ಬ್ರೇಕಿಂಗ್ ನ್ಯೂಸ್
29-10-23 10:38 pm Bangalore Correspondent ಕ್ರೈಂ
ಬೆಂಗಳೂರು, ಅ.29: ನೀವು ಕಳುಹಿಸಿರುವ ಪಾರ್ಸೆಲ್ ನಲ್ಲಿ ಡ್ರಗ್ಸ್ ಇದೆ ಎಂದು ಹೇಳಿ ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಿದ ವಂಚಕರು ಆಕೆಯಿಂದಲೇ 13 ಲಕ್ಷ ರೂ. ಪೀಕಿಸಿದ ಘಟನೆ ನಡೆದಿದೆ.
ಬೆಂಗಳೂರು ನಗರದ ವಿಕ್ಟೋರಿಯಾ ಲೇಔಟ್ ಪಾಮ್ಗ್ರೋವ್ ರಸ್ತೆಯ ನಿವಾಸಿ 62 ವರ್ಷದ ಪ್ರಿಯಾ (ಹೆಸರು ಬದಲಿಸಲಾಗಿದೆ) ವಂಚನೆಗೊಳಗಾದ ಮಹಿಳೆ. ಮಹಿಳೆ ಯಾವುದೇ ಪಾರ್ಸೆಲ್ ಕಳುಹಿಸದಿದ್ದರೂ, ನೀವು ಥಾಯ್ಲೆಂಡಿಗೆ ಪಾರ್ಸೆಲ್ ಮಾಡಿದ್ದೀರಿ ಎಂದು ಹೇಳಿ ಆಕೆಯ ಆಧಾರ್ ಕಾರ್ಡ್ ಸಂಖ್ಯೆ ತಿಳಿಸಿ ನಂಬಿಸಿ ಯಾಮಾರಿಸಿದ್ದಾರೆ.
ಮುಂಬೈನ ಕೊರಿಯರ್ ಕಂಪನಿಯ ಎಕ್ಸಿಕ್ಯೂಟಿವ್ ಎಂದು ಹೇಳಿ ಮಹಿಳೆಗೆ ದೂರವಾಣಿ ಕರೆ ಮಾಡಿದ್ದ ವಂಚಕರು, ಥಾಯ್ಲೆಂಡ್'ಗೆ ನೀವು ಕಳುಹಿಸಿರುವ ಪಾರ್ಸೆಲ್ ನಲ್ಲಿ 140 ಗ್ರಾಂ ಎಂಡಿಎಂ ಡ್ರಗ್ಸ್, ಎಂಟು ಪಾಸ್ಪೋರ್ಟ್ಗಳು ಮತ್ತು ಐದು ಕ್ರೆಡಿಟ್ ಕಾರ್ಡ್ಗಳು ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಈ ವೇಳೆ ಮಹಿಳೆ ನಾನು ಯಾವುದೇ ಪಾರ್ಸೆಲ್ ಕಳುಹಿಸಿಲ್ಲ ಎಂದಿದ್ದಾರೆ. ಆದರೆ, ವಂಚಕರು ಆಕೆಯನ್ನು ನಂಬಿಸಲು ಆಕೆಯ ಆಧಾರ್ ಕಾರ್ಡ್ ಸಂಖ್ಯೆಯನ್ನು ಹೇಳಿದ್ದು ನಂಬಿಕೆ ಬರುವಂತೆ ಮಾಡಿದ್ದಾರೆ.
ಮುಂಬೈ ಕಸ್ಟಮ್ಸ್ ಅಧಿಕಾರಿಗಳು ಪಾರ್ಸೆಲ್ ಅನ್ನು ವಶಪಡಿಸಿದ್ದಾರೆ. ನಾವು ಕೂಡ ಮುಂಬೈ ಸೈಬರ್ ಕ್ರೈಮ್ ಪೊಲೀಸರನ್ನು ಸಂಪರ್ಕಿಸಿದ್ದೇವೆ ಎಂದು ಹೇಳಿ, ಆಕೆಯಲ್ಲಿ ಆತಂಕ ಹೆಚ್ಚಿಸಿದ್ದಾರೆ. ಅಲ್ಲದೆ, ಮಹಿಳೆಗೆ ಸ್ಕೈಪ್ ಡೌನ್ ಲೋಡ್ ಮಾಡುವಂತೆ ತಿಳಿಸಿ, ಕಸ್ಟಮ್ಸ್ ಕೇಸಿನಿಂದ ಪಾರಾಗಲು ವ್ಯವಸ್ಥೆ ಮಾಡುತ್ತೇವೆಂದು ಹೇಳಿ ವೈಯಕ್ತಿಕ ಮಾಹಿತಿಗಳನ್ನು ತಿಳಿಸುವಂತೆ ಲಿಂಕ್ ಕಳುಹಿಸಿದ್ದಾರೆ. ಬಳಿಕ ಬ್ಯಾಂಕ್ ಖಾತೆಯ ಸಂಖ್ಯೆ ನೀಡಿ, ಹಣ ವರ್ಗಾವಣೆ ಮಾಡುವಂತೆ ತಿಳಿಸಿದ್ದಾರೆ.
ಇದನ್ನು ನಂಬಿದ ಮಹಿಳೆ ಮರುದಿನ ಬ್ಯಾಂಕ್'ಗೆ ಹೋಗಿ ವಂಚಕರು ನೀಡಿದ್ದ ಬ್ಯಾಂಕ್ ಖಾತೆಯ ಸಂಖ್ಯೆಗೆ 13 ಲಕ್ಷ ರೂ. ಹಣ ವರ್ಗಾಯಿಸಿದ್ದಾರೆ. ಖಾತೆಗೆ ಹಣ ಬರುತ್ತಿದ್ದಂತೆಯೇ ವಂಚಕರು ತಮಗೆ ಸಂಬಂಧಿಸಿದ ಎಲ್ಲ ವಿವರಗಳನ್ನು ನಾಶಪಡಿಸಿ ಸಂಪರ್ಕ ಕಡಿತಗೊಳಿಸಿದ್ದಾರೆ. ವಂಚನೆ ತಿಳಿದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
A woman was duped of Rs 13 lakh by fraudsters who threatened her that her parcel contained drugs. The incident took place. The victim has been identified as 62-year-old Priya (name changed), a resident of Palm Grove Road, Victoria Layout, Bengaluru city. Though the woman did not send any parcel, they told her that she had sent the parcel to Thailand and gave her Aadhaar card number.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm