ಬ್ರೇಕಿಂಗ್ ನ್ಯೂಸ್
24-10-23 06:22 pm Mangalore Correspondent ಕ್ರೈಂ
ಬಂಟ್ವಾಳ, ಅ.24: ಕೆಲಸದ ಆಳುವಿನ ಬಗ್ಗೆ ಇರಿಸಿದ್ದ ಅತಿಯಾದ ನಂಬಿಕೆಯೇ ಮಾಲಕನಿಗೆ ಮುಳುವಾಗಿದೆ. ಬಿಲ್ಡರ್ ಆಗಿದ್ದ ವ್ಯಕ್ತಿಯೊಬ್ಬರ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಯೇ ಲಕ್ಷಾಂತರ ರೂಪಾಯಿ ನಗದು ಹಾಗೂ ಅಪಾರ ಪ್ರಮಾಣದ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಪುದು ಗ್ರಾಮದ ಕೋಡಿಮಜಲು ನಿವಾಸಿ ಇಮಾದ್ ಬಿಲ್ಡರ್ ಸಂಸ್ಥೆಯ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಮನೆಯ ಕಪಾಟಿನಲ್ಲಿ ಇರಿಸಲಾಗಿದ್ದ ಚಿನ್ನಾಭರಣ ಸಹಿತ ಲಕ್ಷಾಂತರ ರೂ. ಹಣವನ್ನು ಮನೆಯ ಕೆಲಸದಾತನೇ ಕದ್ದುಕೊಂಡು ಹೋಗಿರುವುದಾಗಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಸುಮಾರು 27,50,000 ರೂ. ನಗದು ಹಾಗೂ 4,96,000 ರೂ. ಮೌಲ್ಯದ ವಿವಿಧ ಬಗೆಯ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ ಎಂದು ಝಫರುಲ್ಲಾ ತಿಳಿಸಿದ್ದಾರೆ.
ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಜೊತೆ ಸುಮಾರು 8 ತಿಂಗಳ ಹಿಂದೆ ಕಟ್ಟಡ ಕಾಮಗಾರಿಯ ಕೆಲಸಕ್ಕೆ ಸೇರಿಕೊಂಡಿದ್ದ ಮಂಜೇಶ್ವರ ಮೂಲದ ಆಲಿ ಎಂಬಾತನ ಬಗ್ಗೆ ಸಂಶಯ ಉಂಟಾಗಿದೆ. ಆಲಿಗೆ ಫರಂಗಿಪೇಟೆ ಎಂಬಲ್ಲಿನ ಹುಡುಗಿಯ ಜೊತೆ ವಿವಾಹವಾಗಿದ್ದು, ಮಾಲಕರ ವಿಶ್ವಾಸ ಗಳಿಸಿ ಮನೆಗೇ ಬಂದು ಹೋಗುತ್ತಿದ್ದ. ಅಲ್ಲದೆ, ಝಫರುಲ್ಲಾ ಅವರ ಸಹಾಯಕನಾಗಿ ದುಡಿಯುತ್ತಿದ್ದ. ಹೀಗಾಗಿ ಆಲಿಯಲ್ಲಿ ಮನೆಗೆ ಅಗತ್ಯ ಸಾಮಾಗ್ರಿಗಳನ್ನು ಕಳುಹಿಸಿಕೊಡುತ್ತಿದ್ದರು. ಆದರೆ ಈತನ ಮೇಲಿರಿಸಿದ್ದ ಅತೀ ವಿಶ್ವಾಸವೇ ಮಾಲಕರಿಗೆ ಮುಳುವಾಗಿ ಪರಿಣಮಿಸಿದೆ.
ಅ.18 ರಂದು ಮನೆ ಮಂದಿ ಎಲ್ಲರೂ ಮನೆಗೆ ಬೀಗ ಹಾಕಿ ಮಂಗಳೂರಿನ ಜಪ್ಪುವಿನ ತಮ್ಮನ ಮನೆಗೆ ಹೋಗಿದ್ದರು. ಮನೆಗೆ ಬೀಗ ಹಾಕಿದ ನಂತರ, ತನ್ನ ವಿಶ್ವಾಸದ ಕೆಲಸದಾಳು ಬಳಿ ಕೀಯನ್ನು ನೀಡಿದ್ದರು. ಮರುದಿನ 19ರಂದು ಕಟ್ಟಡ ಕಾಮಗಾರಿ ವಿಚಾರಕ್ಕೆ ಮಾಲಕ ಮೊಹಮ್ಮದ್ ಅವರು ಈತನಿಗೆ ಪೋನ್ ಮಾಡಿದಾಗ ಪೋನ್ ಸ್ವಿಚ್ ಆಫ್ ಆಗಿತ್ತು.
ಆದರೆ ಈ ವಿಚಾರವನ್ನು ಸೀರಿಯಸ್ ಆಗಿ ತೆಗೆದುಕೊಂಡಿರದ ಮಾಲಕರು ಅ.20 ರಂದು ಅಗತ್ಯ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿದ್ದರು.
ಕೆಲಸದ ಒತ್ತಡದ ನಡುವೆ ಅ.23 ರಂದು ಊರಿಗೆ ವಾಪಾಸು ಆಗಿದ್ದು ರಾತ್ರಿ ಸುಮಾರು 8 ಗಂಟೆಗೆ ಕೋಡಿಮಜಲಿನ ಮನೆಗೆ ಬಂದಿದ್ದರು. ಕೀ ಕೊಡುವಂತೆ ಆತನಿಗೆ ಪೋನ್ ಮಾಡಿದಾಗ ಆಲಿ ಫೋನ್ ಆಫ್ ಆಗಿಯೇ ಇತ್ತು. ಸಂಶಯದಿಂದ ಮನೆಯ ಹಿಂಬದಿಯ ಕಿಟಕಿಯಲ್ಲಿ ಇಣುಕಿ ನೋಡಿದಾಗ ಕೋಣೆಯ ಬಾಗಿಲು ತೆರದುಕೊಂಡಿತ್ತು, ಕಪಾಟಿನ ಲಾಕರ್ ಮುರಿದು ಅದರಲ್ಲಿದ್ದ ಸೊತ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿತ್ತು.
ಕೂಡಲೇ ಗ್ರಾಮಾಂತರ ಪೋಲಿಸರಿಗೆ ದೂರು ನೀಡಿದ್ದು ಪೋಲೀಸರ ಸಮಕ್ಷಮದಲ್ಲಿ ಮನೆಯ ಬಾಗಿಲು ಮುರಿದು ನೋಡಿದಾಗ ಮೊಹಮ್ಮದ್ ಅವರು ಕಪಾಟಿನಲ್ಲಿರಿಸಿದ್ದ ರೂ. 25 ಲಕ್ಷ ಹಾಗೂ ಅವರ ತಂದೆಯ ಕಪಾಟಿನಲ್ಲಿರಿಸಿದ್ದ ರೂ.2,50,000 ಹಾಗೂ 4,96,000 ರೂ. ಮೌಲ್ಯದ 24 ಗ್ರಾಂ ತೂಕದ ಬ್ರಾಸ್ಲೆಟ್, 16 ಗ್ರಾಂ ತೂಕದ ಎರಡು ಚಿನ್ನದ ಉಂಗುರ, 40 ಗ್ರಾಂ ತೂಕದ ಚಿನ್ನದ ಬಲೆಗಳು, 8 ಗ್ರಾಂ ತೂಕದ ಚಿನ್ನದ ಬೆಂಡೋಲೆ, 32 ಗ್ರಾಂ ತೂಕದ ಚಿನ್ನದ ಮಾಲೆ, 4 ಗ್ರಾಂ ತೂಕದ ಚಿನ್ನದ ಸರ ಕಳವು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ ಹರೀಶ್ ಹಾಗೂ ಬೆರಳಚ್ಚು ತಜ್ಞರು, ಶ್ವಾನದಳದವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Mangalore Bantwal Builder house robbery by servant, 27 lakhs worth gold robbed. Also cash of 4 lakhs cash robbed.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm