ಬ್ರೇಕಿಂಗ್ ನ್ಯೂಸ್
28-10-23 03:35 pm Mangalore Correspondent ಕ್ರೈಂ
ಮಂಗಳೂರು, ಅ.28: ಮಂಗಳೂರಿನ ಉಪ ನೋಂದಣಿ ಕಚೇರಿಯಲ್ಲಿ ಆಧಾರ್ ಸಂಖ್ಯೆ ಮತ್ತು ಬೆರಳಚ್ಚು ಕೊಟ್ಟಿರುವ ಗ್ರಾಹಕರ ಬ್ಯಾಂಕ್ ಖಾತೆಗಳಿಂದ ಹಣ ಕೀಳುವ ಸೈಬರ್ ದೋಖಾ ನಿರಂತರ ಮುಂದುವರಿದಿದೆ. ಮಂಗಳೂರಿನ ಸೈಬರ್ ಠಾಣೆಯಲ್ಲಿ ಮತ್ತೆ ಎಂಟು ಎಫ್ಐಆರ್ ದಾಖಲಾಗಿದ್ದು, ದೂರು ಕೊಟ್ಟವರೆಲ್ಲ ರಿಜಿಸ್ಟ್ರೇಶನ್ ಕಚೇರಿಯ ಮೇಲೆ ಬೆರಳು ತೋರಿಸಿದ್ದಾರೆ. ವಿಶೇಷ ಅಂದ್ರೆ, ಹೀಗೆ ವಂಚನೆಗೊಳಗಾದವರಲ್ಲಿ ಪೊಲೀಸ್ ಅಧಿಕಾರಿಯೂ ಇದ್ದಾರೆ. ವಂಚನೆ ಪ್ರಕರಣವನ್ನು ಗಂಭೀರ ಪರಿಗಣಿಸಿದ ಮಂಗಳೂರು ಪೊಲೀಸರು ಬಿಹಾರ ಮೂಲದ ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಎಎಸ್ಐ ಆಗಿರುವ ಆಲ್ಬರ್ಟ್ ಲಸ್ರಾದೋ ಹಣ ಕಳಕೊಂಡವರಲ್ಲಿ ಒಬ್ಬರಾಗಿದ್ದು ವಂಚನೆ ಬಗ್ಗೆ ಸೈಬರ್ ಅಪರಾಧಗಳ ಠಾಣೆಗೆ ದೂರು ನೀಡಿದ್ದಾರೆ. ಲಸ್ರಾದೋ ಅವರ ಎಸ್ ಬಿಐ ಬ್ಯಾಂಕ್ ಖಾತೆಯಿಂದ ಆಗಸ್ಟ್ 23ರಂದು 4990 ರೂ., 24ರಂದು 8500 ರೂ., ಸೆ.6ರಿಂದ 9ರ ನಡುವೆ 10 ಸಾವಿರ, 10 ಸಾವಿರ ಮತ್ತು 3400 ರೂ. ಹಣ ಕಡಿತ ಆಗಿದೆ. ಒಟ್ಟು 36,890 ರೂಪಾಯಿ ಹಣ ಇವರ ಖಾತೆಯಿಂದ ಕಡಿತ ಆಗಿದ್ದು, ಯಾವುದೇ ಓಟಿಪಿಯನ್ನು ಯಾರಿಗೂ ಕೊಟ್ಟಿರಲಿಲ್ಲ. ಬ್ಯಾಂಕ್ ಕಚೇರಿಯಲ್ಲಿ ವಿಚಾರಿಸಿದಾಗ ಆಧಾರ್ ಸಂಖ್ಯೆ ಮತ್ತು ಬೆರಳಚ್ಚು ಸೋರಿಕೆಯಾಗಿ ಯಾರೋ ಹಣವನ್ನು ಅನಧಿಕೃತವಾಗಿ ತೆಗೆದಿರುವುದು ಪತ್ತೆಯಾಗಿದೆ.
ಆಲ್ಬರ್ಟ್ ಲಸ್ರಾದೋ ಅವರು ಆಗಸ್ಟ್ 2ರಂದು ಮಂಗಳೂರಿನ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಜಾಗ ಮಾರಾಟದ ಬಗ್ಗೆ ಹೆಬ್ಬೆರಳಿನ ಗುರುತು ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ನೀಡಿದ್ದರು. ಅಪರಿಚಿತರು ಈ ತಂತ್ರಾಂಶವನ್ನು ಬಳಸಿಕೊಂಡು ತನ್ನ ಬ್ಯಾಂಕ್ ಖಾತೆಯಿಂದ ಹಣ ಕಿತ್ತುಕೊಂಡಿದ್ದಾರೆ ಎಂದು ಅವರು ಸೈಬರ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದೇ ರೀತಿ ಇತರ ಏಳು ಮಂದಿ ಜಾಗ ರಿಜಿಸ್ಟ್ರೇಶನ್ ವಿಚಾರದಲ್ಲಿ ಮಂಗಳೂರಿನ ಉಪ ನೋಂದಣಿ ಕಚೇರಿಗೆ ಆಧಾರ್ ಕಾರ್ಡ್ ಮತ್ತು ಬೆರಳಚ್ಚು ನೀಡಿದವರು ಹಣ ಕಳಕೊಂಡಿದ್ದಾರೆ. ಈ ರೀತಿ ಎಂಟು ಎಫ್ಐಆರ್ ಮಂಗಳೂರಿನಲ್ಲಿ ಕಳೆದ ಒಂದು ತಿಂಗಳಲ್ಲಿ ದಾಖಲಾಗಿದೆಯೆನ್ನುವ ಮಾಹಿತಿ ಲಭಿಸಿದೆ.

ಸೊಸೈಟಿಯಿಂದಲೂ ಆಧಾರ್ ಸೋರಿಕೆ
ನೀರುಮಾರ್ಗ ನಿವಾಸಿ ಮ್ಯಾಕ್ಸಿಂ ಎಂಬವರು ಸೊಸೈಟಿ ಒಂದಕ್ಕೆ ಆಧಾರ್ ಕಾರ್ಡ್ ಮತ್ತು ಬೆರಳಚ್ಚು ನೀಡಿ ಹಣ ಕಳಕೊಂಡಿದ್ದಾರೆ. ಲೋನ್ ವಿಚಾರದಲ್ಲಿ ಗುರುಪುರದ ಸೊಸೈಟಿ ಒಂದಕ್ಕೆ ತೆರಳಿದ್ದ ಅವರು ಅಲ್ಲಿ ಆಧಾರ್ ಮತ್ತು ಬೆರಳಚ್ಚು ನೀಡಿದ್ದರು. ಅಕ್ಟೋಬರ್ ತಿಂಗಳ ಆರಂಭದಲ್ಲಿ ದಿನಕ್ಕೆ 5000 ರೀತಿ ಮೂರು ದಿನ ಬ್ಯಾಂಕ್ ಖಾತೆಯಿಂದ ಹಣ ಕಡಿತವಾಗಿದೆ. ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿದಾಗ, ಆಧಾರ್ ಕಾರ್ಡ್ ಸೋರಿಕೆಯಾಗಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮ್ಯಾಕ್ಸಿಂ ಕುಟಿನೋ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಾವೇರಿ 2 ತಂತ್ರಾಂಶದ ಬಗ್ಗೆ ಸಂಶಯ ;
ಸಬ್ ರಿಜಿಸ್ಟ್ರೇಶನ್ ಕಚೇರಿಯಲ್ಲಿ ಕಾವೇರಿ 2 ತಂತ್ರಾಂಶ ಎನ್ನುವ ಹೊಸ ಸಾಫ್ಟ್ ವೇರನ್ನು ಕಳೆದ ವರ್ಷ ಅಳವಡಿಸಲಾಗಿತ್ತು. ಅದನ್ನು ಹ್ಯಾಕ್ ಮಾಡಿ, ಗ್ರಾಹಕರ ಬೆರಳಚ್ಚು ಮತ್ತು ಆಧಾರ್ ಮಾಹಿತಿಯನ್ನು ಕದಿಯುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಸರಕಾರವಾಗಲೀ, ಜಿಲ್ಲಾಡಳಿತವಾಗಲೀ ಗಂಭೀರ ಪರಿಗಣಿಸಿಲ್ಲ. ಮಂಗಳೂರಿನಲ್ಲಿ ಎರಡು ತಿಂಗಳ ಅವಧಿಯಲ್ಲಿ 25ಕ್ಕೂ ಹೆಚ್ಚು ಮಂದಿ ದೂರು ಕೊಟ್ಟು ಎಫ್ಐಆರ್ ಆಗಿದ್ದರೂ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ ಆಗಿಲ್ಲ. ಆದ್ರೆ ಮಂಗಳೂರಿನ ಸೈಬರ್ ಪೊಲೀಸರು ಅಲರ್ಟ್ ಆಗಿದ್ದು, ಆರೋಪಿಗಳ ಜಾಡು ಹಿಡಿದು ಸಾಗಿದ ಪರಿಣಾಮ ಮೂವರು ಬಿಹಾರ ಮೂಲದವರನ್ನು ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಸೈಬರ್ ಪೋಲೀಸರ ತಂಡ ಕದೀಮರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದೆ.
Cyber fraud, Aaadhar fraud at Sub Register office in Mangalore, three from Bihar held by Cen Cyber police. Recently in a span of 4 days nine cases of Aadhar fraud was reported at CEN police station. Traffic ASI Albert Lasrado also has lost amount of 36 thousnad by Aadhar fraud.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm