ಬ್ರೇಕಿಂಗ್ ನ್ಯೂಸ್
30-10-23 01:54 pm Mangalore Correspondent ಕ್ರೈಂ
ಮಂಗಳೂರು, ಅ.30: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಟೀಲು ಗಿಡಿಗೆರೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯೊಬ್ಬರು ಕೊಲೆಯಾಗಿದ್ದು ಮೂರು ದಿನಗಳ ಬಳಿಕ ಭಾನುವಾರ ಬೆಳಕಿಗೆ ಬಂದಿದೆ. ಗಿಡಿಗೆರೆ ನಿವಾಸಿ ರತ್ನಾ ಶೆಟ್ಟಿ (55) ಕೊಲೆಯಾದವರು. ಮನೆಯಿಂದ ವಾಸನೆ ಬರುತ್ತಿದ್ದುದರಿಂದ ಪಕ್ಕದ ಮನೆಯವರು ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ತಪಾಸಣೆ ನಡೆಸಿದಾಗ ಕೊಲೆ ನಡೆದಿರುವುದು ಪತ್ತೆಯಾಗಿದೆ.
ಕೈಕಾಲುಗಳನ್ನು ಕಟ್ಟಿದ ಸ್ಥಿತಿಯಲ್ಲಿದ್ದು ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿದೆ. ಮೈಯಲ್ಲಿ ರಕ್ತದ ಕಲೆಗಳು, ತರಚಿದ ಗಾಯಗಳಿವೆ. ಕೊಲೆಯಾಗಿ ಮೂರು ದಿನ ಆಗಿದ್ದರಿಂದ ಬಾತುಕೊಂಡು ವಾಸನೆ ಬರುತ್ತಿತ್ತು. ಕಟೀಲು ಚರ್ಚ್ ಬಳಿಯ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ರತ್ನಾ ಶೆಟ್ಟಿ ತನ್ನ ಮಗನೊಂದಿಗೆ ವಾಸವಿದ್ದರು. ಕೃತ್ಯ ಬೆಳಕಿಗೆ ಬಂದ ಕೂಡಲೇ ಮಗನಿಗೆ ಫೋನ್ ಮಾಡಿದ್ದರು. ಮೊದಲು ಕಿನ್ನಿಗೋಳಿಯಲ್ಲಿದ್ದೇನೆ ಎಂದಿದ್ದ ಮಗ ರವಿರಾಜ್, ಬಳಿಕ ಫೋನ್ ಸ್ವಿಚ್ ಆಫ್ ಮಾಡಿದ್ದ. ಪೊಲೀಸರು ಬಳಿಕ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮಗನಿಂದಲೇ ಕೊಲೆ ಶಂಕೆ
ಮಗ ರವಿರಾಜ್ ಗಾಂಜಾ ವ್ಯಸನಿಯಾಗಿದ್ದು ಕಿನ್ನಿಗೋಳಿಯ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಸ್ಥಳೀಯರು ಈತನಲ್ಲಿ ತಾಯಿ ಬಗ್ಗೆ ವಿಚಾರಿಸಿದಾಗ, ಅವರಿಗೆ ಹುಷಾರಿಲ್ಲ. ಸಂಬಂಧಿಕರ ಮನೆಯಲ್ಲಿ ಬಿಟ್ಟಿದ್ದೇನೆ ಎಂದು ತಿಳಿಸಿದ್ದ. ಅ.29 ರಂದು ಬೆಳಗ್ಗೆ ವಾಸನೆ ಬರುತ್ತಿದ್ದ ಕಾರಣ ಕಿಟಕಿಯಲ್ಲಿ ಇಣುಕಿ ನೋಡಿದಾಗ ರತ್ನಾ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಬಳಿಕ ಪೊಲೀಸರನ್ನು ಕರೆಸಿ, ಬಾಗಿಲು ಒಡೆದು ನೋಡಿದಾಗ ಕೈಕಾಲುಗಳನ್ನು ನೈಲಾನ್ ಹಗ್ಗದಿಂದ ಕಟ್ಟಿರುವುದು ಪತ್ತೆಯಾಗಿದೆ.
ಆರೇಳು ವರ್ಷಗಳ ಹಿಂದೆ ರತ್ನಾ ಶೆಟ್ಟಿ ಗಂಡ ತೀರಿಕೊಂಡಿದ್ದರು. ಆನಂತರ ಬಾಡಿಗೆ ಮನೆಯಲ್ಲಿದ್ದು ಹೊಟೇಲ್ ಕೆಲಸ ಮಾಡುತ್ತ ಜೀವನ ಮಾಡುತ್ತಿದ್ದರು. ಮಗ ಕೆಲವೊಮ್ಮೆ ಮನೆಗೆ ಬಂದು ಇರುತ್ತಿದ್ದ.
Mother killed at Kateel in Mangalore, Ganja Son suspected for killing.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm