ಬ್ರೇಕಿಂಗ್ ನ್ಯೂಸ್
30-10-23 01:54 pm Mangalore Correspondent ಕ್ರೈಂ
ಮಂಗಳೂರು, ಅ.30: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಟೀಲು ಗಿಡಿಗೆರೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯೊಬ್ಬರು ಕೊಲೆಯಾಗಿದ್ದು ಮೂರು ದಿನಗಳ ಬಳಿಕ ಭಾನುವಾರ ಬೆಳಕಿಗೆ ಬಂದಿದೆ. ಗಿಡಿಗೆರೆ ನಿವಾಸಿ ರತ್ನಾ ಶೆಟ್ಟಿ (55) ಕೊಲೆಯಾದವರು. ಮನೆಯಿಂದ ವಾಸನೆ ಬರುತ್ತಿದ್ದುದರಿಂದ ಪಕ್ಕದ ಮನೆಯವರು ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ತಪಾಸಣೆ ನಡೆಸಿದಾಗ ಕೊಲೆ ನಡೆದಿರುವುದು ಪತ್ತೆಯಾಗಿದೆ.
ಕೈಕಾಲುಗಳನ್ನು ಕಟ್ಟಿದ ಸ್ಥಿತಿಯಲ್ಲಿದ್ದು ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿದೆ. ಮೈಯಲ್ಲಿ ರಕ್ತದ ಕಲೆಗಳು, ತರಚಿದ ಗಾಯಗಳಿವೆ. ಕೊಲೆಯಾಗಿ ಮೂರು ದಿನ ಆಗಿದ್ದರಿಂದ ಬಾತುಕೊಂಡು ವಾಸನೆ ಬರುತ್ತಿತ್ತು. ಕಟೀಲು ಚರ್ಚ್ ಬಳಿಯ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ರತ್ನಾ ಶೆಟ್ಟಿ ತನ್ನ ಮಗನೊಂದಿಗೆ ವಾಸವಿದ್ದರು. ಕೃತ್ಯ ಬೆಳಕಿಗೆ ಬಂದ ಕೂಡಲೇ ಮಗನಿಗೆ ಫೋನ್ ಮಾಡಿದ್ದರು. ಮೊದಲು ಕಿನ್ನಿಗೋಳಿಯಲ್ಲಿದ್ದೇನೆ ಎಂದಿದ್ದ ಮಗ ರವಿರಾಜ್, ಬಳಿಕ ಫೋನ್ ಸ್ವಿಚ್ ಆಫ್ ಮಾಡಿದ್ದ. ಪೊಲೀಸರು ಬಳಿಕ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮಗನಿಂದಲೇ ಕೊಲೆ ಶಂಕೆ
ಮಗ ರವಿರಾಜ್ ಗಾಂಜಾ ವ್ಯಸನಿಯಾಗಿದ್ದು ಕಿನ್ನಿಗೋಳಿಯ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಸ್ಥಳೀಯರು ಈತನಲ್ಲಿ ತಾಯಿ ಬಗ್ಗೆ ವಿಚಾರಿಸಿದಾಗ, ಅವರಿಗೆ ಹುಷಾರಿಲ್ಲ. ಸಂಬಂಧಿಕರ ಮನೆಯಲ್ಲಿ ಬಿಟ್ಟಿದ್ದೇನೆ ಎಂದು ತಿಳಿಸಿದ್ದ. ಅ.29 ರಂದು ಬೆಳಗ್ಗೆ ವಾಸನೆ ಬರುತ್ತಿದ್ದ ಕಾರಣ ಕಿಟಕಿಯಲ್ಲಿ ಇಣುಕಿ ನೋಡಿದಾಗ ರತ್ನಾ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಬಳಿಕ ಪೊಲೀಸರನ್ನು ಕರೆಸಿ, ಬಾಗಿಲು ಒಡೆದು ನೋಡಿದಾಗ ಕೈಕಾಲುಗಳನ್ನು ನೈಲಾನ್ ಹಗ್ಗದಿಂದ ಕಟ್ಟಿರುವುದು ಪತ್ತೆಯಾಗಿದೆ.
ಆರೇಳು ವರ್ಷಗಳ ಹಿಂದೆ ರತ್ನಾ ಶೆಟ್ಟಿ ಗಂಡ ತೀರಿಕೊಂಡಿದ್ದರು. ಆನಂತರ ಬಾಡಿಗೆ ಮನೆಯಲ್ಲಿದ್ದು ಹೊಟೇಲ್ ಕೆಲಸ ಮಾಡುತ್ತ ಜೀವನ ಮಾಡುತ್ತಿದ್ದರು. ಮಗ ಕೆಲವೊಮ್ಮೆ ಮನೆಗೆ ಬಂದು ಇರುತ್ತಿದ್ದ.
Mother killed at Kateel in Mangalore, Ganja Son suspected for killing.
22-07-25 03:02 pm
HK News Desk
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
22-07-25 03:04 pm
HK News Desk
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
22-07-25 01:27 pm
Mangalore Correspondent
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
22-07-25 12:38 pm
HK News Desk
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm