ಬ್ರೇಕಿಂಗ್ ನ್ಯೂಸ್
26-10-23 10:34 pm Mangalore Correspondent ಕ್ರೈಂ
ಉಳ್ಳಾಲ, ಅ.26: ಮಧ್ಯರಾತ್ರಿ ಮನೆಯ ಮೇಲ್ಛಾವಣಿಯ ಹಂಚು ಸರಿಸಿ ಒಳನುಗ್ಗಿದ ಗಾಂಜಾ ವ್ಯಸನಿಯೋರ್ವ ಮಂಚದಲ್ಲಿ ಇಬ್ಬರು ಹೆಣ್ಮಕ್ಕಳೊಂದಿಗೆ ಮಲಗಿದ್ದ ಮಹಿಳೆಗೆ ಲೈಂಗಿಕ ಕೀಟಲೆ ಕೊಟ್ಟಿದ್ದು ಕೂಡಲೇ ಎಚ್ಚೆತ್ತ ಮನೆಮಂದಿಯ ಚೀರಾಟಕ್ಕೆ ಆಗಂತುಕ ಮೊಬೈಲನ್ನೇ ಬಿಟ್ಟೋಡಿದ ಘಟನೆ ಹರೇಕಳ ಗ್ರಾಮದ ರಾಜಗುಡ್ಡೆ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
ಹರೇಕಳ ಗ್ರಾಮದ ಕೊಜಪಾಡಿ ನಿವಾಸಿ ನೌಫಾಲ್(32)ಎಂಬಾತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದು ಅತ್ಯಾಚಾರ ಯತ್ನ ಆರೋಪದಲ್ಲಿ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆ ಹರೇಕಳದ ರಾಜಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ಗಂಡ, ಇಬ್ಬರು ಪುತ್ರಿಯರೊಂದಿಗೆ ವಾಸವಿದ್ದಾರೆ. ಗಂಡ ರಾತ್ರಿ ಪಾಳಿ ಸೆಕ್ಯುರಿಟಿ ಗಾರ್ಡ್ ವೃತ್ತಿಗೆ ತೆರಳಿದ್ದು ಮನೆಯೊಳಗೆ ಸಂತ್ರಸ್ತ ಮಹಿಳೆ ಇಬ್ಬರು ಹೆಣ್ಮಕ್ಕಳೊಂದಿಗೆ ಮಲಗಿದ್ದ ವೇಳೆ ಮನೆಯೊಳಗೆ ನುಗ್ಗಿದ ನೌಫಾಲ್ ಮಂಚದ ಕೆಳಗೆ ಮಲಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಎಚ್ಚೆತ್ತ ಮಹಿಳೆ ಮತ್ತು ಮಕ್ಕಳು ಜೋರಾಗಿ ಚೀರಾಡಿದ್ದು ಗಲಿಬಿಲಿಗೊಂಡ ನೌಫಾಲ್ ತನ್ನ ಮೊಬೈಲನ್ನೇ ಬಿಟ್ಟು ಓಡಿದ್ದಾನೆ. ಮಧ್ಯರಾತ್ರಿಯೇ ಘಟನಾ ಸ್ಥಳದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾವಣೆಗೊಂಡಿದ್ದು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಗುರುವಾರ ಆರೋಪಿ ನೌಫಾಲನ್ನ ಬಂಧಿಸಿದ್ದಾರೆ.
ವರಸೆ ತಪ್ಪಿಸುವ ಕೊಣಾಜೆ ಪೊಲೀಸರು
ಕೊಣಾಜೆ ಪೊಲೀಸರು ಪ್ರತಿ ಅಪರಾಧ ಪ್ರಕರಣಗಳಲ್ಲೂ ನುಣುಚಿಕೊಳ್ಳುವುದರಲ್ಲಿ ತಂಬಾನೇ ನಿಸ್ಸೀಮರು. ಇಂದು ಮಧ್ಯಾಹ್ನದ ನಂತರ ಘಟನೆ ಬಗ್ಗೆ ಪೊಲೀಸರಲ್ಲಿ ಹೆಡ್ ಲೈನ್ ಕರ್ನಾಟಕ ವರದಿಗಾರ ಮಾಹಿತಿ ಕೇಳಿದಾಗ, ಅದು ಕಳ್ಳತನ ಕೇಸ್, ಅಪರಾಧಿ ಸ್ವಲ್ಪ ಕುಡುಕ ಎಂದು ನುಣ್ಣಗೆ ನುಣುಚಿಕೊಳ್ಳಲು ಪ್ರಯತ್ನಿಸಿದ್ದಾರೆ. ನಂತರ ಮಂಗಳೂರು ನಗರ ಪೊಲೀಸ್ ಆಯುಕ್ತರಲ್ಲಿ ವಿಚಾರಿಸಿದಾಗ ಅಸಲಿಯತ್ತು ತಿಳಿಸಿದ್ದಾರೆ.
In a shocking incident, a ganja addict, who broke into his house in the middle of the night, sexually harassed a woman who was sleeping on a cot with her two daughters and threw away her mobile phone at Rajagudde in Harekala village on Wednesday night.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm