಹಿಸುತ್ತಿದ್ದ. ಕಾರ್ಕಳದ ಕಿಶನ್ ಹೆಗ್ಡೆ ಕೊಲೆಗೆ ಪ್ರತೀಕಾರವಾಗಿ ಕೋಡಿಕೆರೆ ಮನೋಜ್ ಗ್ಯಾಂಗಿನಿಂದ ಬೆಂಗಳೂರಲ್ಲಿ ಮನೀಷ್ ಕೊಲೆಯಾಗಿದ್ದ. ಆಪ್ತ ಸಹಚರ ಮನೀಷ್ ಕೊಲೆಯಾದ ನಂತರ ಅಲಿ ಮುನ್ನಾ ಕಂಗಾಲಾಗಿ ಮುಂಬೈ, ಬೆಂಗಳೂರಲ್ಲೇ ತಲೆಮರೆಸಿಕೊಂಡಿದ್ದ. ಆನಂತರವೂ ಹಫ್ತಾ ವಸೂಲಿಯಲ್ಲಿ ತೊಡಗಿಸಿದ್ದ ಅಲಿ ಮುನ್ನಾನನ್ನು ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ಮತ್ತು ಕೊಣಾಜೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೇರಳದಲ್ಲಿ ಬಂಧಿಸಿದ್ದಾರೆ.
Mangalore Underworld don Ravi Pujari Kali Yogesh close aide Mohammed Hannif arrested
22-07-25 03:02 pm
HK News Desk
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
22-07-25 03:04 pm
HK News Desk
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
22-07-25 01:27 pm
Mangalore Correspondent
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
22-07-25 12:38 pm
HK News Desk
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm