ಬ್ರೇಕಿಂಗ್ ನ್ಯೂಸ್
23-10-23 05:47 pm Mangalore Correspondent ಕ್ರೈಂ
ಉಳ್ಳಾಲ, ಅ.23: ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್ ಎದುರಿಸುತ್ತಿದ್ದ ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ, ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಮಂಗಳೂರು ದಕ್ಷಿಣ ಉಪವಿಭಾಗ ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ಬಂಧಿಸಿದೆ.
ನಟೋರಿಯಸ್ ಶಾರ್ಪ್ ಶೂಟರ್ ಹನೀಫ್ ಯಾನೆ ಅಲಿ ಮುನ್ನಾ ಭೂಗತ ಪಾತಕಿ ರವಿ ಪೂಜಾರಿಯ ಕುಕೃತ್ಯಗಳಿಗೆ ಕರಾವಳಿಯ ಪ್ರತಿನಿಧಿಯಾಗಿದ್ದು ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣದಲ್ಲಿ ರಾಜ್ಯದ ಅನೇಕ ಠಾಣೆಗಳಿಂದ ಬಂಧನ ವಾರಂಟ್ ಎದುರಿಸುತ್ತಿದ್ದ. ಈತನ ವಿರುದ್ಧ ಕೊಣಾಜೆ, ಮಂಗಳೂರು ಉತ್ತರ, ಪುತ್ತೂರು, ಬರ್ಕೆ, ವಿಟ್ಲ, ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣಗಳಿವೆ.
2010 ಮತ್ತು 2013ರಲ್ಲಿ ಕಾಸರಗೋಡು ಜಿಲ್ಲೆಯ ಬೇವಿಂಜ ಪಿಡಬ್ಲ್ಯುಡಿ ಗುತ್ತಿಗೆದಾರರ ಶೂಟೌಟ್ ಪ್ರಕರಣ, ಮಂಜೇಶ್ವರದಲ್ಲಿ ಕಳ್ಳತನ,
ಕುಂಬಳೆ ಹಾಗೂ ವಿದ್ಯಾನಗರ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು. ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಸಂಜೀವ ಶೆಟ್ಟಿ ಸಿಲ್ಕ್ಸ್ ಮಳಿಗೆ ಮತ್ತು ಪುತ್ತೂರು ರಾಜಧಾನಿ ಜ್ಯುವೆಲ್ಲರ್ಸ್ ನಲ್ಲಿ ಈತ ನಡೆಸಿದ ಶೂಟೌಟ್ ಪ್ರಕರಣ ಜಿಲ್ಲೆಯಲ್ಲಿ ಸದ್ದು ಮಾಡಿತ್ತು.
ಕರ್ನಾಟಕದಲ್ಲಿ ರವಿ ಪೂಜಾರಿಯ ಅಂಡರ್ ವರ್ಲ್ಡ್ ಮಾಫಿಯಾವನ್ನು ಅಲಿ ಮುನ್ನಾ ಮತ್ತು ಮನೀಷ್ ಕಂಟ್ರೋಲ್ ಮಾಡುತ್ತಿದ್ದರು. ಕರಾವಳಿಯ ಭೂಗತ ವ್ಯವಹಾರವನ್ನು ಅಲಿ ಮುನ್ನಾನೇ ನಿರ್ವಹಿಸುತ್ತಿದ್ದ. ಕಾರ್ಕಳದ ಕಿಶನ್ ಹೆಗ್ಡೆ ಕೊಲೆಗೆ ಪ್ರತೀಕಾರವಾಗಿ ಕೋಡಿಕೆರೆ ಮನೋಜ್ ಗ್ಯಾಂಗಿನಿಂದ ಬೆಂಗಳೂರಲ್ಲಿ ಮನೀಷ್ ಕೊಲೆಯಾಗಿದ್ದ. ಆಪ್ತ ಸಹಚರ ಮನೀಷ್ ಕೊಲೆಯಾದ ನಂತರ ಅಲಿ ಮುನ್ನಾ ಕಂಗಾಲಾಗಿ ಮುಂಬೈ, ಬೆಂಗಳೂರಲ್ಲೇ ತಲೆಮರೆಸಿಕೊಂಡಿದ್ದ. ಆನಂತರವೂ ಹಫ್ತಾ ವಸೂಲಿಯಲ್ಲಿ ತೊಡಗಿಸಿದ್ದ ಅಲಿ ಮುನ್ನಾನನ್ನು ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ಮತ್ತು ಕೊಣಾಜೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೇರಳದಲ್ಲಿ ಬಂಧಿಸಿದ್ದಾರೆ.
Mangalore Underworld don Ravi Pujari Kali Yogesh close aide Mohammed Hannif arrested
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm