ಬ್ರೇಕಿಂಗ್ ನ್ಯೂಸ್
30-10-23 01:54 pm Mangalore Correspondent ಕ್ರೈಂ
ಮಂಗಳೂರು, ಅ.30: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಟೀಲು ಗಿಡಿಗೆರೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯೊಬ್ಬರು ಕೊಲೆಯಾಗಿದ್ದು ಮೂರು ದಿನಗಳ ಬಳಿಕ ಭಾನುವಾರ ಬೆಳಕಿಗೆ ಬಂದಿದೆ. ಗಿಡಿಗೆರೆ ನಿವಾಸಿ ರತ್ನಾ ಶೆಟ್ಟಿ (55) ಕೊಲೆಯಾದವರು. ಮನೆಯಿಂದ ವಾಸನೆ ಬರುತ್ತಿದ್ದುದರಿಂದ ಪಕ್ಕದ ಮನೆಯವರು ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ತಪಾಸಣೆ ನಡೆಸಿದಾಗ ಕೊಲೆ ನಡೆದಿರುವುದು ಪತ್ತೆಯಾಗಿದೆ.
ಕೈಕಾಲುಗಳನ್ನು ಕಟ್ಟಿದ ಸ್ಥಿತಿಯಲ್ಲಿದ್ದು ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿದೆ. ಮೈಯಲ್ಲಿ ರಕ್ತದ ಕಲೆಗಳು, ತರಚಿದ ಗಾಯಗಳಿವೆ. ಕೊಲೆಯಾಗಿ ಮೂರು ದಿನ ಆಗಿದ್ದರಿಂದ ಬಾತುಕೊಂಡು ವಾಸನೆ ಬರುತ್ತಿತ್ತು. ಕಟೀಲು ಚರ್ಚ್ ಬಳಿಯ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ರತ್ನಾ ಶೆಟ್ಟಿ ತನ್ನ ಮಗನೊಂದಿಗೆ ವಾಸವಿದ್ದರು. ಕೃತ್ಯ ಬೆಳಕಿಗೆ ಬಂದ ಕೂಡಲೇ ಮಗನಿಗೆ ಫೋನ್ ಮಾಡಿದ್ದರು. ಮೊದಲು ಕಿನ್ನಿಗೋಳಿಯಲ್ಲಿದ್ದೇನೆ ಎಂದಿದ್ದ ಮಗ ರವಿರಾಜ್, ಬಳಿಕ ಫೋನ್ ಸ್ವಿಚ್ ಆಫ್ ಮಾಡಿದ್ದ. ಪೊಲೀಸರು ಬಳಿಕ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮಗನಿಂದಲೇ ಕೊಲೆ ಶಂಕೆ
ಮಗ ರವಿರಾಜ್ ಗಾಂಜಾ ವ್ಯಸನಿಯಾಗಿದ್ದು ಕಿನ್ನಿಗೋಳಿಯ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಸ್ಥಳೀಯರು ಈತನಲ್ಲಿ ತಾಯಿ ಬಗ್ಗೆ ವಿಚಾರಿಸಿದಾಗ, ಅವರಿಗೆ ಹುಷಾರಿಲ್ಲ. ಸಂಬಂಧಿಕರ ಮನೆಯಲ್ಲಿ ಬಿಟ್ಟಿದ್ದೇನೆ ಎಂದು ತಿಳಿಸಿದ್ದ. ಅ.29 ರಂದು ಬೆಳಗ್ಗೆ ವಾಸನೆ ಬರುತ್ತಿದ್ದ ಕಾರಣ ಕಿಟಕಿಯಲ್ಲಿ ಇಣುಕಿ ನೋಡಿದಾಗ ರತ್ನಾ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಬಳಿಕ ಪೊಲೀಸರನ್ನು ಕರೆಸಿ, ಬಾಗಿಲು ಒಡೆದು ನೋಡಿದಾಗ ಕೈಕಾಲುಗಳನ್ನು ನೈಲಾನ್ ಹಗ್ಗದಿಂದ ಕಟ್ಟಿರುವುದು ಪತ್ತೆಯಾಗಿದೆ.
ಆರೇಳು ವರ್ಷಗಳ ಹಿಂದೆ ರತ್ನಾ ಶೆಟ್ಟಿ ಗಂಡ ತೀರಿಕೊಂಡಿದ್ದರು. ಆನಂತರ ಬಾಡಿಗೆ ಮನೆಯಲ್ಲಿದ್ದು ಹೊಟೇಲ್ ಕೆಲಸ ಮಾಡುತ್ತ ಜೀವನ ಮಾಡುತ್ತಿದ್ದರು. ಮಗ ಕೆಲವೊಮ್ಮೆ ಮನೆಗೆ ಬಂದು ಇರುತ್ತಿದ್ದ.
Mother killed at Kateel in Mangalore, Ganja Son suspected for killing.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am