ಬ್ರೇಕಿಂಗ್ ನ್ಯೂಸ್
23-10-23 05:47 pm Mangalore Correspondent ಕ್ರೈಂ
ಉಳ್ಳಾಲ, ಅ.23: ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್ ಎದುರಿಸುತ್ತಿದ್ದ ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ, ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಮಂಗಳೂರು ದಕ್ಷಿಣ ಉಪವಿಭಾಗ ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ಬಂಧಿಸಿದೆ.
ನಟೋರಿಯಸ್ ಶಾರ್ಪ್ ಶೂಟರ್ ಹನೀಫ್ ಯಾನೆ ಅಲಿ ಮುನ್ನಾ ಭೂಗತ ಪಾತಕಿ ರವಿ ಪೂಜಾರಿಯ ಕುಕೃತ್ಯಗಳಿಗೆ ಕರಾವಳಿಯ ಪ್ರತಿನಿಧಿಯಾಗಿದ್ದು ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣದಲ್ಲಿ ರಾಜ್ಯದ ಅನೇಕ ಠಾಣೆಗಳಿಂದ ಬಂಧನ ವಾರಂಟ್ ಎದುರಿಸುತ್ತಿದ್ದ. ಈತನ ವಿರುದ್ಧ ಕೊಣಾಜೆ, ಮಂಗಳೂರು ಉತ್ತರ, ಪುತ್ತೂರು, ಬರ್ಕೆ, ವಿಟ್ಲ, ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣಗಳಿವೆ.
2010 ಮತ್ತು 2013ರಲ್ಲಿ ಕಾಸರಗೋಡು ಜಿಲ್ಲೆಯ ಬೇವಿಂಜ ಪಿಡಬ್ಲ್ಯುಡಿ ಗುತ್ತಿಗೆದಾರರ ಶೂಟೌಟ್ ಪ್ರಕರಣ, ಮಂಜೇಶ್ವರದಲ್ಲಿ ಕಳ್ಳತನ,
ಕುಂಬಳೆ ಹಾಗೂ ವಿದ್ಯಾನಗರ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು. ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಸಂಜೀವ ಶೆಟ್ಟಿ ಸಿಲ್ಕ್ಸ್ ಮಳಿಗೆ ಮತ್ತು ಪುತ್ತೂರು ರಾಜಧಾನಿ ಜ್ಯುವೆಲ್ಲರ್ಸ್ ನಲ್ಲಿ ಈತ ನಡೆಸಿದ ಶೂಟೌಟ್ ಪ್ರಕರಣ ಜಿಲ್ಲೆಯಲ್ಲಿ ಸದ್ದು ಮಾಡಿತ್ತು.
ಕರ್ನಾಟಕದಲ್ಲಿ ರವಿ ಪೂಜಾರಿಯ ಅಂಡರ್ ವರ್ಲ್ಡ್ ಮಾಫಿಯಾವನ್ನು ಅಲಿ ಮುನ್ನಾ ಮತ್ತು ಮನೀಷ್ ಕಂಟ್ರೋಲ್ ಮಾಡುತ್ತಿದ್ದರು. ಕರಾವಳಿಯ ಭೂಗತ ವ್ಯವಹಾರವನ್ನು ಅಲಿ ಮುನ್ನಾನೇ ನಿರ್ವಹಿಸುತ್ತಿದ್ದ. ಕಾರ್ಕಳದ ಕಿಶನ್ ಹೆಗ್ಡೆ ಕೊಲೆಗೆ ಪ್ರತೀಕಾರವಾಗಿ ಕೋಡಿಕೆರೆ ಮನೋಜ್ ಗ್ಯಾಂಗಿನಿಂದ ಬೆಂಗಳೂರಲ್ಲಿ ಮನೀಷ್ ಕೊಲೆಯಾಗಿದ್ದ. ಆಪ್ತ ಸಹಚರ ಮನೀಷ್ ಕೊಲೆಯಾದ ನಂತರ ಅಲಿ ಮುನ್ನಾ ಕಂಗಾಲಾಗಿ ಮುಂಬೈ, ಬೆಂಗಳೂರಲ್ಲೇ ತಲೆಮರೆಸಿಕೊಂಡಿದ್ದ. ಆನಂತರವೂ ಹಫ್ತಾ ವಸೂಲಿಯಲ್ಲಿ ತೊಡಗಿಸಿದ್ದ ಅಲಿ ಮುನ್ನಾನನ್ನು ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ಮತ್ತು ಕೊಣಾಜೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೇರಳದಲ್ಲಿ ಬಂಧಿಸಿದ್ದಾರೆ.
Mangalore Underworld don Ravi Pujari Kali Yogesh close aide Mohammed Hannif arrested
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am