ಬ್ರೇಕಿಂಗ್ ನ್ಯೂಸ್
30-10-23 01:54 pm Mangalore Correspondent ಕ್ರೈಂ
ಮಂಗಳೂರು, ಅ.30: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಟೀಲು ಗಿಡಿಗೆರೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯೊಬ್ಬರು ಕೊಲೆಯಾಗಿದ್ದು ಮೂರು ದಿನಗಳ ಬಳಿಕ ಭಾನುವಾರ ಬೆಳಕಿಗೆ ಬಂದಿದೆ. ಗಿಡಿಗೆರೆ ನಿವಾಸಿ ರತ್ನಾ ಶೆಟ್ಟಿ (55) ಕೊಲೆಯಾದವರು. ಮನೆಯಿಂದ ವಾಸನೆ ಬರುತ್ತಿದ್ದುದರಿಂದ ಪಕ್ಕದ ಮನೆಯವರು ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ತಪಾಸಣೆ ನಡೆಸಿದಾಗ ಕೊಲೆ ನಡೆದಿರುವುದು ಪತ್ತೆಯಾಗಿದೆ.
ಕೈಕಾಲುಗಳನ್ನು ಕಟ್ಟಿದ ಸ್ಥಿತಿಯಲ್ಲಿದ್ದು ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿದೆ. ಮೈಯಲ್ಲಿ ರಕ್ತದ ಕಲೆಗಳು, ತರಚಿದ ಗಾಯಗಳಿವೆ. ಕೊಲೆಯಾಗಿ ಮೂರು ದಿನ ಆಗಿದ್ದರಿಂದ ಬಾತುಕೊಂಡು ವಾಸನೆ ಬರುತ್ತಿತ್ತು. ಕಟೀಲು ಚರ್ಚ್ ಬಳಿಯ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ರತ್ನಾ ಶೆಟ್ಟಿ ತನ್ನ ಮಗನೊಂದಿಗೆ ವಾಸವಿದ್ದರು. ಕೃತ್ಯ ಬೆಳಕಿಗೆ ಬಂದ ಕೂಡಲೇ ಮಗನಿಗೆ ಫೋನ್ ಮಾಡಿದ್ದರು. ಮೊದಲು ಕಿನ್ನಿಗೋಳಿಯಲ್ಲಿದ್ದೇನೆ ಎಂದಿದ್ದ ಮಗ ರವಿರಾಜ್, ಬಳಿಕ ಫೋನ್ ಸ್ವಿಚ್ ಆಫ್ ಮಾಡಿದ್ದ. ಪೊಲೀಸರು ಬಳಿಕ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮಗನಿಂದಲೇ ಕೊಲೆ ಶಂಕೆ
ಮಗ ರವಿರಾಜ್ ಗಾಂಜಾ ವ್ಯಸನಿಯಾಗಿದ್ದು ಕಿನ್ನಿಗೋಳಿಯ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಸ್ಥಳೀಯರು ಈತನಲ್ಲಿ ತಾಯಿ ಬಗ್ಗೆ ವಿಚಾರಿಸಿದಾಗ, ಅವರಿಗೆ ಹುಷಾರಿಲ್ಲ. ಸಂಬಂಧಿಕರ ಮನೆಯಲ್ಲಿ ಬಿಟ್ಟಿದ್ದೇನೆ ಎಂದು ತಿಳಿಸಿದ್ದ. ಅ.29 ರಂದು ಬೆಳಗ್ಗೆ ವಾಸನೆ ಬರುತ್ತಿದ್ದ ಕಾರಣ ಕಿಟಕಿಯಲ್ಲಿ ಇಣುಕಿ ನೋಡಿದಾಗ ರತ್ನಾ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಬಳಿಕ ಪೊಲೀಸರನ್ನು ಕರೆಸಿ, ಬಾಗಿಲು ಒಡೆದು ನೋಡಿದಾಗ ಕೈಕಾಲುಗಳನ್ನು ನೈಲಾನ್ ಹಗ್ಗದಿಂದ ಕಟ್ಟಿರುವುದು ಪತ್ತೆಯಾಗಿದೆ.
ಆರೇಳು ವರ್ಷಗಳ ಹಿಂದೆ ರತ್ನಾ ಶೆಟ್ಟಿ ಗಂಡ ತೀರಿಕೊಂಡಿದ್ದರು. ಆನಂತರ ಬಾಡಿಗೆ ಮನೆಯಲ್ಲಿದ್ದು ಹೊಟೇಲ್ ಕೆಲಸ ಮಾಡುತ್ತ ಜೀವನ ಮಾಡುತ್ತಿದ್ದರು. ಮಗ ಕೆಲವೊಮ್ಮೆ ಮನೆಗೆ ಬಂದು ಇರುತ್ತಿದ್ದ.
Mother killed at Kateel in Mangalore, Ganja Son suspected for killing.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm